ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಅನಿವಾರ್ಯತೆ ಬಹಳಷ್ಟಿದೆ. ಎಂದು ಟ್ರಸ್ಟ್ ನ ಸಂಘಟಕರಾದ ಪಂಚಾಕ್ಷರಿ ಮಠದ ಹೇಳಿದರು.
ಜಮಖಂಡಿ ತಾಲೂಕಿನ ತುಬಚಿ ಗ್ರಾಮದ ದಳವಾಯಿ ವಸತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಶಾಲೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನಮ್ಮ ಟ್ರಸ್ಟ್ ವತಿಯಿಂದ ಈ ಸಣ್ಣ ಕಾಣಿಕೆಯನ್ನು ನೀಡಿದ್ದೇವೆ. ಇಂತಹ ಸಾಮಾಜಿಕ ಕಾರ್ಯಕ್ರಮಗಳು ಮುಂದೆಯೂ ನಿರಂತರವಾಗಿ ಮುಂದುವರಿಯಲಿವೆ,” ಎಂದು ತಿಳಿಸಿದರು.
ರೈತ ಮುಖಂಡರಾದ ಬಿ.ಎಸ್. ಸಿಂಧೂರ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣದೊಂದಿಗೆ ಆರೋಗ್ಯವಂತರಾಗಿಯೂ ಬೆಳೆಯಬೇಕು. ಪ್ಲಾಸ್ಟಿಕ್ ಬಾಟಲ್ಗಳ ಅತಿಯಾದ ಬಳಕೆಯನ್ನು ಕಡಿಮೆ ಮಾಡಿ, ಇಂತಹ ಮರುಬಳಕೆ ಮಾಡಬಹುದಾದ ಬಾಟಲ್ಗಳನ್ನು ಬಳಸುವುದರಿಂದ ಪರಿಸರಕ್ಕೂ ಒಳಿತು. ಟ್ರಸ್ಟ್ನ ಈ ಕೆಲಸವು ಇತರರಿಗೆ ಮಾದರಿಯಾಗಿದೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖಂಡರಾದ ಸುರೇಶ ಗೌಡ ಪಾಟೀಲ್ ಮಾತನಾಡಿ, ಸಮಾಜಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಶಿವಲಿಂಗೇಶ್ವರ ಚಾರಿಟೇಬಲ್ ಟ್ರಸ್ಟ್ನ ಈ ಮಾನವೀಯ ಕಾರ್ಯ ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷ ಮಲ್ಲಿಕಾರ್ಜುನ್ ದಳವಾಯಿ, ಬಸಯ್ಯ ಮಠದ, ಶಿವನಪ್ಪ ದಳವಾಯಿ, ಬಸವರಾಜ ಪಾಟೀಲ, ಬಾಬುಗೌಡ ಪಾಟೀಲ, ಮುತ್ತಪ್ಪ ಕುಂಬಾರ, ಬಸಪ್ಪ ಬಾಲಪ್ಪನವರ, ಶಿವಲಿಂಗಪ್ಪ ಕುಂಬಾರ, ಮಹಾಂತೇಶ ಘಟಗಿ ಸ್ವಾಗತಿಸಿದರು. ಮಹಾಂತೇಶ ಹಾಲಳ್ಳಿ ನಿರೂಪಿಸಿದರು.

