ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕ, ಸಿಂದಗಿ ವತಿಯಿಂದ ಜು.೨೭ ಸೋಮವಾರ ಬೆಳಿಗ್ಗೆ ೧೦ಗಂಟೆಗೆ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಸಾನ್ನಿಧ್ಯವನ್ನು ಯಂಕಂಚಿ ಕುಂಟೋಜಿ ಹಿರೇಮಠದ ಶ್ರೀ ಅಭಿನವ ರುದ್ರಮುನಿ ಶಿವಾಚಾರ್ಯರು ವಹಿಸಲಿದ್ದಾರೆ. ಸಮ್ಮುಖವನ್ನು ರಾಂಪೂರ ಪಿ.ಎ. ಗ್ರಾಮದ ಶ್ರೀಸಂಗನಬಸವೇಶ್ವರ ಆರೂಢ ಮಠದ ಶ್ರೀ ನಿತ್ಯಾನಂದ ಮಹಾರಾಜರು ವಹಿಸುವರು. ಕಾರ್ಯಕ್ರಮವನ್ನು ಶಾಸಕ ಅಶೋಕ ಮನಗೂಳಿ ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ರಮೇಶ ಭೂಸನೂರ ಅವರು ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ದಂಡಾಧಿಕಾರಿ ಕರೆಪ್ಪ ಬೆಳ್ಳಿ ಮತ್ತು ಹಿರಿಯ ವರದಿಗಾರರಾದ ಶಾಂತು ಹಿರೇಮಠ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕಾಧ್ಯಕ್ಷ ಮಹಾಂತೇಶ ನೂಲಾನವರ ವಹಿಸಿಕೊಳ್ಳುವರು. ವಿಶೇಷ ಆಹ್ವಾನಿತರಾಗಿ ಕಾನಿಪ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪ್ರಕಾಶ ಬೆಣ್ಣೂರ, ಹಿರಿಯ ಪತ್ರಿಕೋದ್ಯಮಿ ಟಿ.ಕೆ.ಮಲಗೊಂಡ, ನಿಕಟಪೂರ್ವ ಅಧ್ಯಕ್ಷ ಆನಂದ ಶಾಬಾದಿ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ತಾಪಂ ಇಒ ರಾಮು ಅಗ್ನಿ, ಬಿಇಒ ಟಿ.ಎಸ್.ಆಲಗೂರ, ತಾಲೂಕು ವೈದ್ಯಾಧಿಕಾರಿ ಡಾ.ಎ.ಎ.ಮಾಗಿ, ಸಿಪಿಐ ಸುನೀಲ ಮೂಲಿಮನಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಉಪಸ್ಥಿತಿಯನ್ನು ಕಾಲೇಜಿನ ಪ್ರಾಚಾರ್ಯೆ ಡಾ.ಜೆ.ಸಿ.ನಂದಿಕೋಲ ವಹಿಸಿಕೊಳ್ಳುವರು ಎಂದು ಜಿಲ್ಲಾ ಕಾರ್ಯಕಾರಿ ಸಮಿತಿ ನಾಮ ನಿರ್ದೇಶಿತ ಸದಸ್ಯ ಮಲ್ಲಿಕಾರ್ಜುನ ಅಲ್ಲಾಪೂರ, ತಾಲೂಕಾಧ್ಯಕ್ಷ ಮಹಾಂತೇಶ ನೂಲಾನವರ, ಪ್ರ.ಕಾರ್ಯದರ್ಶಿ ಇಸ್ಮಾಯಿಲ್ ಶೇಖ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಾಲೂಕಿನ ಕಾನಿಪ ಸಂಘದ ಸರ್ವ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳಲಾಗಿದೆ.

