ಡಾ.ಅಂಬೇಡ್ಕರ್ ಭವನ ನಿರ್ಮಾಣ ಭೂಮಿಪೂಜೆ | ಶಾಸಕ ಅಶೋಕ ಮನಗೂಳಿ ಮನವಿ
ಉದಯರಶ್ಮಿ ದಿನಪತ್ರಿಕೆ
ಮೋರಟಗಿ: ನಮ್ಮ ಸರ್ಕಾರ ಐದು ಉಚಿತ ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಜೊತೆಗೆ ವಿವಿಧ ಯೋಜನೆಗಳ ಅಡಿಯಲ್ಲಿ ಹಣ ಮಂಜೂರು ಮಾಡಿ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ ಸುಸಜ್ಜಿತ ಕಟ್ಟಡ ಕಾಮಗಾರಿಗಳಿಗೆ ತಾವೆಲ್ಲರೂ ಕೈಜೋಡಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಮನವಿ ಮಾಡಿದರು.
ಗ್ರಾಮದ ದಲಿತ ಕಾಲೋನಿಯಲ್ಲಿ ೨೦೨೫-೨೬ ನೇ ಸಾಲಿನ ಮುಖ್ಯಮಂತ್ರಿ ಮುಲಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ೫೦ ಲಕ್ಷ ರು ವೆಚ್ಚದ ಡಾ, ಬಿ ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಹಾಗೂ ೨೫ ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೇರವಾರಿಸಿ ಅವರು ಮಾತನಾಡಿದರು.
೩೧ ಸಾವಿರ ಮತಗಳ ಅಂತರದಲ್ಲಿ ಸೊಲು ಕಂಡಿದ್ದ ನನಗೆ ಮರಳಿ ಶಾಸಕನಾಗಿ ಆಯ್ಕೆ ಮಾಡಿ ಮರುಜನ್ಮ ನೀಡಿದ್ದಾರೆ. ಈ ಮೂರು ವರ್ಷದ ಅವಧಿಯಲ್ಲಿ ಮೋರಟಗಿ ಗ್ರಾಮದಲ್ಲಿ ಸಿಸಿ ರಸ್ತೆ ಕೆರೆ ಅಭಿವೃದ್ಧಿ ಭವನಗಳು ಸೇರಿದಂತೆ ೫ ಕೋತಿಗಿಂತಲೂ ಅಧಿಕ ಅನುದಾನ ತಂದು ಅಭಿವೃದ್ಧಿ ಪಡಿಸಿದ್ದೇನೆ. ಇಲ್ಲಿನ ಬಹುದಿನಗಳ ಬೇಡಿಕೆಯಾಗಿದ್ದ ಅಂಬೇಡ್ಕರ ಭವನ ೫೦ ಲಕ್ಷ ವೆಚ್ಚದಲ್ಲಿ ನಿರ್ಮಿಸಿಲಾಗುತ್ತಿದೆ ರವೆಲ್ಲರೂ ಗುತ್ತಿಗೆದಾರರಿಗೆ ಸಹಕಾರ ನೀಡಿ ಕಾಮಗಾರಿ ಮಾಡಿಸಿಕೊಳ್ಳಬೇಕು ಎಂದರು.
ನಂತರ ದಲಿತ ಮುಖಂಡ ಶ್ರೀಶೈಲ್ ಜಾಲವಾದಿ ಗೊಲಗೇರಿ ಮಾತನಾಡಿ, ಶಾಸಕರು ಮೇಲ್ವರ್ಗದದವರು ಆಗಿದ್ದರೂ ಕೂಡಾ ದೊಡ್ಡ ಸಮುದಾಯಗಳ ಜೊತೆಗೆ ದಲಿತ ಮುಸ್ಲಿಂ ಸೇರಿದಂತೆ ಇತರ ಸಣ್ಣ ಪುಟ್ಟ ಸಮುದಾಯದ ಏಳಿಗೆಗಾಗಿ ಶ್ರಮಿಸಿಸುತ್ತಿದ್ದಾರೆ. ತಂದೆಯವರಾದ ಮಾಜಿ ಸಚಿವ ದಿ ಎಂ ಸಿ ಮನಗೂಳಿ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಸಾಗುತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಜಿಪಂ ಸದಸ್ಯ ಎನ್ ಆರ್ ತಿವಾರಿ, ಎಂ ಕೆ ಕಣ್ಣಿ, ಪಿಕೆಪಿಎಸ್ ಅಧ್ಯಕ್ಷ ವೀರನಗೌಡ ಪಾಟೀಲ್, ಮಾಜಿ ತಾಪಂ ಸದಸ್ಯ ಪ್ರಕಾಶ್ ಅಡಗಲ್, ಮಾಜಿ ಸೈನಿಕ ಎಂ ಟಿ ಸಿಂಗೆ, ರವಿಕಾಂತ ನಡುವಿನಕೇರಿ, ರಜಾಕ್ ಬಾಗವಾನ, ಭೂತಾಳಿ ವಸ್ತಾರಿ, ಅರುಣ್ ಸಿಂಗೆ ನಿಂಗಣ್ಣ ವಾಲಿಕಾರ ಸೇರಿದಂತೆ ಅನೇಕರು ಇದ್ದರು.
ಪತ್ರಕರ್ತರನ್ನು ಹೊರಗುಳಿಸಿ ಸಭೆ ನಡೆಸಿದ ಶಾಸಕ
ಭೂಮಿಪೂಜೆ ಕಾರ್ಯಕ್ರಮಕ್ಕೆ ಆಗಮಿಸಿ ದಿಡೀರನೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪತ್ರಕರ್ತರನ್ನು ಹೊರಗುಳಿಸಿ ಶಾಸಕ ಅಶೋಕ ಮನಗೂಳಿ ಅವರು ಅರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಅಧಿಕಾರಿಗಳ ಸಭೆ ನಡೆಸಿದರು.
ಸಮಸ್ಯೆಯ ಸುಳಿಯಲ್ಲಿ ಇರುವ ಆರೋಗ್ಯ ಕೇಂದ್ರ ಸಭೆಯಲ್ಲಿ ಪತ್ರಕರ್ತರನ್ನು ಹೊರಗುಳಿಸಿ ಸಭೆ ನಡೆಸಿದ್ದು ಗ್ರಾಮಸ್ಥರಲ್ಲಿ ಪ್ರಶ್ನಾರ್ಥಕ ಚಿನ್ಹೆಯಾಗಿ ಉಳಿದಿದೆ.

