Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

“ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ

ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ

ಪ್ರಾಣಿ ಪ್ರೀತಿಯ ಸಂದೇಶ ಸಾರಿದ ತದ್ದೇವಾಡಿ ಗ್ರಾಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ
(ರಾಜ್ಯ ) ಜಿಲ್ಲೆ

ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಡೆದ ವಿಶ್ವ ಮೆದುಳು ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಜಿಲ್ಲಾಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಇದೊಂದು ಮಹತ್ವಾಕಾಂಕ್ಷಿಯ ಕಾರ್ಯಕ್ರಮ ಜಿಲ್ಲೆಯಲ್ಲಿನ ಎಲ್ಲ ನರರೋಗ ಸಂಬಂಧಿತ ಕಾಯಿಲೆಗೆ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ವಿಭಾಗ ಸಹಕಾರಿಯಾಗಲಿದ್ದು, ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಹೇಳಿದರು.
ಹಿಂದಿನ ಕಾಲದ ಜನರು ತಮ್ಮ ಜೀವನಶೈಲಿ ಚೆನ್ನಾಗಿ ಕಾಪಾಡಿಕೊಳ್ಳುತ್ತಿದ್ದರು. ಸಮಯಕ್ಕೆ ಸರಿಯಾಗಿ ಊಟ, ಕೆಲಸ ಕಾರ್ಯಗಳನ್ನು ನಿಯಮಿತವಾಗಿ ನಿರ್ವಹಿಸುತ್ತಿದ್ದರು. ಆ ಕಾರಣಕ್ಕಾಗಿ ಮೆದುಳಿನ ಆರೋಗ್ಯಕ್ಕೆ ಸಂಬಂಧಿಸಿದಂತೆ ಅವರಿಗೆ ಕಾಯಿಲೆಗಳು ಬಾಧಿಸುತ್ತಿರಲಿಲ್ಲ. ಇಂದಿನ ಪೀಳಿಗೆಯು ಜೀವನಶೈಲಿ ಬದಲಾಯಿಸಿಕೊಳ್ಳುವುದರ ಮೂಲಕ ಮೆದುಳು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಜಿಲ್ಲಾಸ್ಪತ್ರೆ ಸಹಯೋಗದಲ್ಲಿ ವಿಶ್ವ ಮೆದುಳು ದಿನಾಚರಣೆ ಅಂಗವಾಗಿ ಬುಧವಾರ ಜಿಲ್ಲಾಸ್ಪತ್ರೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ ಅವರು ಮಾತನಾಡಿ, ನಮ್ಮ ಹಿರಿಯರ ಜೀವನ ಶೈಲಿ ಚೆನ್ನಾಗಿದ್ದರಿಂದ ಅವರಿಗೆ ಅಂದಾಜು ೬೦ ರಿಂದ ೬೫ ವರ್ಷದಲ್ಲಿ ರೋಗಗಳು ಕಾಣಿಸಿಕೊಳ್ಳುತ್ತಿದ್ದವು. ಆದರೆ ಈಗಿನ ಆಧುನಿಕ ಮತ್ತು ತಾಂತ್ರಿಕ ಜಗತ್ತಿನಲ್ಲಿ ನಮ್ಮ ಜೀವನಶೈಲಿಗಳು ತದ್ವಿರುದ್ದವಾಗಿದ್ದರಿಂದ ಈಗಿನ ೨೦-೨೫ರ ವಯಸ್ಸಿನ ಯುವಕರು ಮೆದುಳು ರೋಗ ಸಂಬಂಧಿಸಿದಂತೆ ಕಾಯಿಲೆಗೆ ಒಳಗಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಮೆದುಳು ರೋಗಕ್ಕೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದೆ. ಬಾಧಿತರು ಸದುಪಯೋಗ ಮಾಡಿಕೊಳ್ಳಬಹುದಾಗಿದೆ ಎಂದರು.
ಜಿಲ್ಲಾಸ್ಪತ್ರೆಯ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ವಿಭಾಗದ ನರರೋಗ ತಜ್ಞ ಡಾ. ವಿರುಪಾಕ್ಷಪ್ಪ ಬಿರಾದಾರ ಮಾತನಾಡಿ, ಪ್ರತಿಯೊಬ್ಬರೂ ದಿನನಿತ್ಯ ಕನಿಷ್ಠ ೭ ರಿಂದ ೮ ಗಂಟೆ ನಿದ್ರೆ ಮಾಡಬೇಕು. ಉತ್ತಮ ಆಹಾರ ಪದ್ದತಿ ಹಾಗೂ ಉತ್ತಮ ಜೀವನಶೈಲಿ ರೂಢಿಸಿಕೊಂಡರೆ ಆರೋಗ್ಯಯುತವಾಗಿ ಇರಬಹುದು ಎಂದರು.
ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ವಿಭಾಗದ ವಿಜಯಪುರ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳಾದ ಡಾ. ಅರ್ಚನಾ ಕುಲಕರ್ಣಿ, ಮನೋರೋಗ ತಜ್ಞ ಡಾ. ಮಂಜುನಾಥ ಮಸಳಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾಸ್ಪತ್ರೆಯ ಆರ್ ಎಂಒ ಡಾ. ಕೆ. ಡಿ. ಗುಂಡಬಾವಡಿ, ಡಾ. ಮಹೇಶ ಮೋರೆ, ಡಾ. ದೇವಮಾನೆ, ಡಾ. ಮಂಜುನಾಥ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಿ. ಎಮ್. ಕೋಲೂರ, ಜಿಲ್ಲಾ ಸಂಯೋಜಕ ಆನಂದ ರಾಠೋಡ ಸೇರಿದಂತೆ ಜಿಲ್ಲಾಸ್ಪತ್ರೆಯ ಸಿಬ್ಬಂದಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸಿಬ್ಬಂದಿ ಹಾಗೂ ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ರವಿ ಕಿತ್ತೂರ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

“ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ

ಪ್ರಾಣಿ ಪ್ರೀತಿಯ ಸಂದೇಶ ಸಾರಿದ ತದ್ದೇವಾಡಿ ಗ್ರಾಮ

ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • “ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಪ್ರಾಣಿ ಪ್ರೀತಿಯ ಸಂದೇಶ ಸಾರಿದ ತದ್ದೇವಾಡಿ ಗ್ರಾಮ
    In (ರಾಜ್ಯ ) ಜಿಲ್ಲೆ
  • ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ಹಾನಿ ಸಂದರ್ಭ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಬೆಳೆ ವಿಮೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಅದಿವಾಸಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು :ಸಿ.ಎನ್.ರಾಜು
    In (ರಾಜ್ಯ ) ಜಿಲ್ಲೆ
  • ಮಗಳ ಜನ್ಮದಿನಕ್ಕೆ ಕಲಿಕೋಪಕರಣ ವಿತರಿಸಿದ ಯೋಧ
    In (ರಾಜ್ಯ ) ಜಿಲ್ಲೆ
  • ತಿಕೋಟಾದಲ್ಲಿ ನೀರಾವರಿ ಯೋಜನೆ ಹೊಸ ಕಚೇರಿಗಳ ಪ್ರಾರಂಭಕ್ಕೆ ಆದೇಶ
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್. ಆಯುರ್ವೇದ ಕಾಲೇಜಿಗೆ ಸತತ ೨ನೇ ಸಲ ೪ನೇ ರ‌್ಯಾಂಕ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.