ಉದಯರಶ್ಮಿ ದಿನಪತ್ರಿಕೆ
ಆಲಮೇಲ: ನೂತನ ತಾಲೂಕಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಿದ ಶಾಸಕ ಅಶೋಕ ಮನುಗುಳಿ ಅವರ ಅವಧಿಯಲ್ಲಿ ಪ್ರಾರಂಭಗೊಂಡ ಕಾಮಗಾರಿಗಳು ಅವರ ಅವಧಿಯಲ್ಲಿ ಉದ್ಘಾಟನೆ ಗೊಳ್ಳಲಿವೆ ಎಂದು ಪಟ್ಟಣ ಪಂಚಾಯತ್ ಅಧ್ಯಕ್ಷ ಸಾಧಿಕ ಸುಂಬಡ ಹೇಳಿದರು. ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.
ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ ಹಾಗೂ ಉದ್ಘಾಟನೆ ಮಾಡಲು ಆಗಮಿಸುತ್ತಿರುವ ಸಚಿವರುಗಳು ಅಭಿವೃದ್ಧಿ ಕೆಲಸಗಳನ್ನು ವೀಕ್ಷಿಸಲಿದ್ದಾರೆ. ಎಲ್ಲಾ ಕಾರ್ಯಕ್ರಮಗಳು ಪಟ್ಟಣದಲ್ಲಿ ಜರುಗಲಿದ್ದು ಪಟ್ಟಣದ ಜನರು ಸೇರಿದಂತೆ ತಾಲೂಕಿನ ವಿವಿಧ ಗ್ರಾಮದ ಜನರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.
ಪಟ್ಟಣದಲ್ಲಿ 20 ಕೋಟಿ ವೆಚ್ಚದಲ್ಲಿ ಸದಾಶಿವ ಗೌಡ ರಾಜ್ಯ ಮುಖ್ಯ ರಸ್ತೆ ಅಗಲೀಕರಣದಲಿ, ದಂಬರಿಕಾರಣ, ವಿದ್ಯುತ್ ವ್ಯೆವಸ್ಥೆ ನಿರ್ಮಾಣಕೆ ಅನೇಕ ಬಡ ಜನರ ಮನೆಗಳು ಅಂಗಡಿಗಳು ದೇವಸ್ಥಾನ ಸ್ಮಶಾನ ಜಾಗವನ್ನು ಸ್ವಯಂ ಪ್ರೇರಿತವಾಗಿ ತೆರವುಗೊಳಿಸಿ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಅವರಿಗೆ ಪಟ್ಟಣ ಪಂಚಾಯಿತಿ ವತಿಯಿಂದ ಧನ್ಯವಾದಗಳು ಅರ್ಪಿಸಲಿದ್ದೇವೆ. ಆಲಮೇಲ ತೋಟಗಾರಿಕೆ ಕಾಲೇಜು ಕಟ್ಟಡದ ಭೂಮಿ ಪೂಜೆ, ತಾಲೂಕಿನ ಕಡಣಿ ಬ್ರಿಜ್ ನಿರ್ಮಾಣದ ಭೂಮಿ ಪೂಜೆ, ಪಟ್ಟಣದ ಪ್ರಮುಖ ಎರಡು ರಸ್ತೆಗಳ ಸಿಸಿ ರಸ್ತೆಗಳ ನಿರ್ಮಾಣದ ಭೂಮಿ ಪೂಜೆ ನೆರವೇರಿಸಲು ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಬೃಹತ್ ಕೈಗಾರಿಕಾ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ, ಸಿಂದಗಿ ಶಾಸಕ ಅಶೋಕ ಮನಗೊಳಿ ಅನೇಕ ಮುಖಂಡರು ಆಗಮಿಸಲಿದ್ದಾರೆ. ಬೃಹತ್ ಕಾರ್ಯಕ್ರಮದಲ್ಲಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ಜನರು ಆಗಮಿಸಲಿದ್ದಾರೆ ಎಂದು ಹೇಳಿದರು.

