Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸರ್ವಾಂಗೀಣ ಪ್ರಗತಿಗೆ ಕೈಜೋಡಿಸಿ :ಬಾಣಕಾರ

ಚಿಕ್ಕರೂಗಿ ರೈತನ ಭಿತ್ತನೆ ಸಾಧನೆ :ಗ್ರಾಮಸ್ಥರಿಂದ ಮೆರವಣಿಗೆ

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭ
(ರಾಜ್ಯ ) ಜಿಲ್ಲೆ

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಕುಸಿತಗೊಂಡಿದ್ದ
ಆಲಮಟ್ಟಿ ಜಲಾಶಯಕ್ಕೆ ತಡವಾಗಿಯಾದರೂ ಸೋಮವಾರ ಒಳಹರಿವು ಆರಂಭಗೊಂಡಿದ್ದು, ಅವಳಿ ಜಿಲ್ಲೆಯ ಜನರಿಗೆ ಸಂತಸ ಮೂಡಿಸಿದೆ.
ಗರಿಷ್ಠ ೫೧೯.೬೦ ಮೀಟರ್ ಎತ್ತರದಲ್ಲಿ ೧೨೩.೦೮೧ ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸೋಮವಾರ ಬೆಳಗ್ಗೆ ೫೦೭.೭೯ ಮೀಟರ್ ಎತ್ತರದಲ್ಲಿ ೨೦.೬೫೪ ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಒಳಹರಿವು ೧,೨೩೨ ಕ್ಯೂಸೆಕ್ ಇದೆ. ಕೆಪಿಸಿಎಲ್ ಮೂಲಕ ೧೦೦ ಕ್ಯೂಸೆಕ್ ಹಾಗೂ ಕುಡಿವ ನೀರು, ಹಿನ್ನೀರು ಬಳಕೆಗೆಂದು ೭೨೨ ಕ್ಯೂಸೆಕ್ ಸೇರಿ ೮೨೨ ಕ್ಯೂಸೆಕ್ ಹೊರಹರಿವು ಇತ್ತು.
ಜುಲೈ ಮೊದಲವಾರ ಬಂದರೂ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಕಂಡು ಬಂದಿರಲಿಲ್ಲ. ಹೀಗಾಗಿ ಡೆಡ್‌ಸ್ಟೋರೇಜ್ ಹೊರತು ಪಡಿಸಿ ೨.೯೨೭ ಟಿಎಂಸಿ ನೀರನ್ನೇ ನಂಬುವಂತಾಗಿತ್ತು. ಇನ್ನೂ ಕೆಲ ದಿನಗಳು ಕಳೆದಿದ್ದರೆ ಅವಳಿ ಜಿಲ್ಲೆಯಲ್ಲಿ ಕುಡಿವ ನೀರಿಗೆ ತೊಂದರೆಯಾಗುವ ಸಾಧ್ಯತೆ ಇತ್ತು. ಆದರೆ ಸೋಮವಾರದಿಂದ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದ್ದು, ಅವಳಿ ಜಿಲ್ಲೆಯ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಜನರಿಗೆ ಸಂಭ್ರಮಿಸುವಂತೆ ಮಾಡಿದೆ.
ಈ ವರ್ಷ ಅಧಿಕ ಮಾಸ ಬಂದಿದ್ದು, ಈಗ ನಮಗೆ ಜೂನ್ ಸಾತ್ ರೀತಿ ಅನಿಸುತ್ತಿದೆ ಒಟ್ಟಾರೇ ನೀರು ಬಂದಿದ್ದು ಖುಷಿ ನೀಡಿದೆ ಎಂದು ಹಲ ರೈತರು ಖುಷಿ ವ್ಯಕ್ತಪಡಿಸಿದರು.
ಹೆಚ್ಚಿದ ಮಹಾ ಮಳೆ;
ಮಹಾರಾಷ್ಟçದ ಕೃಷ್ಣಾ ಕಣಿವೆಯಲ್ಲಿ ಭಾರಿ ಮಳೆ ಅಬ್ಬರ ಸೋಮವಾರ ವೂ ಮುಂದುವರೆದಿದೆ.
ಕೊಯ್ನಾ ೨೫೭ ಮಿ.ಮೀ, ನವಜಾ ೨೪೪ ಮಿ.ಮೀ, ಮಹಾಬಳೇಶ್ವರದಲ್ಲಿ ದಾಖಲೆಯ ೪೭೩ ಮಿ.ಮೀ ಮಳೆಯಾಗಿದೆ. ಮಹಾರಾಷ್ಟçದಲ್ಲಿ ಭಾರಿ ಮಳೆಯಾಗುತ್ತಿದ್ದರೂ ಅಲ್ಲಿನ ಜಲಾಶಯಗಳ ಸಾಮರ್ಥ್ಯ ದ ಶೇ ೩೫ ರಷ್ಟು ಮಾತ್ರ ಭರ್ತಿಯಾಗಿವೆ. ಇದೇ ರೀತಿ ೧೫ ದಿನಗಳ ಕಾಲ ನಿರಂತರ ಮಳೆಯಾದರೆ ಆಲಮಟ್ಟಿ ಜಲಾಶಯ ಭರ್ತಿಯತ್ತ ಸಾಗಲಿದೆ.
ಕರ್ನಾಟಕಕ್ಕೆ ಬಂದು ಸೇರುವ ರಾಜಾಪುರ ಬ್ಯಾರೇಜ್ ಬಳಿ ೫೯,೮೭೫ ಕ್ಯೂಸೆಕ್ ಕೃಷ್ಣೆಯ ಹರಿವಿದ್ದು, ಕಲ್ಲೋಲ ಬ್ಯಾರೇಜ್ ಬಳಿ ದೂಧಗಂಗಾ ನದಿಯ ಹರಿವು ೧೭,೨೪೮ ಕ್ಯೂಸೆಕ್ ಸೇರಿ ಕೃಷ್ಣೆಯ ಹರಿವು ೭೭,೧೨೩ ಕ್ಯೂಸೆಕ್ ಇದೆ. ಹೀಗಾಗಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಿಗೆ ಇರಲಿದೆ.
ಹಿಪ್ಪರಗಿ ಜಲಾಶಯದಿಂದ ೫೫,೧೫೦ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗುತ್ತಿದೆ.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸರ್ವಾಂಗೀಣ ಪ್ರಗತಿಗೆ ಕೈಜೋಡಿಸಿ :ಬಾಣಕಾರ

