ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಅವಧಿಗೆ ಮುನ್ನವೇ ಶೇ. ನೂರರಷ್ಟು ಪ್ರಗತಿ ಸಾಧಿಸಿದ ಮತಗಟ್ಟೆ ಅಧಿಕಾರಿಗಳನ್ನು ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನಿಸಲಾಯಿತು.
ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಒಟ್ಟು ೨೪೪ ಮತಗಟ್ಟೆಗಳ ಪೈಕಿ ಪ್ರಥಮವಾಗಿ ತಿಕೋಟಾ ತಾಲೂಕಿನ ಧನರ್ಗಿ ಗ್ರಾಮದ ಭಾಗ ಸಂಖ್ಯೆ-೬೦ ರ ಮತಗಟ್ಟೆ ಮಟ್ಟದ ಅಧಿಕಾರಿ ಎಸ್. ಬಿ. ಮಡಸನಾಳ ಹಾಗೂ ಮತಗಟ್ಟೆ ಮೇಲ್ವಿಚಾರಕರಾದ ಶ್ರೀಮತಿ ಜ್ಯೋತಿ ಕೊಣ್ಣೂರ ಅವರನ್ನು ಮೇಲಧಿಕಾರಿಗಳು ಸನ್ಮಾನಿಸಿದರು.
ಈ ಸಿಬ್ಬಂದಿ ಬಲೇಶ್ವರ ವಿಧಾನಸಭಾ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಅವಧಿಗೆ ಮುನ್ನವೇ ಶೇ.ನೂರರಷ್ಟು ಪ್ರಗತಿ ಸಾಧಿಸಿದ್ದಾರೆ. ಈ ಇಬ್ಬರು ಮತಗಟ್ಟೆ ಅಧಿಕಾರಿಗಳು ಎನ್ಯುಮರೇಶನ್ ಫಾರ್ಮಗಳ ಹಂಚಿಕೆ ಹಾಗೂ ಡಿಜಿಟೈಜೇಶನ್ ಕಾರ್ಯವನ್ನು ನಿಗದಿತ ಅವಧಿಗಿಂತ ಮುನ್ನವೇ ಮುಗಿಸಿದ್ದರಿಂದ ಸನ್ಮಾನಿಸಲಾಯಿತು. ಉಪವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ, ಬಬಲೇಶ್ವರ ತಹಶೀಲ್ದಾರ್ ಶಾಂತಲಾ ಚಂದನ್, ತಿಕೋಟಾ ತಹಶೀಲ್ದಾರ್ ಸುರೇಶ ಚವಲರ್ ಸೇರಿದಂತೆ ಅಧಿಕಾರಿ, ಸಿಬ್ಬಂದಿ ಇದ್ದರು.

