Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ

ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ

ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ
(ರಾಜ್ಯ ) ಜಿಲ್ಲೆ

ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದಲಿತ ಹೋರಾಟಗಾರ ಹಾಗೂ ಆರ್‌ಪಿಐ ಪಕ್ಷದ ಮುಖಂಡ ಜಿತೇಂದ್ರ ಕಾಂಬಳೆ ಒತ್ತಾಯ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಅವರಿಗೆ ಸಚಿವ ಸ್ಥಾನ ನೀಡಬೇಕು, ಕಟಕಧೋಂಡ ಮೂಲತ: ಇಂಡಿ ತಾಲೂಕಿನವರಾಗಿದ್ದು ಕಟಕಧೋಂಡ ಅವರಿಗೆ ಸಚಿವ ಸ್ಥಾನ ನೀಡಿದರೆ ದಲಿತ ಬಾಂಧವರಿಗೆ ನ್ಯಾಯ ದೊರಕುತ್ತದೆ ಹಾಗೂ ಇಂಡಿ ಮತಕ್ಷೇತ್ರಕ್ಕೆ ಸಚಿವ ಸ್ಥಾನದ ಬರ ಕಳಚುತ್ತದೆ ಎಂದು ದಲಿತ ಹೋರಾಟಗಾರ ಹಾಗೂ ಆರ್‌ಪಿಐ ಪಕ್ಷದ ಮುಖಂಡ ಜಿತೇಂದ್ರ ಕಾಂಬಳೆ ಒತ್ತಾಯಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡೋಹರ ಕಕ್ಕಯ್ಯ ಸಮುದಾಯಕ್ಕೆ ಸೇರಿದ ವಿಠ್ಠಲ ಕಟಕಧೋಂಡ ಸಾತ್ವಿಕ ಹಾಗೂ ಸರಳ ರಾಜಕಾರಣಿ, ಅನೇಕ ವರ್ಷಗಳಿಂದ ರಾಜಕೀಯದಲ್ಲಿರುವ ಅನುಭವಿ ರಾಜಕಾರಣಿ, ಎಲ್ಲ ಸಮುದಾಯಗಳನ್ನು ಪ್ರೀತಿ, ವಿಶ್ವಾಸದಿಂದ ಕಾಣುವ ವ್ಯಕ್ತಿ, ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ, ಆ ಮೂಲಕ ಈ ದಲಿತ ಸಮುದಾಯಕ್ಕೆ ನ್ಯಾಯ ಒದಗಿಸಲು ಸಾಧ್ಯ, ಇಂದಿಗೂ ಪರಿಶಿಷ್ಟ ಜಾತಿಯ ಸಮುದಾಯಗಳಿಗೆ ಕಾಂಗ್ರೆಸ್‌ನಿಂದ ನ್ಯಾಯ ದೊರಕಿಲ್ಲ, ಈ ಸಮುದಾಯದ ಶಾಸಕರು ಸಹ ವಿಜಯಪುರ ಜಿಲ್ಲೆಯಲ್ಲಿ ಇಲ್ಲ, ಹೀಗಾಗಿ ಕಟಕಧೋಂಡರಿಗೆ ಸಚಿವ ಸ್ಥಾನ ನೀಡಬೇಕು ಎಂದರು.
ಇಂಡಿ ಇಲ್ಲಿಯವರೆಗೂ ಸಚಿವ ಸ್ಥಾನವನ್ನೇ ಕಂಡಿಲ್ಲ, ಕಟಕಧೋಂಡ ಅವರು ಮೂಲತಃ ಇಂಡಿ ತಾಲೂಕಿನವರು. ಹೀಗಾಗಿ ಕಟಕಧೋಂಡ ಅವರಿಗೆ ಸಚಿವ ಸ್ಥಾನ ನೀಡಿದರೆ ಈ ಎರಡು ವಿಷಯಗಳಿಗೂ ಆದ್ಯತೆ ದೊರಕಿ ಇಂಡಿಯ ಸಚಿವ ಸ್ಥಾನದ ಬರ ನೀಗಲಿದೆ ಎಂದರು.
ಇನ್ನೊಂದು ಸಚಿವ ಸ್ಥಾನ ಕೊಡಿಸುವುದಾಗಿ ಸಚಿವ ಡಾ.ಎಂ.ಬಿ. ಪಾಟೀಲರು ತಾವು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ದಿನವೇ ಘೋಷಣೆ ಮಾಡಿದ್ದಾರೆ, ಈ ಹಿನ್ನೆಲೆಯಲ್ಲಿ ಸಾಮಾಜಿಕ ನ್ಯಾಯದ ಸೂತ್ರದ ಅಡಿಯಲ್ಲಿ ಕಟಕಧೋಂಡರಿಗೆ ಸಚಿವ ಸ್ಥಾನಕೊಡಿಸಲು ಸಚಿವ ಎಂ.ಬಿ.ಪಾಟೀಲರು ಪ್ರಯತ್ನಿಸಬೇಕು ಎಂದರು.
ಸಿದ್ರಾಮಪ್ಪ ಕಪಾಲಿ, ದತ್ತಾತ್ರೇಯ ಛತ್ರಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ

ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ

ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ

ಸರ್ಕಾರ ಕೂಡಲೇ ಶಿಕ್ಷಣ ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ
    In (ರಾಜ್ಯ ) ಜಿಲ್ಲೆ
  • ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರ ಕೂಡಲೇ ಶಿಕ್ಷಣ ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸಲಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿ
    In (ರಾಜ್ಯ ) ಜಿಲ್ಲೆ
  • ಕಿತ್ತೂರ ರಾಣಿ ಚನ್ನಮ್ಮ ವಿವಿ ಸ್ನಾತಕೋತ್ತರ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದರಿಗೆ ಅಧಿಕಾರಿಗಳಿಂದ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಸ್ನಾತಕ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.