Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೊಲ್ಹಾರ ಇಂದು ವಿದ್ಯುತ್ ವ್ಯತ್ಯಯ

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿ ಡ್ಯಾಂ ಎತ್ತರದ ಹಿನ್ನೀರಿನಿಂದ ಬಾಧಿತರ ಹಿತ ಕಾಪಾಡಲು ಬದ್ಧ
(ರಾಜ್ಯ ) ಜಿಲ್ಲೆ

ಆಲಮಟ್ಟಿ ಡ್ಯಾಂ ಎತ್ತರದ ಹಿನ್ನೀರಿನಿಂದ ಬಾಧಿತರ ಹಿತ ಕಾಪಾಡಲು ಬದ್ಧ

By No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಕೈಗಾರಿಕೆ ಮತ್ತು ಮೂಲಸೌಲಭ್ಯ‌ ಅಭಿವೃದ್ಧಿ ಸಚಿವ‌ ಎಂ.ಬಿ.ಪಾಟೀಲ ಭರವಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಯುಕೆಪಿ 3ನೇ ಹಂತದಲ್ಲಿ ಬರುವ ಆಲಮಟ್ಟಿ ಜಲಾಶಯ ಎತ್ತರದ ಹಿನ್ನೀರಿನಿಂದ ಬಾಧಿತವಾಗುವ ಎಲ್ಲ ಗ್ರಾಮಸ್ಥರ ಹಿತ ಕಾಪಾಡಲು ಬದ್ಧನಾಗಿದ್ದೇನೆ ಎಂದು ಕೈಗಾರಿಕೆ ಮತ್ತು ಮೂಲಸೌಲಭ್ಯ‌ ಅಭಿವೃದ್ಧಿ ಸಚಿವ‌ ಎಂ. ಬಿ. ಪಾಟೀಲ ತಿಳಿಸಿದ್ದಾರೆ‌.
ಬುಧವಾರ ತಮ್ಮ ಗೃಹ ಕಚೇರಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ಥರ ಹೋರಾಟ ಸಮಿತಿ‌ ಪದಾಧಿಕಾರಿಗಳು ಮತ್ತು ರೈತರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಳ ಮತ್ತು ನೀರು‌ ಹಂಚಿಕೆ ಕುರಿತು 2010ರಲ್ಲಿ ತೀರ್ಪು ಬಂದಿತ್ತು. ನಂತರ 2013ರಲ್ಲಿ ನಾನು ಜಲಸಂಪನ್ಮೂಲ‌ ಸಚಿವನಾಗಿದ್ದಾಗ ಒಟ್ಟು‌ 130 ಟಿಎಂಸಿ ನೀರು‌ ಹಂಚಿಕೆಯಾಗಿತ್ತು. ಇದರಿಂದ 1.30 ಲಕ್ಷ ಎಕರೆ ಭೂಸ್ವಾಧೀನ ಅಗತ್ಯವಾಗಿತ್ತು. ಪ್ರತಿ‌ ಎಕರೆ ಒಣಬೇಸಾಯ ಜಮೀನಿಗೆ ರೂ. 8 ಲಕ್ಷ ಮತ್ತು ನೀರಾವರಿ‌ ಜಮೀನಿಗೆ ರೂ. 12 ಲಕ್ಷ ನಿಗದಿ ಪಡಿಸಲಾಗಿತ್ತು. ಆದರೆ, ಅಂದು ಹಣಕಾಸು ಇಲಾಖೆ ಸಧ್ಯಕ್ಕೆ ಆರ್ಥಿಕವಾಗಿ ಯೋಜನೆ ಜಾರಿ ಮತ್ತು ಪರಿಹಾರ ಕಾರ್ಯಸಾಧುವಲ್ಲ ಎಂದು ಯೋಜನೆಯನ್ನು ಮುಂದೂಡಿತ್ತು. ‌ಆದರೆ, 2023ರಲ್ಲಿ ನಮ್ಮ ಸರಕಾರ ಮತ್ತೆ ಅಧಿಕಾರಕ್ಕೆ ಬಂದ ಮೇಲೆ ನಾನು ಅಂದಿನ ಸಿಎಂ ಸಿದ್ಧರಾಮಯ್ಯ, ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ ಅವರಿಗೆ ಒತ್ತಡ ತಂದು ಹೊಸ ನಿಗದಿತ ದರದಂತೆ ಒಣಬೇಸಾಯ‌ ಜಮೀನಿಗೆ ರೂ. 30 ಲಕ್ಷ ಮತ್ತು ನೀರಾವರಿ ಭೂಮಿಗೆ ರೂ. 40 ಲಕ್ಷ ಪರಿಹಾರ ನೀಡಲು ಕ್ರಮ ಕೈಗೊಂಡಿದ್ದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಬಬಲೇಶ್ವರ ತಾಲೂಕಿನ ಬಾಧಿತ ಗ್ರಾಮಗಳಿಗೆ ಸೂಕ್ತ ಪರಿಹಾರ ಒದಗಿಸಲು ನಾನಾ ಹಂತಗಳಲ್ಲಿ ಅಧಿಸೂಚನೆ ಹೊರಡಿಸಲು ಕ್ರಮ ಕೈಗೊಳ್ಳಲು ಕಾರ್ಯೋನ್ಮುಖನಾಗಿದ್ದೇನೆ ಎಂದು ಅವರು ತಿಳಿಸಿದರು.
