Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
(ರಾಜ್ಯ ) ಜಿಲ್ಲೆ

ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಎಚ್ಚರಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಎಸ್ ಐಆರ್ ಗೆ ಸಂಬಂಧಿಸಿದಂತೆ ಇತ್ತೀಚಿಗೆ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಬೇರೆ ಮತಕ್ಷೇತ್ರದಲ್ಲಿ ಮನೆ ಕಟ್ಟಿಕೊಂಡು ವಾಸವಿದ್ದರೂ ಎಸ್ ಐಆರ್ ಫಾರ್ಮನಲ್ಲಿ ಈ ಹಿಂದೆ ವಾಸವಿದ್ದ ತಮ್ಮ ಮೂಲ ಹಳೆಯ ಓಣಿಯ ವಿಳಾಸ ತುಂಬುವಂತೆ ತಿಳಿಸಿ ಪೋಸ್ಟ್ ಮಾಡಲಾಗುತ್ತಿದೆ. ಇದು ಕಾನೂನಿಗೆ ವಿರುದ್ಧವಾಗಿದ್ದು, ಅಂತಹ ವ್ಯಕ್ತಿಗಳನ್ನು ಕಠಿಣ ಶಿಕ್ಷೆಗೊಳಪಡಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಪ್ರಜಾ ಪ್ರಾತಿನಿಧ್ಯ ಕಾಯ್ದೆ ೧೯೫೦ ರ ಕಲಂ ೧೭ ರಂತೆ ಒಬ್ಬ ವ್ಯಕ್ತಿಯ ಹೆಸರು ಒಂದಕ್ಕಿಂತ ಹೆಚ್ಚು ಮತಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಇರಬಾರದು. ಕಲಂ ೧೮ ರಂತೆ ಅರ್ಹತೆ ಇಲ್ಲದಿದ್ದರೂ ಅಥವಾ ತಪ್ಪು ಮಾಹಿತಿಯನ್ನು ನೀಡಿ ನೋಂದಣಿ ನಿಷೇಧಿಸಲಾಗಿದೆ. ಒಂದು ವೇಳೆ ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸುಳ್ಳು ಘೋಷಣೆ ಅಥವಾ ಸುಳ್ಳು ಮಾಹಿತಿ ನೀಡಿದರೆ ಸೆಕ್ಷನ್ ೩೧ ರಡಿ ಗರಿಷ್ಠ ೧ ವರ್ಷ ಶಿಕ್ಷೆ ಅಥವಾ ದಂಡ ಎರಡನ್ನೂ ವಿಧಿಸಲಾಗುವುದು ಎಂದವರು ತಿಳಿಸಿದ್ದಾರೆ. ಜೂ. ೩೦ ರಿಂದ ಜು. ೨೯ ರವರೆಗೆ ಮನೆ ಮನೆಗೆ ಗಣತಿ ನಮೂನೆ ವಿತರಿಸುವ ಸಂದರ್ಭದಲ್ಲಿ ತಾವು ಗಣತಿ ನಮೂನೆಯಲ್ಲಿ ತಮ್ಮ ಮತ್ತು ತಮ್ಮ ಕುಟುಂಬದ ಹೆಸರು ಬೇರೆ ಯಾವುದೇ ಇತರೆ ವಿಧಾನ ಸಭಾ ಕ್ಷೇತ್ರ ಅಥವಾ ಸಂಸದೀಯ ಮತದಾರರ ಪಟ್ಟಿಯಲ್ಲಿ ಸೇರಿರುವುದಿಲ್ಲವೆಂದು ಭರ್ತಿ ಮಾಡಿ ಸಲ್ಲಿಸಬೇಕಾಗಿರುತ್ತದೆ. ಆದ್ದರಿಂದ ತಾವು ತಪ್ಪು ಮಾಹಿತಿ ನೀಡಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದು ಕಂಡುಬಂದಲ್ಲಿ ಪ್ರಜಾ ಪ್ರಾತಿನಿಧ್ಯ ಕಾಯ್ದೆ ೧೯೫೦ರ (೧೯೫೦ರ ೪೩ನೇ ಕಾಯ್ದೆ) ಕಲಂ ೩೧ ರಂತೆ ಕಾನೂನು ರೀತ್ಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದವರು ತಿಳಿಸಿದ್ದಾರೆ.
ನಗರ ಮತಕ್ಷೇತ್ರದಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡುತ್ತಿದ್ದು, ಅವರು ದ್ವಿಪ್ರತಿಗಳಲ್ಲಿ ನೀಡುವ ಗಣತಿ ನಮೂನೆಗಳನ್ನು ಪ್ರತಿಯೊಬ್ಬ ಮತದಾರರು ಪಡೆದು, ಅವುಗಳನ್ನು ತಮ್ಮ ಸಹಿಯೊಂದಿಗೆ ಭರ್ತಿ ಮಾಡಿ, ಒಂದು ಪ್ರತಿಯನ್ನು ಬಿಎಲ್ ಒ ಅವರಿಗೆ ಕಡ್ಡಾಯವಾಗಿ ಹಿಂದಿರುಗಿಸಿ, ಇನ್ನೊಂದು ಪ್ರತಿಯನ್ನು ಅವರಿಂದ ಸ್ವೀಕೃತಿ ಪಡೆದು ಮತದಾರರು ತಮ್ಮ ಬಳಿ ಇಟ್ಟುಕೊಳ್ಳಬೇಕು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಗೈರು ಹಾಜರಾದವರು, ಸ್ಥಳಾಂತರಗೊಂಡವರು, ನಿಧನರಾದವರು ಮತ್ತು ಸಂಭವನೀಯ ನಕಲು ಮತದಾರರನ್ನು ಗುರುತಿಸುವುದು ಹಾಗೂ ಒಂದಕ್ಕಿಂತ ಹೆಚ್ಚು ಮತದಾರರ ಪಟ್ಟಿಯಲ್ಲಿ ಹೆಸರು ಇದ್ದಲ್ಲಿ ಒಂದು ಕಡೆ ಮಾತ್ರ ಹೆಸರು ಉಳಿಸುವ ಪ್ರಕ್ರಿಯೆ ಇದಾಗಿದೆ. ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗೆ ಉಳಿಯಬಾರದು ಮತ್ತು ಅನರ್ಹ ಮತದಾರರನ್ನು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಗೆ ಸೇರಬಾರದು ಎಂಬುದೇ ಈ ಪ್ರಕ್ರಿಯೆಯ ಮೂಲ ಉದ್ದೇಶವಾಗಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ
    In (ರಾಜ್ಯ ) ಜಿಲ್ಲೆ
  • ಜು.೧೦ ರಂದು ತರಬೇತಿ, ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ :ಕೊಪ್ಪಳ
    In (ರಾಜ್ಯ ) ಜಿಲ್ಲೆ
  • ಜೆಇಇಯಲ್ಲಿ ಸಾಧನೆಗೈದ ಇಂದಿರಾಬಾಯಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ನೆಪದಲ್ಲಿ ಮತದಾರರ ಹಕ್ಕು ಕಸಿವ ಕುತಂತ್ರ
    In (ರಾಜ್ಯ ) ಜಿಲ್ಲೆ
  • 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕಲಿ ಡಿಎಸ್‌ಪಿ ಬಂಧನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.