Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿತ್ತನೆ ಬೀಜ ಮಾರಾಟ ಮಳಿಗೆ: ಅರ್ಜಿ ಆಹ್ವಾನ

ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ

ಶಿಕ್ಷಕರಿಗೆ ಮೊಟ್ಟೆ ಭಾರ; ಹೆಚ್ಚುವರಿ ಹಣ ಬಿಡುಗಡೆಗೆ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೂ.೩೦ ರಂದು ಮೂಕೀಹಾಳ ಗ್ರಾಪಂ ಎದುರು ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಜೂ.೩೦ ರಂದು ಮೂಕೀಹಾಳ ಗ್ರಾಪಂ ಎದುರು ಪ್ರತಿಭಟನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ನಡಹಳ್ಳಿ ಮಾಹಿತಿ

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸಂಘಟನೆಯ ನೇತೃತ್ವದಲ್ಲಿ ಇದೇ ದಿ. ೩೦ ರಂದು ತಾಳಿಕೋಟೆ ತಾಲೂಕಿನ ಮೂಕೀಹಾಳ ಗ್ರಾಂ ಪಂಚಾಯ್ತಿ ಎದುರು ಸಾವಿರಾರು ರೈತರೊಂದಿಗೆ ಪಂಚಾಯ್ತಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ(ನಡಹಳ್ಳಿ) ಅವರು ಹೇಳಿದರು.
ಗುರುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ೨೦೧೯ರಿಂದ ಇಲ್ಲಿಯವರೆಗೆ ಮೂಕೀಹಾಳ ಗ್ರಾಪಂ ವ್ಯಾಪ್ತಿಯ ರೈತರು ಪ್ರಧಾನ ಮಂತ್ರಿ ಫಸಲ್ ಭೀಮಾಯೋಜನೆಯ ಇನ್ಸೂರೇನ್ಸ್ ತುಂಬುತ್ತಾ ಬಂದಿದ್ದಾರೆ. ಆದರೆ ಇಲ್ಲಿಯವರೆಗೂ ಕೂಡಾ ರೈತರ ಬೆಳೆಗಳು ಹಾಳಾಗಿ ಹೋಗಿದ್ದರೂ ಇನ್ಸೂರೇನ್ಸ್ ಕಂಪನಿಯಿಂದ ಹಣ ರೈತರಿಗೆ ಜಮೆಯಾಗಿಲ್ಲಾ ಇದಕ್ಕೆ ಮುಖ್ಯ ಕಾರಣವೇನೆಂಬುದು ಬೇಕಾಗಿದೆ. ಬೆಳೆ ಹಾನಿ ವರದಿ ಸಲ್ಲಿಸಬೇಕಾದ ಗ್ರಾಪಂ ಅಭಿವೃದ್ದಿ ಅಧಿಕಾರಿಗಳು, ಕೃಷಿ ಇಲಾಖಾ ಅಧಿಕಾರಿಗಳು ಗ್ರಾಮಾಡಳಿತ ಅಧಿಕಾರಿಗಳು ಇನ್ಸೂರೇನ್ಸ್ ಕಂಪನಿಯ ಏಜಂಟರಂತೆ ಆಗಿದ್ದರ ಪರಿಣಾಮ ರೈತರು ಸಾವಿನ ದವಡೆಗೆ ಸಿಲುಕುವಂತಹ ಪರಸ್ಥಿತಿ ನಿರ್ಮಾಣವಾಗಿದೆ. ಅದಕ್ಕಾಗಿ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ. ಮತ್ತು ಮೂಕೀಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಇದ್ದರೂ ಕೂಡಾ ಯಾವ ಹಳ್ಳಿಗೂ ನೀರು ಮುಟ್ಟುತ್ತಿಲ್ಲಾ ಪ್ರತಿ ತಿಂಗಳು ನಿರ್ವಹಣೆ ಗುತ್ತಿಗೆ ಹಿಡಿದವರು ೫ ಲಕ್ಷಕ್ಕೂ ಅಧಿಕ ಹಣವನ್ನು ಪಡೆದುಕೊಳ್ಳುತ್ತಾ ಸಾಗಿರುವದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಾಣುತ್ತಿದೆ. ಮೂಕೀಹಾಳ ಗ್ರಾಮದಲ್ಲಿ ಪ್ಲೋರಾಯಡ್ ಯುಕ್ತ ನೀರು ಇರುವದರಿಂದ ಜನರು ಅನೇಕ ರೋಗ ರುಜಿನಗಳಿಗೆ ಒಳಗಾಗುತ್ತಿದ್ದಾರೆ. ಇದರ ವ್ಯಾಪ್ತಿಯ ಹರನಾಳ, ಕಲ್ಲದೇವನಹಳ್ಳಿ, ಹಡಗಿನಾಳ ಗ್ರಾಮದ ಜನರು ತಾಳಿಕೋಟೆಗೆ ಹೋಗಿ ನೀರು ತೆಗೆದುಕೊಂಡು ಬಂದು ಕುಡಿಯುತ್ತಾ ಸಾಗಿದ್ದಾರೆ. ಈ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು ೧೧ ಶುದ್ದ ಕುಡಿಯುವ ನೀರಿನ ಘಟಕಗಳಿದ್ದರೂ ಒಂದೂ ಚಾಲೂ ಸ್ಥಿತಿಯಲ್ಲಿಲ್ಲ. ಕೋಟ್ಯಾಂತ ರೂಪಾಯಿ ಹಣ ಅಧಿಕಾರಿಗಳು ನುಂಗಿ ನೀರು ಕುಡಿದಿದ್ದಾರೆಂದು ಆರೋಪಿಸಿದರು.
ಮೂಕೀಹಾಳ ಗ್ರಾಪಂ ವ್ಯಾಪ್ತಿಯಲ್ಲಿ ರೈತಪರ ಚಿಂತನೆಗಳೊಂದಿಗೆ ಇದೇ ದಿ.೩೦ ರಂದು ಮೂಕೀಹಾಳ ಗ್ರಾಪಂ ಎದುರು ಹೋರಾಟವನ್ನು ನಮ್ಮ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದು ಅಂದಿನ ದಿನ ನಡೆಯುವ ಹೋರಾಟಕ್ಕೆ ಅಧಿಕಾರಿಗಳು ಆಗಮಿಸಿ ಸ್ಪಂದಿಸದಿದ್ದರೆ ರಾಜ್ಯ ಹೆದ್ದಾರಿ ತಡೆದು ಹೋರಾಟ ಮಾಡುತ್ತೇವೆ. ಅಂದು ಸುಮಾರು ೨ ಸಾವಿರಕ್ಕೂ ಅಧಿಕ ರೈತರು ಭಾಗಿಯಾಗಲಿದ್ದಾರೆಂದು ತಿಳಿಸಿದರು.
ಕರ್ನಾಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಕಲ್ಲು ಸೋನ್ನದ, ಜಿಲ್ಲಾ ಅಧ್ಯಕ್ಷ ಸಂಗಮೇಶ ಸಗರ ಅವರು ೩೦ ರಂದು ನಡೆಯಲಿರುವ ಹೋರಾಟದ ರೂಪರೇಶೆಗಳ ಕುರಿತು ಮಾತನಾಡಿದರು.
ಈ ಸಮಯದಲ್ಲಿ ಸಂಘಟನೆಯ ತಾಲೂಕಾ ಅಧ್ಯಕ್ಷ ಶ್ರೀಶೈಲ ವಾಲಿಕಾರ, ಯುವ ಅಧ್ಯಕ್ಷ ದೇವರಾಜ ಗುಂಡಕನಾಳ, ಉಮೇಶ ಮಕಾಳಿ, ಹಣಮಂತ ಗೋನಾಳ, ಯಲ್ಲು ಹಡಗಿನಾಳ, ಹಣಮಂತ್ರಾಯ ಮಕಾಳೆ, ಬಸವರಾಜ ಮಕಾಳೆ, ಮಹ್ಮದಹನಿಫ್ ಮುಲ್ಲಾ, ಮೈಬು ಅವಟಿ, ದೇವಣ್ಣ ಮೇಟಿ, ಸತೀಶ ಬಡಿಗೇರ, ಪರಸು ಕೊಡಕೇಲ್ಲ ಮೊದಲಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿತ್ತನೆ ಬೀಜ ಮಾರಾಟ ಮಳಿಗೆ: ಅರ್ಜಿ ಆಹ್ವಾನ

ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ

ಶಿಕ್ಷಕರಿಗೆ ಮೊಟ್ಟೆ ಭಾರ; ಹೆಚ್ಚುವರಿ ಹಣ ಬಿಡುಗಡೆಗೆ ಆಗ್ರಹ

ಇಂಡಿ ಸರ್ಕಾರಿ ಆಸ್ಪತ್ರೆಗೆ ಸ್ತ್ರೀರೋಗ ತಜ್ಞರ ನೇಮಕಕ್ಕೆ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿತ್ತನೆ ಬೀಜ ಮಾರಾಟ ಮಳಿಗೆ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಮೊಟ್ಟೆ ಭಾರ; ಹೆಚ್ಚುವರಿ ಹಣ ಬಿಡುಗಡೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಇಂಡಿ ಸರ್ಕಾರಿ ಆಸ್ಪತ್ರೆಗೆ ಸ್ತ್ರೀರೋಗ ತಜ್ಞರ ನೇಮಕಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೂಕಬಳಿಕೆ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ
    In (ರಾಜ್ಯ ) ಜಿಲ್ಲೆ
  • ಜೂ.೩೦ ರಂದು ಮೂಕೀಹಾಳ ಗ್ರಾಪಂ ಎದುರು ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಮ್ಮನಳ್ಳಿ ಶಾಲೆ ಭೂಮಿ ಖರೀದಿಗೆ ಶಾಸಕ ಮನಗೂಳಿ ಧನಸಹಾಯ
    In (ರಾಜ್ಯ ) ಜಿಲ್ಲೆ
  • ಅಂದ – ಆರೋಗ್ಯ
    In ಭಾವರಶ್ಮಿ
  • ವಚನಗಳು ಲಿಂಗಾಯತರು ಮತ್ತು ನಾವು
    In ವಿಶೇಷ ಲೇಖನ
  • ಅಮ್ಮಾ ಫೌಂಡೇಶನ್ ಉದ್ಘಾಟನೆ | ತಾಯಂದಿರರ ಪಾದಪೂಜೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.