Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಸೋಲೇ ಗೆಲುವಿನ ಸೋಪಾನ ಮರೆಯದಿರಿ
ವಿಶೇಷ ಲೇಖನ

ಸೋಲೇ ಗೆಲುವಿನ ಸೋಪಾನ ಮರೆಯದಿರಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ
– ಸಂತೋಷ್ ರಾವ್ ಪೆರ್ಮುಡ
ಪಟ್ರಮೆ ಗ್ರಾಮ ಮತ್ತು ಅಂಚೆ
ಬೆಳ್ತಂಗಡಿ ತಾಲೂಕು
ದ.ಕ ಜಿಲ್ಲೆ-೫೭೪೧೯೮
ದೂ:೯೭೪೨೮೮೪೧೬೦

ಉದಯರಶ್ಮಿ ದಿನಪತ್ರಿಕೆ

ಜೀವನದಲ್ಲಿ ತಾನು ಕೈಗೆತ್ತಿಕೊಂಡ ಯಾವುದೇ ವ್ಯವಹಾರ ವಹಿವಾಟುಗಳಲ್ಲಿ ಯಶಸ್ಸನ್ನು ಕಾಣದ ವ್ಯಕ್ತಿಯೊಬ್ಬ ಬದುಕಿನ ಆಸೆಯನ್ನು ಕಳೆದುಕೊಂಡು ಒಂಟಿಯಾಗಿ ಮನೆಬಿಟ್ಟು ಹೊರಟುಹೋದ. ನಡೆಯುತ್ತಾ ಹೋದವನು ದೊಡ್ಡದಾದ ಕಲ್ಲಿನ ಗುಹೆಯೊಳಗೆ ಕುಳಿತು ತನ್ನ ಕಷ್ಟಗಳು ಮತ್ತು ಜೀವನದಲ್ಲಿ ಉಂಟಾದ ಸೋಲುಗಳ ಕುರಿತು ಚಿಂತಿಸತೊಡಗಿದ. ಯಾವ ರೀತಿಯಲ್ಲಿ ಯೋಚಿಸಿದರೂ ಕಮರಿ ಹೋಗಿದ್ದ ತನ್ನ ಆತ್ಮಸ್ಥೆöÊರ್ಯ ಚಿಗುರುತ್ತಿರಲಿಲ್ಲ, ಹೊಸ ಉತ್ಸಾಹವೂ ಮೂಡುತ್ತಿರಲಿಲ್ಲ, ಹೊಸ ದಾರಿಯೂ ಕಾಣಿಸುತ್ತಿರಲಿಲ್ಲ. ಬದುಕೆಲ್ಲಾ ಈ ಹತಾಶೆ, ನೋವು, ನಿರಾಶೆ ಮತ್ತು ಸೋಲಿನಲ್ಲೇ ಕಳೆಯಬೇಕೋ ಏನೋ ಎಂದು ಅಧೀರನಾಗಿ ಚಿಂತಿಸುತ್ತಿದ್ದ. ಸೋಲಿನಿಂದ ಕಂಗೆಟ್ಟ ಆತನಿಗೆ ಬೇರೆ ದಾರಿಯೂ ಕಾಣದೇ ಗುಹೆಯ ಮೂಲೆಯಲ್ಲಿ ಕುಳಿತು ಹೊರಗಡೆ ಆಕಾಶದೆಡೆಗೆ ಶೂನ್ಯ ದೃಷ್ಟಿಯಿಟ್ಟು ಕುಳಿತಿದ್ದ.
