Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೆಮಿಕಲ್ ಮಿಶ್ರಿತ ಹಾಲು ತಡೆಗಟ್ಟಲು ಅಪ್ಪು ಪಟ್ಟಣಶೆಟ್ಟಿ ಆಗ್ರಹ

ಸಮಾಜಮುಖಿ ಕಾರ್ಯಕ್ಕೆ ಒತ್ತು ನೀಡಿ; ಶೋಷಿತರ ಪರ ಧ್ವನಿ ಎತ್ತಿ

ಹದಗೆಟ್ಟ ಗುಂದವಾನ–ಶೀಗಣಾಪುರ ರಸ್ತೆ ದುರಸ್ತಿ ಯಾವಾಗ?

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಮದಾಪುರ ಕೆರೆ ಮುಳುಗಡೆ ಪ್ರದೇಶ ಸ್ವಾಧೀನಕ್ಕೆ ತೀರ್ಮಾನ
(ರಾಜ್ಯ ) ಜಿಲ್ಲೆ

ಮಮದಾಪುರ ಕೆರೆ ಮುಳುಗಡೆ ಪ್ರದೇಶ ಸ್ವಾಧೀನಕ್ಕೆ ತೀರ್ಮಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಧಾನಸೌಧದಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ ಮತ್ತು ಎಂ.ಬಿ.ಪಾಟೀಲ ನೇತೃತ್ವದಲ್ಲಿ ಸಣ್ಣ ನೀರಾವರಿ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳ ಜತೆ ಸಭೆ | ಸಂಪುಟಕ್ಕೆ ವಿಷಯ ಮಂಡನೆ

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ವಿಜಯಪುರ ಜಿಲ್ಲೆ, ಬಬಲೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಮದಾಪುರ ಕೆರೆಯಲ್ಲಿ ನೀರು ತುಂಬಿದಾಗ ಮುಳುಗಡೆ ಆಗುವ 178 ಎಕರೆ ಜಮೀನನ್ನು ರೈತರ ಕೋರಿಕೆಯ ಮೇರೆಗೆ ಭೂಸ್ವಾಧೀನಕ್ಕೆ ಸಕಾರಾತ್ಮಕ ತೀರ್ಮಾನವಾಗಿದ್ದು ಈ ವಿಷಯವನ್ನು ಸಂಪುಟದ ಮುಂದೆ ತರಲು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂಬಂಧವಾಗಿ ಗುರುವಾರ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಮತ್ತು ಎಂ ಬಿ ಪಾಟೀಲ ಇಬ್ಬರೂ ವಿಧಾನಸೌಧದಲ್ಲಿ ಸಣ್ಣ ನೀರಾವರಿ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳ ಜತೆ ಸಭೆ ನಡೆಸಿದರು.
ಮುಳುಗಡೆ ಪ್ರದೇಶದ ರೈತರಿಗೆ ಆಗುತ್ತಿರುವ ಅನಾನುಕೂಲ ಮತ್ತು ನಷ್ಟ ತಪ್ಪಿಸಲು ಸ್ವಾಧೀನದ ಅಗತ್ಯ ಇದ್ದು, ಆದಷ್ಟು ಬೇಗ ಈ ಕುರಿತು ಸಂಪುಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.
ಕ್ಷೇತ್ರದ ಶಾಸಕರೂ ಆದ ಸಚಿವ ಪಾಟೀಲ ಅವರು ಮಾತನಾಡಿ, ’16ನೇ ಶತಮಾನದಲ್ಲಿ ಆದಿಲ್ ಶಾಹಿಗಳು ಕಟ್ಟಿಸಿದ ಮಮದಾಪೂರ ಕೆರೆ 1,200 ಎಕರೆ ವಿಶಾಲವಾಗಿದ್ದು, 15 ಹಳ್ಳಿಗಳಿಗೆ ಆಸರೆಯಾಗಿದೆ. ಕೃಷ್ಷಾ ಮೇಲ್ದಂಡೆ ಯೋಜನೆಯಿಂದ ಇದಕ್ಕೆ ನೀರು ತುಂಬಿಸಲಾಗುತ್ತದೆ. ಹೀಗಾದಾಗ 42 ರೈತರಿಗೆ ಸೇರಿರುವ 178 ಎಕರೆ ಮುಳುಗಡೆಯಾಗಿ ಅಲ್ಲಿ ಏನನ್ನೂ ಬೆಳೆಯಲು ಆಗುತ್ತಿಲ್ಲ ಎಂದಿದ್ದಾರೆ.
ಹೀಗಾಗಿ ರೈತರು ಇಷ್ಟು ಜಮೀನನ್ನು ಕೃಷ್ಣಾ ಭಾಗ್ಯ ಜಲ ನಿಗಮದ ಸ್ವಾಧೀನಕ್ಕೆ ತೆಗೆದುಕೊಳ್ಳಲು ಕೋರುತ್ತಿದ್ದರು. ಇದಕ್ಕೆ 42 ಕೋಟಿ ರೂಪಾಯಿ ವೆಚ್ಚವಾಗಲಿದ್ದು ಅದಕ್ಕೆ ಹಣ ಬಿಡುಗಡೆ ಮಾಡುವಂತೆ ಕೋರುವ ಉದ್ದೇಶದಿಂದ ಈ ಸಭೆ ನಡೆಸಲಾಯಿತು.
ಜಲಸಂಪನ್ಮೂಲ ಸಚಿವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೃಷ್ಣಾ ಭಾಗ್ಯ ಜಲ ನಿಗಮದ ಪ್ರಧಾನ ವ್ಯವಸ್ಥಾಪಕ ಬಿ ಎಂ ಕುಲಕರ್ಣಿ, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಬಿ.ಕೆ.ಪವಿತ್ರಾ ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೆಮಿಕಲ್ ಮಿಶ್ರಿತ ಹಾಲು ತಡೆಗಟ್ಟಲು ಅಪ್ಪು ಪಟ್ಟಣಶೆಟ್ಟಿ ಆಗ್ರಹ

