ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ೨೦೨೬-೨೭ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ಪದವಿ ಕೋರ್ಸ್ಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವರಾದ ಸಂತೋಷ್ ಕಾಮಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವವಿದ್ಯಾಲಯದ ಬೆಳಗಾವಿ ಮುಖ್ಯ ಆವರಣದ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ವಿಜಯಪುರದ ಸ್ನಾತಕೋತ್ತರ ಕೇಂದ್ರ ಹಾಗೂ ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿನ ಸಂಯೋಜಿತ ಮಹಾವಿದ್ಯಾಲಯಗಳಲ್ಲಿ ಲಭ್ಯವಿರುವ ಸ್ನಾತಕೋತ್ತರ ಕೋರ್ಸ್ಗಳ ವ್ಯಾಸಂಗಕ್ಕಾಗಿ ಯು.ಯು.ಸಿ.ಎಂ.ಎಸ್ (UUಅಒS) ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ಜುಲೈ.೨೦ ರವರೆಗೆ ಅವಕಾಶ ನೀಡಲಾಗಿತ್ತು. ಈಗ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಕೆಯ ಅವಧಿಯನ್ನು
ದಿನಾಂಕ:೨೧-೦೭-೨೦೨೬ ರಿಂದ ೨೬-೦೭-೨೦೨೬ರವರೆಗೆ ವಿಸ್ತರಿಸಲಾಗಿದೆ.
೨೦೨೬-೨೭ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆಯು ದಿನಾಂಕ : ೦೧-೦೮-೨೦೨೬ ರಿಂದ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಬೆಳಗಾವಿ ಮುಖ್ಯ ಆವರಣದಲ್ಲಿ ಜರುಗಲಿದ್ದು, ಸಂಪೂರ್ಣ ವೇಳಾಪಟ್ಟಿಯನ್ನು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣವಾದ:ತಿತಿತಿ.ಡಿಛಿub.ಚಿಛಿ.iಟಿ ಪಡೆಯಬಹುದಾಗಿದೆ.
ಅದರಂತೆ, ವಿಜಯಪುರದ ಸ್ನಾತಕೋತ್ತರ ಕೇಂದ್ರದಲ್ಲಿನ ಕೋರ್ಸ್ಗಳ ಅಧ್ಯಯನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ದಿನಾಂಕ:೦೩-೦೮-೨೦೨೬ ರಂದು ವಿಜಯಪುರದ ತೋರವಿಯಲ್ಲಿರುವ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರವೇಶ ಪ್ರಕ್ರಿಯೆ ಕೈಗೊಳ್ಳಲಾಗುವುದು.
ವಿದ್ಯಾರ್ಥಿಗಳು ಯು.ಯು.ಸಿ.ಎಂ.ಎಸ್ ಮೂಲಕ ಅರ್ಜಿ ಸಲ್ಲಿಸಿದ ಪ್ರತಿ, ಅರ್ಜಿ ಶುಲ್ಕದ ಪ್ರತಿ ಹಾಗೂ ಸಂಬಂಧಿಸಿದ ಮೂಲ ದಾಖಲಾತಿಗಳು ಮತ್ತು ಒಂದು ಸೆಟ್ ಸ್ವಯಂ ದೃಢೀಕರಿಸಿದ ದಾಖಲಾತಿಗಳ ಪ್ರತಿಯೊಂದಿಗೆ ದಿನಾಂಕ ೦೩-೦೮-೨೦೨೬ ರಂದು ಮುಂಜಾನೆ ೯ ಗಂಟೆಗೆ ವಿಜಯಪುರದ ತೋರವಿ ಸ್ನಾತಕೋತ್ತರ ಕೇಂದ್ರದಲ್ಲಿ ತಪ್ಪದೇ ಹಾಜರಿಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
