ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಯೋಗವು ಭಾರತವು ಜಗತ್ತಿಗೆ ನೀಡಿದ ಅತ್ಯಂತ ಅಮೂಲ್ಯವಾದ ಕೊಡುಗೆಯಾಗಿದ್ದು, ದೈಹಿಕ ಸದೃಢತೆಯ ಜೊತೆಗೆ ಮಾನಸಿಕ ಶಾಂತಿ ಹಾಗೂ ಆಧ್ಯಾತ್ಮಿಕ ಬೆಳವಣಿಗೆಯನ್ನು ನೀಡುವ ಮಹಾನ್ ಪರಂಪರೆಯಾಗಿದೆ ಎಂದು ಬಿಎನ್ಬಿ ಫೌಂಡೇಶನ್ ಅಧ್ಯಕ್ಷ ಹಾಗೂ ಯುವ ಮುಖಂಡ ಶ್ರೀಶೈಲಗೌಡ ಬಿರಾದಾರ ಹೇಳಿದರು.
ನಗರದ ಜ್ಯೋತಿಮಂಗಲ ಕಾರ್ಯಾಲಯದಲ್ಲಿ ಲಿಟಲ್ ವಿಂಗ್ಸ್ ಸ್ಕೂಲ್ ಮತ್ತು ಬಿ ಎನ್ ಬಿ ಫೌಂಡೇಶನ್ ಸಹಯೋಗದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸಿ ಅವರು ಮಾತನಾಡಿದರು.
ಭಾರತದ ಯೋಗಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆತಿದ್ದು, ವಿಶ್ವದಾದ್ಯಂತ ಜನರು ಯೋಗಾಭ್ಯಾಸದ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಅತಿಥಿಯಾಗಿ ಮಾತನಾಡಿದ ಶಿಕ್ಷಕ ಸಿದ್ದು ಚಿಂಚೋಳಿ, ಯೋಗವು ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಆರೋಗ್ಯವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುತ್ತದೆ ಎಂದು ತಿಳಿಸಿದರು.
ಯುವ ಮುಖಂಡ ರಜತ ತಾಂಬೆ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಮಲ್ಲಣ್ಣ ಮನಗೂಳಿ, ಶೇಕುಂತಲಾ ಹಿರೇಮಠ, ಶಿಕ್ಷಣ ಸುಧಾರಣಾ ಸಮಿತಿ ಸದಸ್ಯ ಹಾಗೂ ಶಿಕ್ಷಕ ಸಿದ್ಧಲಿಂಗ ಚೌಧರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ಗುರುಮಾತೆ ಪೂಜಾ ಗಾಯಕ್ವಾಡ ಸ್ವಾಗತಿಸಿದರು. ಅಕ್ಷತಾ ಚೌಹಾಣ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಅಧ್ಯಕ್ಷ ಅಭಿಷೇಕ್ ಚೌಧರಿ ವಂದಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕಿ ಭಾರತಿ ಚೌಧರಿ, ಸುಷ್ಮಾ ಚೌಧರಿ, ಶಿಕ್ಷಕಿಯರಾದ ಸಂಧ್ಯಾ ಪತ್ತಾರ, ಕೀರ್ತಿಕಾ ಚೌಧರಿ, ಅಮೃತ ಯಾತನೂರ, ವಿದ್ಯಾ ಜಂಗಿನಮಠ, ಮಂಗಳ ಮುಗುರುಮುಖಾನೆ, ಪೂಜಾ ಪಾಟೀಲ, ನಾಗರೇಖಾ ನೆಲೋಗಿ, ಭಾಗ್ಯಾ ಆನಗೊಂಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