ಅಲ್ಲಿನ ಸಣ್ಣ ಧ್ವನಿಯೂ ಕೇಳಿಸುವಷ್ಟು ಮೌನವಿದ್ದು, ಸಣ್ಣ ಮಿಸುಕಾಟವೂ ಆತನಿಗೆ ಸ್ಪಷ್ಟವಾಗಿ ಕಾಣಿಸುತ್ತಿತ್ತು. ಆಗ ಗುಹೆಯ ಮೂಲೆಯಲ್ಲಿ ಬೃಹತ್ ಗಾತ್ರದ ಜೇಡವೊಂದು ಬಲೆಯನ್ನು ನೇಯಲು ಬಂಡೆಯನ್ನು ನಿಧಾನವಾಗಿ ಏರುತ್ತಿತ್ತು. ತಕ್ಷಣ ಆಯತಪ್ಪಿ ಜಾರಿ ಕೆಳಗೆ ಬಿತ್ತು. ಈತ ಕುತೂಹಲದಿಂದ ಈಗ ಜೇಡ ಏನು ಮಾಡುವುದೆಂದು ಸೂಕ್ಷ್ಮವಾಗಿ ಗಮನಿಸತೊಡಗಿದ. ಆದರೆ ಆ ಜೇಡ ತಾನು ಕೆಳಗೆ ಬಿದ್ದೇ ಇಲ್ಲವೇನೋ ಎಂಬ ಭಾವದೊಂದಿಗೆ ಮತ್ತೆ ಪ್ರಾರಂಭದಿಂದ ಬಂಡೆಯನ್ನು ಏರುತ್ತಿತ್ತು. ವಿಷಾದದಿಂದ ಕುಳಿತಿದ್ದ ಈತ ಅಯ್ಯೋ ಹುಚ್ಚು ಜೇಡನೇ ಬಂಡೆಯು ಪಾಚಿಗಟ್ಟಿ ಬಹಳಷ್ಟು ಜಾರುತ್ತಿದೆ ಆದರೂ ನೀನು ಮತ್ತೆ ಮತ್ತೆ ಏರಲು ಪ್ರಯತ್ನಿಸುತ್ತಾ ಇದ್ದೀಯಲ್ಲಾ ಎಂದು ಮುಸಿ ನಗತೊಡಗಿದ. ನಿನ್ನ ಛಲವನ್ನು ಮೆಚ್ಚಲೇ ಬೇಕು ಎಂದು ಯೋಚಿಸುತ್ತಿದ್ದಂತೆ ಜೇಡ ಮತ್ತೆ ಆಯತಪ್ಪಿ ಬಿತ್ತು, ಮತ್ತೆ ಸೋಲನ್ನು ಮರೆತು ಪ್ರಾರಂಭದಿಂದ ಹತ್ತಲು ಶುರು ಮಾಡಿತು. ಜೇಡವು ಬೀಳುತ್ತಲೇ ಇತ್ತು, ಮತ್ತೆ ಹತ್ತುತ್ತಲೇ ಇತ್ತು, ಈತ ವ್ಯಂಗ್ಯವಾಗಿ ನಗುತ್ತಿದ್ದ. ಅದ್ಯಾವುದರ ಪರಿವೆಯೂ ಇಲ್ಲದಂತೆ ಜೇಡ ತನ್ನ ಪಾಡಿಗೆ ತನ್ನ ಪ್ರಯತ್ನವನ್ನು ಮಾಡುತ್ತಿತ್ತು.
