Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ

ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ-ಧರಣಿ
(ರಾಜ್ಯ ) ಜಿಲ್ಲೆ

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ-ಧರಣಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೋರವಾರದಿಂದ ದೇವರಹಿಪ್ಪರಗಿವರೆಗೆ ರೈತಸಂಘದ ಪದಾಧಿಕಾರಿಗಳಿಂದ ಪಾದಯಾತ್ರೆ

ದೇವರಹಿಪ್ಪರಗಿ: ರೈತರ ಸಂಪೂರ್ಣ ಸಾಲಮನ್ನಾ , ಬರಗಾಲ ನಿಮಿತ್ಯ ತುರ್ತು ಪರಿಹಾರ, ಸೇರಿದಂತೆ ೧೧ ವಿವಿಧ ಬೇಡಿಕೆಗಳನ್ನು ಇಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಪದಾಧಿಕಾರಿಗಳು ಕೋರವಾರ ಗ್ರಾಮದಿಂದ ದೇವರಹಿಪ್ಪರಗಿವರೆಗೆ ಸುಮಾರು ೬ ಗಂಟೆಗಳ ಕಾಲ ಪಾದಯಾತ್ರೆ ಕೈಗೊಂಡು ನಂತರ ಅಂಬೇಡ್ಕರ್ ವೃತ್ತದಲ್ಲಿ ಒಂದು ಗಂಟೆಗಳ ಕಾಲ ಧರಣಿ ಕುಳಿತು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು. 
ತಾಲ್ಲೂಕಿನ ಕೋರವಾರ ಗ್ರಾಮದ ಕೋರವಾರೇಶ ಗ್ರಾಮದಲ್ಲಿ ಸೇರಿದ ರೈತರು ಬುಧವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳಾದ ಈರಪ್ಪ ಕುಳೇಕುಮಟಗಿ, ಶಿವಾನಂದ ಹಿರೇಮಠ, ಸಂಗಮೇಶ ಹುಣಸಗಿ, ಚೌಕಿಮಠದ ಕಾಶೀಲಿಂಗಶ್ರೀ ನೇತೃತ್ವದಲ್ಲಿ ಜಾಲವಾದ, ಮಣೂರ, ದೇವೂರ ಗ್ರಾಮಗಳ ಮೂಲಕ ಒಟ್ಟು ೨೦ ಕಿ.ಮೀ ಪಾದಯಾತ್ರೆ ನಡೆಸಿ, ಅಂಬೇಡ್ಕರ್ ವೃತ್ತ ತಲುಪಿ ಧರಣಿ ಕುಳಿತರು. ಈ ಸಂದರ್ಭದಲ್ಲಿ ದೇವರ ಹಿಪ್ಪರಗಿ ಸದಯ್ಯನಮಠದ ವೀರಗಂಗಾಧರಶ್ರೀ, ಹುಲಜಂತಿ ಮಾಳಿಂಗರಾಯರು, ರೈತ ಸಂಘದ ಸಂಗಮೇಶ ಸಗರ, ರಾಹುಲ ಕುಬಕಡ್ಡಿ ಮಾತನಾಡಿ, ಸರ್ಕಾರಗಳು ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿವೆ. ರೈತರ ಉಳಿವಿಗಾಗಿ ಕಾಲುವೆಗಳಿಗೆ ನೀರು ಹರಿಸಬೇಕು, ೭ ಗಂಟೆಗಳ ಕಾಲ ವಿದ್ಯುತ್ ಪೂರೈಸಬೇಕು. ಬಾಕಿ ಇರುವ ಬೆಳೆ ವಿಮೆ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಮಾತನಾಡಿ ಸರ್ಕಾರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಆಗಮನಕ್ಕಾಗಿ ಪಟ್ಟು ಹಿಡಿದರು.
ತಹಶೀಲ್ದಾರ ಪ್ರಕಾಶ ಸಿಂದಗಿ ಧರಣಿ ಸ್ಥಳಕ್ಕೆ ಆಗಮಿಸಿ ರೈತರ ಮನವಲಿಸಿ ಬೇಡಿಕೆಗಳನ್ನು ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದಾಗ ರೈತರು ಮನವಿ ಸಲ್ಲಿಸಿ, ಧರಣಿ ಹಿಂಪಡೆದರು.
ರೇಖಾ ಪಾಟೀಲ, ಗುರಣ್ಣ ಹಂಗರಗಿ, ಶಂಕ್ರೆಪ್ಪ ಸೌದಿ, ಶರಣಗೌಡ ಪಾಟೀಲ(ದೇವೂರ), ಚಿದಾನಂದ ಮೋಪಗಾರ, ಬಾಬಾಸಾಹೇಬಗೌಡ ಪಾಟೀಲ(ಮಣೂರ), ಬಸವರಾಜ ಹುಣಸಗಿ, ಶಂಕರ ರಾಠೋಡ, ರಾಚಯ್ಯ ಹಿರೇಮಠ(ವರ್ಕಾನಳ್ಳಿ), ಮಲ್ಲಪ್ಪ ಸುಂಬಡ, ದ್ಯಾವಪ್ಪಗೌಡ ಪಾಟೀಲ, ಸಿ.ಎಸ್.ಪ್ಯಾಟಿ, ಅಪ್ಪಾಸಾಹೇಬ ಹರವಾಳ, ಗಣೇಶ ಕನ್ನೋಳ್ಳಿ, ರಾಮಗೌಡ ಹುಲಸೂರ, ಶಾಂತಪ್ಪ ದೇವೂರ ಸಂಪತ್ ಜಮಾದಾರ, ಕಾಶೀನಾಥ ಕೋರಿ, ಶಂಕರ ಜಮಾದಾರ ಇದ್ದರು.

BIJAPUR NEWS public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ

ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ

ಕುಡಿವ ನೀರಿಗಾಗಿ ಉಜನಿ ಜಲಾಶಯದಿಂದ ನೀರು ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿಗಾಗಿ ಉಜನಿ ಜಲಾಶಯದಿಂದ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ವಂದೇ ಭಾರತ ರೈಲು ಸಂಚಾರ ಕುರಿತು ಅಪಪ್ರಚಾರ ಬೇಡ :ಸಂಸದರು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ೧೬ ಸಾವಿರ ಕ್ಯೂಸೆಕ್ ನೀರು
    In (ರಾಜ್ಯ ) ಜಿಲ್ಲೆ
  • ಸಂತೆಯ ಜನರಿಗೆ ಉಚಿತ ಕುಡಿಯುವ ನೀರಿನ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 07, 2026
    In ದಿನಪತ್ರಿಕೆ
  • ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ
    In (ರಾಜ್ಯ ) ಜಿಲ್ಲೆ
  • ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.