ಆಲಮಟ್ಟಿ ಜಲಾಶಯವನ್ನು 524.256 ಮೀಟರ್ ಗೆ ಹೆಚ್ಚಳ ಮಾಡುವುದರಿಂದ ಅಣೆಕಟ್ಟೆಯ ಹಿನ್ನೀರಿನಲ್ಲಿ‌ ಒಟ್ಟು 75,563 ಎಕರೆ ಜಮೀನು‌ ಮುಳುಗಡೆಯಾಗುವ ಸಾಧ್ಯತೆಯಿದೆ. ಅದರಂತೆ ಈ ವರ್ಷದಲ್ಲಿ 49 ಗ್ರಾಮಗಳ ಅಂದಾಜು‌ 15000 ಎಕರೆ ಜಮೀನಿಗೆ ಪರಿಹಾರ ಪಾವತಿಸುವ ಸಾಧ್ಯತೆ ಇದೆ. ಅಲ್ಲದೇ, 2026-27 ಮತ್ತು 2027-28ನೇ ಆರ್ಥಿಕ‌ ವರ್ಷದಲ್ಲಿ ಒಟ್ಟು 79 ಗ್ರಾಮಗಳು ಪ್ರಾಥಮಿಕ ಅಧಿಸೂಚನೆ 11(1) ಅವಾರ್ಡ್ ವರೆಗೆ ನಾನಾ ಹಂತಗಳಲ್ಲಿವೆ. ಅದರಲ್ಲಿ ವಿಜಯಪುರ ಜಿಲ್ಲೆಯ 31 ಗ್ರಾಮಗಳ ಪೈಕಿ ಆರು ಗ್ರಾಮಗಳು ಮಾತ್ರ ಸೇರಿವೆ. 14 ಕಂದಾಯ ಮತ್ತು‌ ಒಂದು ಉಪಗ್ರಾಮಗಳು ಮುಳುಗಡೆ ವ್ಯಾಪ್ತಿಗೆ ಬರುತ್ತವೆ. ಒಟ್ಟು 75563 ಎಕರೆ ಪೈಕಿ ಬಬಲೇಶ್ವರ ತಾಲೂಕಿನ 5600 ಎಕರೆ ಭೂಸ್ವಾಧೀನವಾಗುತ್ತಿದ್ದು, 49 ಗ್ರಾಮಗಳಿಗೆ ಅಂದಾಜು ರೂ. 3000 ಕೋ. ಪರಿಹಾರ ಪಾವತಿ ಸಂದರ್ಭದಲ್ಲಿ ಕನಿಷ್ಠ 1000 ಎಕರೆಗೆ ಸರಾಸರಿ ರೂ. 500 ಕೋ. ಪರಿಹಾರ ಮೀಸಲಿಡಲು ಕೇಳಿದ್ದೇನೆ. ಅಲ್ಲದೇ, ಈಗಾಗಲೇ 11(1) ಪ್ರಾಥಮಿಕ ಅಧಿಸೂಚನೆ ಜಾರಿಯಾಗಿ ನಾನಾ ಹಂತಗಳಲ್ಲಿರುವ ಶಿರಬೂರ, ಕಣಬೂರ, ಚಿಕ್ಕಗಲಗಲಿ ಮತ್ತು ಬಾಕಿ ಉಳಿದ 10 ಗ್ರಾಮಗಳಿಗೂ ಸಹ 11(1) ಅಧಿಸೂಚನೆ ಜಾರಿ ಮಾಡಲು‌ ಸರಕಾರ ಮುಂದಾಗಿದೆ ಎಂದು ಅವರು ತಿಳಿಸಿದರು.
ಯುಕೆಪಿ 3ನೇ ಹಂತದ ಜಾರಿಗೆ ಹಿಂದೆಯೂ ಕೆಲಸ ಮಾಡಿದ್ದೇನೆ. ಈಗಲೂ ಮಾಡುತ್ತಿದ್ದೇನೆ. ಯೋಜನೆ ಪೂರ್ಣಗೊಳ್ಳುವವರೆಗೂ ಕಾರ್ಯೋನ್ಮುಖನಾಗಿರುತ್ತೇನೆ ಎಂದು ಸಚಿವ ಎಂ. ಬಿ. ಪಾಟೀಲ ರೈತರಿಗೆ ಅಭಯ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹೋರಾಟ ಸಮಿತಿ ಮುಖಂಡರಾದ ಅದೃಶ್ಯಪ್ಪ, ರಾಜೇಂದ್ರ ದೇಸಾಯಿ ಹಾಗೂ ಶಂಕರಗೌಡ ಪಾಟೀಲ‌ ಶಿರಬೂರ ಆದಷ್ಡು ಬೇಗ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಒದಗಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮುತ್ತು ದೇಸಾಯಿ, ವಿ. ಎಚ್. ಬಿದರಿ, ಜೀರಗಾಳ ವಕೀಲರು, ಕೆ. ಸಿ. ದೇಸಾಯಿ, ಅಶೋಕ ಮಲಘಾಣ, ಕುಮಾರ ದೇಸಾಯಿ, ರಾಮಚಂದ್ರ ಕೊಡಬಾಗಿ, ಬಿ. ಡಿ. ಪಾಟೀಲ, ಬಿ. ಆರ್. ದೇಸಾಯಿ, ಗಿರೀಶ ಪಾಟೀಲ, ಕೆ. ಬಿ. ಪಾಟೀಲ, ಎಲ್. ಎಚ್. ಜಿಗದಾಣಿ, ಪಾಂಡಪ್ಪ ಬಿರಾದಾರ ಹೊಸೂರ, ಎಂ. ಎಚ್. ಪಾಟೀಲ ಲಿಂಗದಳ್ಳಿ, ಸಂಗನಗೌಡ ಪಾಟೀಲ, ವಿಠ್ಠಲ ಶೆಬಾನಿ, ಹನಮಂತ ಕತ್ತಿ, ಶ್ರೀಶೈಲ ⁠ಸುಳ್ಳದ, ಹನಮಂತ ಹಂಚಿನಾಳ, ಶ್ರೀನಿವಾಸ ನಿಡೋಣಿ, ರಮೇಶ ಯರಗಟ್ಟಿ ಹೊಸೂರು, ಹನಮಂತ ಚೊಳಪ್ಪಗೋಳ ಮುಂತಾದವರು ಉಪಸ್ಥಿತರಿದ್ದರು.

ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಬದ್ಧ

ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಈ ಭಾಗದ ಅಸ್ಮಿತೆಯಾಗಿದ್ದು, ಸಂಕಷ್ಟದಲ್ಲಿರುವ ಕಾರ್ಖಾನೆಯ ಉಳಿವಿಗಾಗಿ ವಿಶೇಷ ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಅಲ್ಲದೇ, ಇಂಧನ‌ ಸಚಿವ ಕೆ. ಜೆ. ಜಾರ್ಜ್ ಅವರೊಂದಿ ಚರ್ಚಿಸಿ ಕೆ.ಇ.ಆರ್.ಸಿ ಕಾಯಿದೆ ತಿದ್ದುಪಡಿ‌ ತರಲು‌ ಕ್ರಮ ಕೈಗೊಂಡಿದ್ದೇನೆ. ಈ ಕಾರ್ಖಾನೆಯ ಪುನಶ್ಚೇತನಕ್ಕೆ ಬದ್ಧನಾಗಿದ್ದೇನೆ ಎಂದು ಸಚಿವ ಎಂ. ಬಿ. ಪಾಟೀಲ ತಿಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೊಲ್ಹಾರ ಇಂದು ವಿದ್ಯುತ್ ವ್ಯತ್ಯಯ

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ

ಬಿತ್ತನೆ ಬೀಜ ಮಾರಾಟ ಮಳಿಗೆ :ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೊಲ್ಹಾರ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    In (ರಾಜ್ಯ ) ಜಿಲ್ಲೆ
  • ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಿತ್ತನೆ ಬೀಜ ಮಾರಾಟ ಮಳಿಗೆ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರ ಅನುದಾನ ಅಧಿಕಾರಿಗಳು ಸಮರ್ಪಕವಾಗಿ ಬಳಸಿ
    In (ರಾಜ್ಯ ) ಜಿಲ್ಲೆ
  • ಸಾಹಿತ್ಯ ಸಮ್ಮೇಳನಕ್ಕೆ ತಾಲೂಕಾಡಳಿತದ ಸಂಪೂರ್ಣ ಸಹಕಾರ
    In (ರಾಜ್ಯ ) ಜಿಲ್ಲೆ
  • ಡಿಜಿ ಪ್ರಶಂಸಾ ಪದಕಕ್ಕೆ ಚೆನ್ನಬಸವಣ್ಣ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಸಂಸ್ಥೆಗಳಿಗೆ ಎಲ್ಲರ ಸಹಕಾರ ಅಗತ್ಯ :ಅಂಗಡಿ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ತುಂಬಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಹದಗೆಟ್ಟ ರಸ್ತೆ ಸುಧಾರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.