ಉದಯರಶ್ಮಿ ದಿನಪತ್ರಿಕೆ
ಇಂಡಿ: ರಾಷ್ಟ್ರಧ್ವಜವು ದೇಶದ ಸ್ವಾತಂತ್ರ್ಯ, ಏಕತೆ ಮತ್ತು ಸಾವಭೌಮತ್ವದ ಪ್ರತೀಕವಾಗಿದ್ಧು , ಪ್ರತಿಯೊಬ್ಬ ನಾಗರಿಕರು ಅದರ ಘನತೆ ಮತ್ತು ಗೌರವವನ್ನು ಕಾಪಾಡುವುದು ತಮ್ಮ ಕತ೯ವ್ಯ ಎಂದು ಎಸ್,ವಾಯ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡಿ,ಎಸ್, ಕುಲಕರ್ಣಿ ಹೇಳಿದರು.
ಭಾರತ ಸೇವಾದಳ ಜಿಲ್ಲಾ ಸಮಿತಿ ವಿಜಯಪುರ, ತಾಲೂಕು ಸಮಿತಿ ಇಂಡಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇಂಡಿ ಇವರುಗಳ ಸಹಯೋಗದಲ್ಲಿ ತಾಲೂಕಿನ ಮಿರಗಿ ಗ್ರಾಮದ ಶ್ರೀ ಯಲ್ಲಾಲಿಂಗೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕರಿಗಾಗಿ, ಮಕ್ಕಳಿಗಾಗಿ ಆಯೋಜಿಸಲಾದ “ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆ ಕುರಿತಾದ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭಾರತ ಸೇವಾದಳ ವಲಯ ಸಂಘಟಕ ನಾಗೇಶ ಡೋಣೂರ ರಾಷ್ಟ್ರಧ್ವಜ, ರಾಷ್ಟ್ರಗೀತೆ ಕುರಿತು ಬೌದ್ಧಿಕವಾಗಿ ಮಾಹಿತಿ ನೀಡಿದರು. ಹಾಗೇ ರಾಷ್ಟ್ರಧ್ವಜ ಕಟ್ಟುವ, ಮಡಚುವ, ಹಾರಿಸುವ ವಿಧಾನವನ್ನು ಪ್ರಾಯೋಗಿಕವಾಗಿ. ಎಲ್ಲಾ ಶಿಕ್ಷಕರಿಗೂ, ಮಕ್ಕಳಿಗೂ ತಿಳಿಸಿದರು.
ಶಿಕ್ಷಕ ವೈ.ಜಿ. ಬಿರಾದಾರ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ ಹಾಗೂ ಮಕ್ಕಳು ಉಪಸ್ಥಿತರಿದ್ದರು. ಶಿಕ್ಷಕ ಮಾಣಿಕ್ ನಿಂಬಾಳ್ಕರ್ ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕ ಜೆ.ಸಿ ಗಬಸಾವಳಗಿ ಸ್ವಾಗತಿಸಿದರು, ಶಿಕ್ಷಕಿ ನಂದಾ ಚೌವ್ಹಾಣ್ ವಂದಿಸಿದರು.

