ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಎಂಎಲ್ಸಿ ಸುನೀಲಗೌಡ ಪಾಟೀಲ ಸಲಹೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಕ್ರೀಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ.
ಶನಿವಾರ ನಗರದಲ್ಲಿ ಕಾತ್ರಾಳ ಗ್ರಾಮದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ವಜನರ ಏಳಿಗೆಗಾಗಿ ಕೆಲಸ ಮಾಡುತ್ತಿದೆ. ಹೊಸ ಕಾರ್ಯಕರ್ತರ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ. ಹಳಬರು, ಹೊಸಬರು ಒಗ್ಗಟ್ಟಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಮಾತನಾಡಿದ ಮುಖಂಡರು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಅಭಿವೃದ್ಧಿ ಕಾರ್ಯಗಳಿಗೆ ಮನಸೋತು ಕಾಂಗ್ರೆಸ್ ಸೇರ್ಪಡೆಯಾಗಿದ್ದೇವೆ. ಸಚಿವ ಎಂ. ಬಿ. ಪಾಟೀಲ ಮತ್ತು ಶಾಸಕ ಸುನೀಲಗೌಡ ಪಾಟೀಲ ಅವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟಿಸುತ್ತೇವೆ ಎಂದು ಹೇಳಿದರು.
ಕಾತ್ರಾಳ ಗ್ರಾಮದ ಹಿರಿಯರು ಮತ್ತು ಮಾಜಿ ಗ್ರಾ. ಪಂ. ಮಾಜಿ ಸದಸ್ಯ ಡಾ. ಶ್ರೀಶೈಲ ಕೊಕಟನೂರ ಹಾಗೂ ಅವರ ಬೆಂಬಲಿಗರಾದ ಹಣಮಂತ ಕೊಕಟನೂರ, ಮಹದೇವ ಕೊಕಟನೂರ, ನಾಗಪ್ಪ ಕೊಕಟನೂರ, ಸಿದ್ರಾಯ ನ್ಯಾಮಗೌಡ, ಮಲ್ಲಿಕಾರ್ಜುನ ಬಾಡಗಿ, ರಾಮಪ್ಪ ಕೊಕಟನೂರ, ಸಿದ್ರಾಯ ಕೊಕಟನೂರ, ಭೀಮಪ್ಪ ದುಂಡಪ್ಪ ಕೊಕಟನೂರ ಮುಂತಾದವರು ಪಕ್ಷಕ್ಕೆ ಸೇರ್ಪಡೆಗೊಂಡರು. ಶಾಸಕ ಸುನೀಲಗೌಡ ಪಾಟೀಲ ಅವರು ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಂ. ಡಿ. ಪಡಸಲಗಿ, ಎಸ್. ಡಿ. ಗುಗ್ಗರಿ, ಬಾಳಪ್ಪ ಪಡಸಲಗಿ, ಗ್ರಾ. ಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಅಂಗಡಿ, ಗ್ರಾ. ಪಂ. ಮಾಜಿ ಸದಸ್ಯ ಇಮ್ತಿಯಾಜ್ ಜಮಾದಾರ, ಮಹಮ್ಮದಸಾಬ ಜಮಾದಾರ, ಗ್ಯಾರಂಟಿ ಸಮಿತಿಯ ಸದಸ್ಯರಾದ ಲಾಲಸಾಬ ಜಮಾದಾರ, ಸುರೇಶ ಚಿಕ್ಕಲಕಿ, ಹಣಮಂತ ಗಲಗಲಿ, ಇಬ್ರಾಹಿಂ ಗುರಾಡಿ ಮುಂತಾದವರು ಉಪಸ್ಥಿತರಿದ್ದರು.