ಸಮಾಜಮುಖಿ ಕಾರ್ಯಕ್ಕೆ ಒತ್ತು ನೀಡಿ; ಶೋಷಿತರ ಪರ ಧ್ವನಿ ಎತ್ತಿ

ಹದಗೆಟ್ಟ ಗುಂದವಾನ–ಶೀಗಣಾಪುರ ರಸ್ತೆ ದುರಸ್ತಿ ಯಾವಾಗ?

ಹಾವುಗಳ ಬಗ್ಗೆ ಇರುವ ಮೂಢ ನಂಬಿಕೆ ತೊರೆದು ಅವುಗಳನ್ನು ರಕ್ಷಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೆಮಿಕಲ್ ಮಿಶ್ರಿತ ಹಾಲು ತಡೆಗಟ್ಟಲು ಅಪ್ಪು ಪಟ್ಟಣಶೆಟ್ಟಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಮಾಜಮುಖಿ ಕಾರ್ಯಕ್ಕೆ ಒತ್ತು ನೀಡಿ; ಶೋಷಿತರ ಪರ ಧ್ವನಿ ಎತ್ತಿ
    In (ರಾಜ್ಯ ) ಜಿಲ್ಲೆ
  • ಹದಗೆಟ್ಟ ಗುಂದವಾನ–ಶೀಗಣಾಪುರ ರಸ್ತೆ ದುರಸ್ತಿ ಯಾವಾಗ?
    In (ರಾಜ್ಯ ) ಜಿಲ್ಲೆ
  • ಹಾವುಗಳ ಬಗ್ಗೆ ಇರುವ ಮೂಢ ನಂಬಿಕೆ ತೊರೆದು ಅವುಗಳನ್ನು ರಕ್ಷಿಸಿ
    In (ರಾಜ್ಯ ) ಜಿಲ್ಲೆ
  • ಮಮದಾಪುರ ಕೆರೆ ಮುಳುಗಡೆ ಪ್ರದೇಶ ಸ್ವಾಧೀನಕ್ಕೆ ತೀರ್ಮಾನ
    In (ರಾಜ್ಯ ) ಜಿಲ್ಲೆ
  • ಯುವಕರು ಉತ್ತಮ ಆರೋಗ್ಯ ಹೊಂದಲು ಕ್ರೀಡೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ಸಮಸ್ಯೆಗಳ ಕುರಿತು ಸದಾ ಜಾಗರೂಕರಾಗಿರೋಣ
    In ವಿಶೇಷ ಲೇಖನ
  • ಪ್ರಕೃತಿಯಿಂದ ನಾವು
    In ವಿಶೇಷ ಲೇಖನ
  • ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026
    In ಆರೋಗ್ಯ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.