Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ

ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ

ಆನ್ ಲೈನ್-ಆಪ್ ಲೈನ್ ಮಾರುಕಟ್ಟೆ: ಒಣದ್ರಾಕ್ಷಿ ವಹಿವಾಟು ಭಾರಿ ಏರಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗೋಳಗುಮ್ಮಟದ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ
(ರಾಜ್ಯ ) ಜಿಲ್ಲೆ

ಗೋಳಗುಮ್ಮಟದ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಧಾರವಾಡ ವಲಯದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಶೀರ್ಷಿಕೆಯಡಿ ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಯೋಗ ದಿನ ಆಚರಿಸಲಾಯಿತು.
ಸಂಸ್ಕೃತಿ ಮಂತ್ರಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣ ಅಧೀನದಲ್ಲಿರುವ ದೇಶದ ೧೦೦ ಐತಿಹಾಸಿಕ ತಾಣಗಳಲ್ಲಿ ವಿಶೇಷ ಯೋಗ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಪರಂಪರೆ ಸಂಯೋಜಿತ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಬಾದಾಮಿ ಗುಹೆಗಳು, ಐಹೊಳೆ ದುರ್ಗಾ ದೇವಾಲಯ ಮತ್ತು ಪಟ್ಟದಕಲ್ಲಿನ ದೇವಾಲಯಗಳ ಸಮೂಹಗಳಲ್ಲಿ ಯೋಗ ಕಾರ್ಯಕ್ರಮಗಳು ಏಕಕಾಲಕ್ಕೆ ನಡೆದವು.
ಈ ವರ್ಷದ ಆಚರಣೆಯ ಮುಖ್ಯ ಉದ್ದೇಶವು ಯೋಗದ ಮೂಲಕ ದೀರ್ಘಾಯುಷ್ಯ, ಸಕ್ರಿಯ ಜೀವನಶೈಲಿ ಹಾಗೂ ಎಲ್ಲಾ ತಲೆಮಾರುಗಳ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತೇಜಿಸುವುದಾಗಿದೆ.
ನಗರದ ಗೋಳಗುಮ್ಮಟದಲ್ಲಿ ಬೆಳಗ್ಗೆ ೬:೨೦ ರಿಂದ ೭ರವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ದಿನಾಚರಣೆಯ ಕುರಿತು ಮಾತನಾಡುವ ನೇರಪ್ರಸಾರದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವಿಜಯಪುರ ಉಪವಿಭಾಗದ ಸಹಾಯಕ ಆಯುಕ್ತರು ಗುರುನಾಥ ದಡ್ಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಯೋಗ ಗುರು ಸುರೇಶ್ ಆನಂದಿ, ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿ ತರಬೇತಿ ನೀಡಿದರು.
ಭಾರತೀಯ ಪುರಾತತ್ವ ಸರ್ವೇಕ್ಷಣ, ಧಾರವಾಡ ವಲಯದ ಉಪ ಅಧೀಕ್ಷಕ ಪುರಾತತ್ವ ಅಭಿಯಂತರ ಎನ್. ಬಿ. ಡಿ. ಕೆಂಪಗೌಡ ಅವರು ವಿಜಯಪುರದ ಯೋಗ ದಿನಾಚರಣೆಯ ನೋಡಲ್ ಅಧಿಕಾರಿಯಾಗಿದ್ದರು. ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರ ರಾಷ್ಟ್ರೀಯ ಅಧ್ಯಕ್ಷ ಡಾ. ಜಾವಿದ್ ಜಮಾದಾರ್, ಬಿಎಲ್ ಡಿಇ ಸಂಸ್ಥೆಯ ಶ್ರೀಮಂತಿ ಬಂಗಾರಮ್ಮ ಸಜ್ಜನ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ವೈ. ತಮ್ಮಣ್ಣ, ಹಾಗೂ ಅಣು ವಿಜ್ಞಾನ ಮತ್ತು ಶಾಂತಿ ಕುರಿತ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಶಿಫಾ ಜಮಾದಾರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ವಸತಿನಿಲಯ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿಕಾಸ್ ಹೈಸ್ಕೂಲ್ ಹಾಗೂ ವಿವಿಧ ಶಾಲೆಯ ಸುಮಾರು ೫೦೦ ಹೆಚ್ಚು ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ

ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ

ಆನ್ ಲೈನ್-ಆಪ್ ಲೈನ್ ಮಾರುಕಟ್ಟೆ: ಒಣದ್ರಾಕ್ಷಿ ವಹಿವಾಟು ಭಾರಿ ಏರಿಕೆ

ಇಂದು ಬರಪೀಡಿತ ಸ್ಥಳಗಳಿಗೆ ಸಚಿವ ಎಂ.ಬಿ.ಪಾಟೀಲ ಭೇಟಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಆನ್ ಲೈನ್-ಆಪ್ ಲೈನ್ ಮಾರುಕಟ್ಟೆ: ಒಣದ್ರಾಕ್ಷಿ ವಹಿವಾಟು ಭಾರಿ ಏರಿಕೆ
    In (ರಾಜ್ಯ ) ಜಿಲ್ಲೆ
  • ಇಂದು ಬರಪೀಡಿತ ಸ್ಥಳಗಳಿಗೆ ಸಚಿವ ಎಂ.ಬಿ.ಪಾಟೀಲ ಭೇಟಿ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ಅತಿಥಿ ಉಪನ್ಯಾಸಕರ ಸೇವಾ ಭದ್ರತೆ: ಶಿಕ್ಷಣ ಸಚಿವರ ಮೊದಲ ಆದ್ಯತೆಯಾಗಲಿ
    In ವಿಶೇಷ ಲೇಖನ
  • ಹೂ ಎದೆಯ ಚುಂಬಿಸಲು ಇಬ್ಬನಿಯಾಗಿ ಕಾದಿರುವೆ
    In ವಿದ್ಯಾರ್ಥಿ ನಿಧಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026
    In ದಿನಪತ್ರಿಕೆ
  • ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.