ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಯೋಗವು ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆಯಾಗಿದ್ದು ಯೋಗಾಭ್ಯಾಸವನ್ನು ಪ್ರತಿದಿನ ರೂಡಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನಗೊಳ್ಳುತ್ತದೆ. ಆರೋಗ್ಯಕರ ಜೀವನ ಶೈಲಿಗೆ ದಾರಿದೀಪವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ನಾಗರಬೇಟ್ಟ ಹೇಳಿದರು.
ನಗರದ ಕಾವ್ಯ ಸಮೂಹ ಶಿಕ್ಷಣ ಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಡಶಾಲೆಯ ಆವರಣದಲ್ಲಿ ರವಿವಾರ ಅಂತರಾಷ್ಟ್ರೀಯ ಯೋಗ ದಿನದ ನಿಮಿತ್ಯ ಹಮ್ಮಿಕೊಂಡ ಯೋಗ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದಿನ ಕುಲಶಿತ ಆಹಾರ ಸೇವನೆಯಿಂದ ಅನಾರೋಗ ಪಿಡಿತರಾಗುತ್ತಿದ್ದೇವೆ.ಆದರೆ ಯೋಗದಿಂದ ನಮ್ಮ ದೇಹ ಮತ್ತು ಮನಸ್ಸು ಲವಲವಿಕೆಯಿಂದ ವಿಜೃಂಬಿಸುತ್ತದೆ. ನಿತ್ಯ ಯೋಗ ಮಾಡುವುದರಿಂದ ಮನುಷ್ಯನ ಆಯುಷ್ಯ ವೃದ್ಧಿಯಾಗುತ್ತದೆ ಎಂದರು.
ಈ ಸಂಧರ್ಭದಲ್ಲಿ ಶಿಕ್ಷಕರಾದ ಕಾವ್ಯ ರಾವುರ, ಅಂಬಿಕಾ ಕುಲಕರ್ಣಿ, ವಿನಾಯಕ ಬಜಂತ್ರಿ, ಅಶೋಕ ನಾವಿ ಅವರು ವಿದ್ಯಾರ್ಥಿಗಳಿಗೆ ಯೋಗದ ವಿವಿಧ ಪ್ರಾತ್ಯಕ್ಷಿಕೆಗಳನ್ನು ಮಾಡಿ ತೊರಿಸಿ ಅದರ ಉಪಯೋಗ ವಿವರಿಸಿದರು. ಕಾರ್ಯಕ್ರಮದಲ್ಲಿ ಸಂಗಮೇಶ್ಡರ ಪಾರ್ಮಾ ಮಹಾವಿದ್ಯಾಲಯದ ಪ್ರಾಚಾರ್ಯ ಸಂದೀಪ ಚಾಂದಕವಟೆ, ಸುಮಾ ವಸ್ತ್ರದ, ರೇಣುಕಾ ಬಡಾನೂರ, ಮುಬಿನಾ, ಉಮಾ ಸೇರಿದಂತೆ ವಿದ್ಯಾಥಿಗಳು ಭಾಗವಹಿಸಿದ್ದರು.
ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆ
ಸಿಂದಗಿ ಪಟ್ಟಣದ ರಾಂಪೂರ ರಸ್ತೆಯಲ್ಲಿರುವ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಈ ವೇಳೆ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ, ಸಂಸ್ಥೆಯ ನಿರ್ದೇಶಕ ಪಿ.ಡಿ.ಕುಲಕರ್ಣಿ, ಶಾಲೆಯ ಮುಖ್ಯ ಗುರುಮಾತೆ ಎಸ್.ಆಯ್.ಅಸ್ಕಿ, ಎಮ್.ಪಿ.ಬುಕ್ಕಾ, ಶಿಕ್ಷಕರಾದ ಸತೀಶ ಕುಲಕರ್ಣಿ, ಅಲ್ತಾಫ್ ತಾಂಬೋಳಿ, ಕಿರಣ ಕುಲಕರ್ಣಿ, ಸಂತೋಷ ಕುಂಟೋಜಿ ಸೇರಿದಂತೆ ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿಗಳು ಇದ್ದರು.
