Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ
(ರಾಜ್ಯ ) ಜಿಲ್ಲೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಳೆ ವಿಮೆ ಮಾಡಿಸಿಕೊಳ್ಳುವಂತೆ ಕೃಷಿ ಇಲಾಖೆಯ ಪ್ರಸಾದ್ ಮನವಿ

ಉದಯರಶ್ಮಿ ದಿನಪತ್ರಿಕೆ

ವರದಿ: ಶ್ರೀಕಂಠ ಈಶ್ವರ್
ಎಚ್ ಡಿ ಕೋಟೆ: ತಾಲೂಕಿನ ಹಲವು ಭಾಗಗಳಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬರಗಾಲದ ಛಾಯೆ ಆವರಿಸಿದೆ. ಈ ಬಾರಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬೆಳೆಗಳು ಒಣಗುತ್ತಿದ್ದು, ಕೊಳವೆ ಬಾವಿಗಳು ಕೂಡ ಬರಿದಾಗಿವೆ. ಮುಸುಕಿನ ಜೋಳ ಒಣಗುತ್ತಿದ್ದು, ಹತ್ತಿ ಬೆಳೆ ಯಲ್ಲಿ ಯಾವುದೇ ಬೆಳವಣಿಗೆ ಕೂಡ ಕಂಡುಬರುತ್ತಿಲ್ಲ. ಇನ್ನು ಹೊಗೆಸೊಪ್ಪು ಕೂಡ ಬೆಳೆಯದೆ ಇರುವುದರಿಂದ ರೈತರು ಆತಂಕಗೊಂಡಿದ್ದಾರೆ. ಇನ್ನು ಸುರಿಯುತ್ತಿರುವ ಇಬ್ಬನಿಗೆ ಬೆಳೆಗಳು ನಾಶವಾಗುತ್ತಿದ್ದು, ಅನ್ನದಾತನಿಗೆ ದಿಕ್ಕೆತೋಚದಂತಾಗಿದೆ.
ತಾಲೂಕಿನಲ್ಲಿ ಈ ತಿಂಗಳಲ್ಲಿ ಇಲ್ಲಿಯವರಿಗೆ ಕೇವಲ ನಾಲ್ಕರಿಂದ ಐದು ದಿನಗಳು ಮಾತ್ರ ಸಾಧಾರಣ ಮಳೆಯಾಗಿದ್ದರೆ, ಬೀಚನಹಳ್ಳಿ, ಆಲನಹಳ್ಳಿಯಲ್ಲಿ ಒಂದು ಹನಿ ಕೂಡ ಮಳೆ ಧರೆಗೆ ಬಿದ್ದಿಲ್ಲ. ಹೀಗಾಗಿ ರೈತರು ಕಷ್ಟಪಟ್ಟು ಬೆಳೆದಿದ್ದ ಬೆಳೆಗಳು ನೀರಿಲ್ಲದೆ ಒಣಗುತ್ತಿದ್ದು, ಅನ್ನದಾತ ಆಕಾಶ ನೋಡುವಂತಾಗಿದೆ. ಜೂನ್ ತಿಂಗಳಲ್ಲಿ ವಾಡಿಕೆಗಿಂತ ಶೇ. 52 ರಷ್ಟು ಕಡಿಮೆ ಮಳೆಯಾಗಿರುವುದರಿಂದ ಬಹುತೇಕ ಕಡೆ ರೈತರು ಇನ್ನು ಬಿತ್ತನೆ ಬೀಜವನ್ನೇ ಮಾಡಿಲ್ಲ. ಜಮೀನು ಹದಮಾಡಿಕೊಂಡು, ಬಿತ್ತನೆ ಬೀಜ ಮನೆಯಲ್ಲಿಟ್ಟುಕೊಂಡು ವರುಣನ ಆಗಮನಕ್ಕಾಗಿ ಎದುರು ನೋಡುತ್ತಿದ್ದಾರೆ.
ಜುಲೈ ತಿಂಗಳಿಗೆ ಅಂದಾಜು 398 ಮಿಲಿ ಮೀಟರ್ ನಷ್ಟು ವಾಡಿಕೆ ಮಳೆಯಾಗಬೇಕಾಗಿತ್ತು. ಆದರೆ ಕೇವಲ 211 ಮಿಲಿ ಮೀಟರ್ ನಷ್ಟು ಮಳೆಯಾಗಿದ್ದು, ಈ ವರ್ಷ ಶೇ.47ರಷ್ಟು ಮಳೆ ಕೊರತೆ ಉಂಟಾಗಿದೆ. ಕಳೆದ ವರ್ಷ ಇಲ್ಲಿಯವರೆಗೆ ಅಂದಾಜು 600 ಮಿಲಿ ಮೀಟರ್ ಗಿಂತ ಹೆಚ್ಚು ಮಳೆಯಾಗಿ ತಾಲೂಕಿನ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದವು, ಆದರೆ ಈ ಬಾರಿ ಮಳೆ ಕೊರತೆಯಿಂದ ತಾಲೂಕಿನ ರೈತರ ಜೀವನಾಡಿಯಾಗಿರುವ ಕಪಿಲಾ ಒಡಲು ಮತ್ತೆ ಬರಿದಾಗುವ ಸ್ಥಿತಿಗೆ ತಲುಪಿದೆ. ತಾಲೂಕಿನಲ್ಲಿ ಪೂರ್ವ ಮುಂಗಾರು ಮಳೆಗೆ 60,927 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಬೆಳೆಯಲಾಗುತ್ತಿತ್ತು. ಆದರೆ ಈ ಸಲ 34,434 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬೆಳೆಗಳನ್ನು ಬೆಳೆಯಲಾಗಿದೆ.

