ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ನೇ ಸಾಲಿನಲ್ಲಿ ಯುಪಿಎಸ್ಸಿ ಮುಖ್ಯ ಪರೀಕ್ಷಾ ತರಬೇತಿ ಪಡೆಯಲು ಅಲ್ಪ ಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ತರಬೇತಿ ನೀಡಲಾಗುವುದು. ಈ ತರಬೇತಿಗೆ ಅಲ್ಪ ಸಂಖ್ಯಾತರ ಸಮುದಾಯದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಜು.೧೦ ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವವರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ), ಅಭ್ಯರ್ಥಿಯು ಯುಪಿಎಸ್ಸಿ ೨೦೦೬-೨೭ನೇ ಸಾಲಿನ ಅಧಿಸೂಚನೆಯ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಈ ಅರ್ಹತೆಗಳಿರುವ ಅರ್ಜಿದಾರರು ಅಲ್ಪಸಂಖ್ಯಾತರ ನಿರ್ದೇಶನಾಲಯದ ಜಾಲತಾಣ :mehttps://dom.karnataka.gov.in/ Googlelink ttps://forms.gle/hjnh&Hwp@uTHyYme ಇಲ್ಲಿ ಲಭ್ಯವಿರುವ ಅರ್ಜಿ ನಮೂನೆಯಲ್ಲಿ ಮಾರ್ಗ ಸೂಚಿಗಳನ್ನಯ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ ಕಚೇರಿಗೆ ಮತ್ತು ಅಲ್ಪ ಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಮಾಹಿತಿಯನ್ನು ಪಡೆಯಬಹುದು ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ :೮೨೭೭೭೯೯೯೯೦ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