ಶಾಂತವೀರ ಪಟ್ಟಾಧ್ಯಕ್ಷರ ಕನ್ಯಾ ಪ್ರೌಢಶಾಲೆ
ನಗರದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಶಾಂತವೀರ ಪಟ್ಟಾಧ್ಯಕ್ಷರ ಕನ್ಯಾ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ ಮಾಡಲಾಯಿತು.
ಈ ವೇಳೆ ಮುಖ್ಯಗುರು ಎಸ್.ಆರ್.ನಾಯಕ, ಶಿಕ್ಷಕರಾದ ಆರ್.ವಾಯ್.ಪರೀಟ್, ಎಸ್.ಎಸ್.ಹತ್ತಿ, ಎಸ್.ವ್ಹಿ.ಮಿರ್ಜಿಕರ, ಎಸ್.ಡಿ.ರಾಠೋಡ, ಡಿ.ಬಿ.ಗಣಾಚಾರಿ, ಸುನೀಲ ನಾಗಾವಿ, ಚೈತನ್ಯಾ ಚಿಂಚೋಳ್ಳಿ ಆರ್.ಎಸ್.ಎಮ್ಮಿ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಇದ್ದರು.
ಎಚ್.ಜಿ.ಗಂಡು ಮಕ್ಕಳ ಶಾಲೆ
ನಗರದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಗಂಡು ಮಕ್ಕಳ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಈ ವೇಳೆ ಉಪಪ್ರಾಚಾರ್ಯ ಬಿ.ಎ.ಕೂಗೆ, ಶಿಕ್ಷಕರಾದ ಆರ್.ಎಸ್.ಕಾರಜೋಳ, ಎಮ್.ವ್ಹಿ.ಅಡಗಲ್ಲ, ಎಮ್.ಎಸ್.ಧುಮಕನಾಳ, ಸುಮಯ್ಯಾ ವಿಜಾಪೂರ, ಆರ್.ಬಿ.ಸಿಂದಗಿಕರ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಇದ್ದರು.
ಸಂಗಮೇಶ್ವರ ವಿದ್ಯಾಲಯ
ನಗರದ ಸಂಗಮೇಶ್ವರ ವಿದ್ಯಾಲಯದ ಸಪ್ತಗಿರಿ ಹಿರಿಯ ಪ್ರಾಥಮಿಕ ಹಾಗೂ ಮಲ್ಲಿಕಾರ್ಜುನ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಈ ವೇಳೆ ಸಂಚಾಲಕ ಗುರುನಾಥ ಅರಳಗುಂಡಗಿ, ಶಿಕ್ಷಕ ಎಸ್.ವಾಯ್ ತಾಳಿಕೋಟಿ, ಶಂಕರ ಮಡ್ನಳ್ಳಿ ಸೇರಿದಂತೆ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಇದ್ದರು.
ಶ್ರೀಗುರು ಕೃಪಾ ಶಾಲೆ
ಸಿಂದಗಿ ನಗರದ ಸೋಂಪುರ ರಸ್ತೆಯಲ್ಲಿರುವ ಶ್ರೀಗುರು ಕೃಪಾ ಆಂಗ್ಲಮಾದ್ಯಮ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಈ ವೇಳೆ ಸಂಸ್ಥೆಯ ಆಡಳಿತಾಧಿಕಾರಿ, ಎಚ್.ಜಿ.ಪೊದ್ದಾರ, ಮುಖ್ಯಗುರುಮಾತೆ ಹೇಮಾ ಪೊದ್ದಾರ, ವಾಸವಿ ಕುಲಕರ್ಣಿ, ಶೃತಿ ಕುಲಕರ್ಣಿ, ಸೌಮ್ಯ ಪೋದ್ದಾರ, ಪ್ರಸನ್ನ ಕುಲಕರ್ಣಿ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