ರೈತರು ಬೆಳೆವಿಮೆ ಮಾಡಿಸಿಕೊಳ್ಳಲು ಸಲಹೆ

ಕೃಷಿ ಇಲಾಖೆಯ ಮಾಹಿತಿ ಪ್ರಕಾರ ತಾಲೂಕಿನಲ್ಲಿ 25000 ಹೆಕ್ಟೆರ್ ಪ್ರದೇಶದಲ್ಲಿ ಮುಸುಕಿನ ಜೋಳ, 5150 ಹೆಕ್ಟೆರ್ ಪ್ರದೇಶದಲ್ಲಿ ಹೊಗೆ ಸೊಪ್ಪು, 3070 ಹೆಕ್ಟೆರ್ ಪ್ರದೇಶದಲ್ಲಿ ಹತ್ತಿ,1350 ಹೆಕ್ಟೆರ್ ಪ್ರದೇಶದಲ್ಲಿ ಅಲಸಂದೆ,150 ಹೆಕ್ಟೆರ್ ಪ್ರದೇಶದಲ್ಲಿ ಉದ್ದು, 200 ಹೆಕ್ಟೆರ್ ಪ್ರದೇಶದಲ್ಲಿ ರಾಗಿ, 100 ಹೆಕ್ಟೆರ್ ಪ್ರದೇಶದಲ್ಲಿ ತೊಗರಿ,150 ಹೆಕ್ಟೆರ್ ಪ್ರದೇಶದಲ್ಲಿ ಹೆಸರು ಬೆಳೆಯಲಾಗಿದೆ ಅಷ್ಟೇ. ವಾರದ ಹಿಂದೆ ಸುರಿಯುತ್ತಿದ್ದ ಮಳೆ ಇದೀಗ ಕಡಿಮೆಯಾಗಿತ್ತಾ ಬಂದಿದ್ದು, ಬಿಸಿಲಿನ ಝಳ ಹೆಚ್ಚಾಗಿದೆ. ಹೀಗಾಗಿ ರೈತರು ಎಚ್ಚರಿಕೆಯಿಂದ ವ್ಯವಸಾಯ ಮಾಡಬೇಕಾಗಿದೆ. ಹವಾಮಾನ ಶಾಸ್ತ್ರಜ್ಞರ ಪ್ರಕಾರ ಭಾರತದ ಹವಾಮಾನ ಮೇಲೆ ಎಲ್ ನಿನೋ ಪ್ರಭಾವ ಬೀರಿದ್ದು, ಶುಷ್ಕ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿರುವುದಾಗಿ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಮಿಶ್ರ ಬೇಸಾಯದ ಜೊತೆಗೆ ವೈಜ್ಞಾನಿಕ ರೀತಿಯಲ್ಲಿ ಬೇಸಾಯ ಪದ್ಧತಿ ಅಳವಡಿಸಿಕೊಂಡು, ಬೆಳೆ ವಿಮೆ ಮಾಡಿಸಿಕೊಳ್ಳುವುದರ ಮೂಲಕ ಬೆಳೆಹಾನಿಯಿಂದ ಕೊಂಚ ಮಟ್ಟಿಗೆ ಪಾರಾಗಬೇಕಾಗಿದೆ.

“ಮುಸುಕಿನ ಜೋಳ ಬೆಳೆಯುವ ರೈತರು ಬೆಳೆಗೆ ವಿಮೆ ಮಾಡಿಸಲು ಈ ತಿಂಗಳ 31ನೇ ತಾರೀಕು ಕೊನೆಯ ದಿನಾಂಕವಾಗಿದ್ದು ರೈತರು ತಾವುಗಳು ಫಸಲು ವಿಮಾ ಯೋಜನೆಯನ್ನು ಗ್ರಾಮ ಒನ್ ಸೆಂಟರ್, ಸಾಮಾನ್ಯ ನಾಗರಿಕ ಸೇವಾ ಕೇಂದ್ರ, ಅಥವಾ ತಾವು ಖಾತೆದಾರರಾಗಿರುವ ಬ್ಯಾಂಕ್ ಶಾಖೆಗಳ ಮೂಲಕ ವಿಮೆ ಯೋಜನೆಯನ್ನು ಮಾಡಿಸಿ ಬೆಳೆ ನಷ್ಟದಿಂದ ಪಾರಾಗಬಹುದಾಗಿದೆ.”

– ಪ್ರಸಾದ್
ಕೃಷಿ ಇಲಾಖೆ ಸಹಾಯಕ ನಿರ್ದೇಶಕರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ

ಮನೆ ಮನೆ ಗಣತಿ & ಡಿಜಿಟಲೀಕರಣ ಕಾರ್ಯಕ್ಕೆ ವೇಗ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ
    In (ರಾಜ್ಯ ) ಜಿಲ್ಲೆ
  • ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮನೆ ಮನೆ ಗಣತಿ & ಡಿಜಿಟಲೀಕರಣ ಕಾರ್ಯಕ್ಕೆ ವೇಗ
    In (ರಾಜ್ಯ ) ಜಿಲ್ಲೆ
  • ೨,೫೨,೫೭೦ ಮತದಾರರ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಬುರುಡೆ ಬಿಡುವ ಸರ್ಕಾರ :ಭೂಸನೂರ ವಾಗ್ದಾಳಿ
    In (ರಾಜ್ಯ ) ಜಿಲ್ಲೆ
  • ವಿವಾದಿತ ಸ್ಥಳದಲ್ಲಿ ತಳವಾರ ಸಮಾಜ ಭವನ :ಕಾಮಗಾರಿ ತಡೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಡವರ ಆರ್ಥಿಕ ಸಬಲೀಕರಣಕ್ಕಾಗಿ ಸಂಘ ಸ್ಥಾಪನೆ :ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.