ಶ್ರೀ ಶರಣಜ್ಯೋತಿ ವಿದ್ಯಾ ಸಂಸ್ಥೆಯ ಗ್ರಾಮೀಣ ಬಾಲಕಿಯರ ವಸತಿ ನಿಲಯದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ದೀಪಾಕ್ಷಿ ಜಾನಕಿ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಿಯಮಿತ ಆರೋಗ್ಯ ತಪಾಸಣೆಗಳು ಗಂಭೀರವಾಗಿ ಅನಾರೋಗ್ಯಕ್ಕೆ ಒಳಗಾಗುವ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸುಲಭವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ
ಶ್ರೀಮತಿ ದೀಪಾಕ್ಷಿ ಜಾನಕಿ ಹೇಳಿದರು.
ನಗರದ ಕೀರ್ತಿ ನಗರದಲ್ಲಿರುವ ಶ್ರೀ ಶರಣಜ್ಯೋತಿ ವಿದ್ಯಾ ಸಂಸ್ಥೆಯ ಗ್ರಾಮೀಣ ಬಾಲಕಿಯರ ವಸತಿನಿಲಯ (ಹಾಸ್ಚೆಲ್) ದಲ್ಲಿರುವ ಬಾಲಕಿಯರಿಗಾಗಿ ಜುಲೈ ೨೦ ಸೋಮವಾರ ಏರ್ಪಡಿಸಿದ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಸಂಸ್ಥೆಯ ಅಧಿಕಾರಿಗಳು ನಮ್ಮ ಇಲಾಖೆಯ ಅನುದಾನದ ಸಹಾಯ ಪಡೆದು ಇಲ್ಲಿಯ ಬಾಲಕಿಯರ ಆರೋಗ್ಯದ ಹಿತದೃಷ್ಟಿಯಿಂದ ಇಂತಹ ಉಪಯುಕ್ತ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ಶರಣಜ್ಯೋತಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ದೇವನಗಾಂವ ಮಾತನಾಡಿ, ಮಕ್ಕಳ ಆರೋಗ್ಯ ತಪಾಸಣೆ ಮಾಡುವುದರಿಂದ ಇಲ್ಲಿಯ ಹೆಣ್ಣುಮಕ್ಕಳ ಆರೋಗ್ಯದಲ್ಲಾಗುವ ಬದಲಾವಣೆಗಳ ಕುರಿತು ಅರಿಯಲು ಸಾಧ್ಯವಾಗುತ್ತದೆ. ಗ್ರಾಮೀಣ ಮಕ್ಕಳಿಗೆ ಅನುಕೂಲವಾಗುತ್ತದೆ.
ಹೀಗಾಗಿ ಸಂಸ್ಥೆಯಲ್ಲಿ ನಿಯಮಿತವಾಗಿ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲು ಇಲಾಖೆಯ ಅಧಿಕಾರಿಗಳು ಹಿಂದಿನಂತೆ ಮುಂದೆಯೂ ಸಹಕರಿಸಲು
ಮನವಿ ಮಾಡಿಕೊಂಡರು.
ಆರೋಗ್ಯ ಅಧಿಕಾರಿ ಡಾ. ಪಿ.ಎಸ್.ಪಾಟೀಲ ಮಾತನಾಡಿ, ಬಾಲಕಿಯರಿಗೆ ಪೌಷ್ಟಿಕ ಆಹಾರ ಸೇವನೆಯಿಂದಾಗುವ ಪ್ರಯೋಜನಗಳ ಕುರಿತು ವಿವರಿಸಿದರಲ್ಲದೆ ಕರಿದ ಮತ್ತು ಪ್ಯಾಕೆಟ್ ಆಹಾರ ಪದಾರ್ಥಗಳಿಂದ ದೂರವಿರಲು ಸಲಹೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀಕ್ಷಕಿ ಶ್ರೀಮತಿ ಅನಿತಾ ಪಾಟೀಲ ಆರೋಗ್ಯದ ವಿಷಯದಲ್ಲಿ ಬಾಲಕಿಯರು ವಹಿಸಬೇಕಾದ ಮುಂಜಾಗ್ರತೆ ಕುರಿತು ಕಿವಿಮಾತು ಹೇಳಿದರು.
ವಸತಿ ನಿಲಯದ ಅಧೀಕ್ಷಕಿ ವಿಜಯಲಕ್ಷ್ಮಿ ಎಂ ದೇವನಗಾಂವ ಅವರು, ಬಾಲಕಿಯರು ಆರೋಗ್ಯದ ಕಾಳಜಿಯೊಂದಿಗೆ ಉತ್ತಮ ಸಂಸ್ಕಾರ ಮತ್ತು ಶಿಸ್ತು ರೂಢಿಸಿಕೊಳ್ಳುವಂತೆ ತಿಳಿ ಹೇಳಿದರು.
ಶಿಬಿರದಲ್ಲಿ ವೈದ್ಯಕೀಯ ಸಿಬ್ಬಂದಿಗಳಾದ ಡಾ. ಪಿ.ಎಸ್.ಪಾಟೀಲ (ಆರೋಗ್ಯಾಧಿಕಾರಿ), ವಾಣಿಶ್ರೀ ಹಿರೇಮಠ (ಎಲ್ಟಿಒ), ರಾಧಾ ಪಾಟೀಲ (ಪಿಎಚ್ಸಿಒ), ಸನಾ ಆಳಂದ (ಎಚೈಒ), ರೂಪಾ ಬಿದರಿ (ಆಶಾ ಕಾರ್ಯಕರ್ತೆ) ಪಾಲ್ಗೊಂಡಿದ್ದರು.
ಶಿಬಿರದಲ್ಲಿ ವಸತಿ ನಿಲಯದ ಒಟ್ಟು ೫೮ ಬಾಲಕಿಯರು ಹಾಗೂ ಸಿಬ್ಬಂದಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.