ಒಂದಷ್ಟು ಸಮಯ ಕಳೆದಾಗ ವ್ಯಂಗ್ಯವಾಗಿ ನಗುತ್ತಿದ್ದ ಈತ ಗಂಭೀರವಾಗಿ ಜೇಡವನ್ನು ನೋಡತೊಡಗಿದ. ಜೇಡದ ನಿರಂತರ ಪ್ರಯತ್ನ, ಶ್ರಮ, ಹಲವು ಬಾರಿ ಬಿದ್ದಿದ್ದು ಎಲ್ಲವು ತನ್ನ ವ್ಯವಹಾರದಲ್ಲಾದ ಸೋಲುಗಳನ್ನು ನೆನಪಿಸುತ್ತಿದ್ದವು. ಜೇಡವು ಕೊನೆಗೂ ಹಲವಾರು ಪ್ರಯತ್ನಗಳು ಮತ್ತು ನೋವನ್ನನುಭವಿಸಿದ ನಂತರ ಬಂಡೆಯನ್ನೇರಲು ಯಶಸ್ವಿಯಾಯಿತು. ಜೀವನದಲ್ಲಿ ಸೋತು ಆಕಾಶ ನೋಡುತ್ತಿದ್ದಾತ ಇದನ್ನು ನೋಡಿ ದಂಗಾಗಿ ಹೋದ. ಅಯ್ಯೋ ಈ ಜೇಡನಿಗಿಂತಲೂ ನಾನು ಕೀಳಾಗಿಬಿಟ್ಟೆನೇ? ಅದಕ್ಕಿರುವ ಹಠ, ನಿರಂತರ ಪ್ರಯತ್ನ, ಸೋಲನ್ನು ಮರೆತು ಹೊಸ ಉತ್ಸಾಹವನ್ನು ಮೂಡಿಸಿಕೊಳ್ಳುವ ಮನೋಭಾವ ನನ್ನಲ್ಲಿ ಇಲ್ಲವಾಯಿತೇ ಎಂದು ಯೋಚಿಸಿದ. ಗುಹೆಯೊಳಗಿಂದ ಹೊಸ ಉತ್ಸಾಹದಿಂದ ಎದ್ದು ತನ್ನ ಹಳ್ಳಿಗೆ ಮರಳಿ ನಿರಂತರ ಪ್ರಯತ್ನ ಮತ್ತು ಕಠಿಣ ಪರಿಶ್ರಮದಿಂದ ತನ್ನ ವ್ಯವಹಾರ ವಹಿವಾಟಿನಲ್ಲಿ ಗೆದ್ದು ಶಹಬ್ಬಾಸ್ ಎನಿಸಿಕೊಂಡ.
ಮನುಷ್ಯ ಸೋಲುವುದು ಬದುಕು ಅಥವಾ ಸಂದರ್ಭ, ಸನ್ನಿವೇಶಗಳು ನಮ್ಮನ್ನು ಸೋಲಿಸಿದಾಗ ಅಲ್ಲ, ಬದಲಿಗೆ ಗೆಲುವಿನ ಕಡೆಗಿನ ನಮ್ಮ ಪ್ರಯತ್ನ ಕಡಿಮೆಯಾದಾಗ ಅಥವಾ ಪ್ರಯತ್ನ ನಿಂತಾಗ ನಿಜವಾಗಿಯೂ ಸೋಲುತ್ತೇವೆ. ಸೋಲೆನ್ನುವುದು ಮನುಷ್ಯನಿಗೆ ಪ್ರಯತ್ನದಲ್ಲಿ ಕುಂಟಿತವಾಗಿರುವುದನ್ನು ಸೂಚಿಸುವ ಸಂದರ್ಭವಷ್ಟೇ. ಆದ್ದರಿಂದ ಬದುಕಿನಲ್ಲಿ ಗೆಲುವು ದಕ್ಕುವವರೆಗೂ ನಿರಂತರವಾಗಿ ಪ್ರಯತ್ನಿಸುತ್ತಲೇ ಇರಬೇಕು. ಸಾಧಕರೆಲ್ಲರೂ ಹತ್ತು ಹಲವು ಸೋಲುಗಳು, ನೋವುಗಳು, ಹತಾಶೆಗಳ ನಂತರವೇ ಯಶಸ್ಸಿನ ಮೆಟ್ಟಿಲನ್ನೇರಿದ್ದಾರೆ, ಸಾಧಕರಾಗಿ ಎಲ್ಲೆಡೆ ಗುರುತಿಸಿಕೊಂಡಿದ್ದಾರೆ. ಆದರೆ ಜೀವನದಲ್ಲಿ ಆತ್ಮವಿಶ್ವಾಸಕ್ಕೆ ಎಂದೂ ಕೊರತೆಯಾಗದಿರಲಿ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
  • ಕಾಶ್ಮೀರ ಸೇಬು ಬೆಳೆದು ಮಾದರಿಯಾದ ಆರಕ್ಷಕ ಭೀಮು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.