ಚಿಕ್ಕರೂಗಿ ರೈತನ ಭಿತ್ತನೆ ಸಾಧನೆ :ಗ್ರಾಮಸ್ಥರಿಂದ ಮೆರವಣಿಗೆ

ಆನಲೈನ್ ಹಾಜರಾತಿಗೆ ನೊಂದಣಿ ಮಾಡಿ :ಕಾಗವಾಡ

ಎಸ್.ಐ.ಆರ್ ಲೋಪಗಳನ್ನು ಸರಿಪಡಿಸಲು ಬಿಜೆಪಿ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸರ್ವಾಂಗೀಣ ಪ್ರಗತಿಗೆ ಕೈಜೋಡಿಸಿ :ಬಾಣಕಾರ
    In (ರಾಜ್ಯ ) ಜಿಲ್ಲೆ
  • ಚಿಕ್ಕರೂಗಿ ರೈತನ ಭಿತ್ತನೆ ಸಾಧನೆ :ಗ್ರಾಮಸ್ಥರಿಂದ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭ
    In (ರಾಜ್ಯ ) ಜಿಲ್ಲೆ
  • ಆನಲೈನ್ ಹಾಜರಾತಿಗೆ ನೊಂದಣಿ ಮಾಡಿ :ಕಾಗವಾಡ
    In (ರಾಜ್ಯ ) ಜಿಲ್ಲೆ
  • ಎಸ್.ಐ.ಆರ್ ಲೋಪಗಳನ್ನು ಸರಿಪಡಿಸಲು ಬಿಜೆಪಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ದೇಶದ ಪ್ರಗತಿಗೆ ಡಾ.ಜಗಜೀವನರಾಮ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಜು.೯ರಂದು ಸ್ವಾತಂತ್ರ‍್ಯದ ಓಟ ನಾಟಕ ಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಅಥಣಿಯಲ್ಲಿ ಸೂಪರ್ ಬಜಾರ್ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಇಂಡಿ ಸಾರ್ವಜನಿಕ ಆಸ್ಪತ್ರೆಗೆ ಸ್ತ್ರೀರೋಗ ತಜ್ಞರ ನಿಯೋಜನೆ
    In (ರಾಜ್ಯ ) ಜಿಲ್ಲೆ
  • ಅವಶ್ಯವಿರುವ ಎಲ್ಲಕಡೆ ಬಸ್ ನಿಲ್ದಾಣ ನಿರ್ಮಾಣ :ಸವದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.