Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು

ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ

ಜ್ಞಾನದ ಕರ್ತೃ ಗುರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು
(ರಾಜ್ಯ ) ಜಿಲ್ಲೆ

ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಉತ್ತರ ಕರ್ನಾಟಕದ ಜೀವನಾಡಿ ಕೃಷ್ಣಾ ನದಿಯ ಉಗಮಸ್ಥಳ ಮಹಾರಾಷ್ಟ್ರದ ಮಹಾಬಳೇಶ್ವರದಲ್ಲಿ 25ನೇ ವರ್ಷದ ನಿರಂತರ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮಕ್ಕಾಗಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ 100ಕ್ಕೂ ಹೆಚ್ಚು ರೈತರು, ರೈತ ಮಹಿಳೆಯರು ಹಾಗೂ ಮುಖಂಡರು ಮಂಗಳವಾರ ಮಹಾಬಳೇಶ್ವರಕ್ಕೆ ಪ್ರಯಾಣ ಬೆಳೆಸಿದರು.
ವಿಜಯಪುರ ನಗರದ ಹೊಸ ಪ್ರವಾಸಿ ಮಂದಿರದಿಂದ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಅವರ ನೇತೃತ್ವದಲ್ಲಿ ರೈತರ ತಂಡ ವಿಶೇಷ ವಾಹನಗಳಲ್ಲಿ ಹೊರಟಿತು.
ಬುಧವಾರ ಮಹಾಬಳೇಶ್ವರದ ಪಂಚಗಂಗಾ ದೇವಸ್ಥಾನದಲ್ಲಿ ಕೃಷ್ಣಾ ಮಾತೆಗೆ ವಿಶೇಷ ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯಿದ್ದರೂ ಪ್ರತಿವರ್ಷ ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುವ ಮಳೆಯಿಂದ ಕೃಷ್ಣಾ ನದಿ ತುಂಬಿ ಹರಿದು ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಗಳ ಜನರು ಮತ್ತು ರೈತರ ಬದುಕಿಗೆ ಜೀವಜಲ ಒದಗಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ಮಾತೆಯ ಮೇಲಿನ ಕೃತಜ್ಞತೆಯ ಸಂಕೇತವಾಗಿ ಕಳೆದ 25 ವರ್ಷಗಳಿಂದ ಈ ಪೂಜೆ ನಿರಂತರವಾಗಿ ನಡೆಯುತ್ತಿದೆ.
ಈ ವರ್ಷದ ಯಾತ್ರೆಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಡಿ. ಅಂಗಡಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿರಾದಾರ್, ರಾಮಣ್ಣ ಬಾಟಿ, ವಿಜಯ ಪೂಜಾರಿ, ಶ್ರೀಶೈಲ್ ಒಡಗಲ್, ಅಶೋಕ್ ಗಿಡ್ಡಪಗೋಳ, ಶೇಕು ಗಾಣಿಗೇರ್, ಆನಂದ ಬಿಸ್ಟಗೊಂಡ, ಈರಪ್ಪ ಜಿದ್ದಿಬಾಗಿಲ, ಪುಟ್ಟು ತೇಲಿ, ಶ್ರೀಮತಿ ಕಸ್ತೂರಿ ಬೆಳ್ಳುಬ್ಬಿ, ಶ್ರೀಮತಿ ರೇಣುಕಾ ಅಂಥನಿ, ಮಲ್ಲು ಕಲಾದಗಿ, ವಿಜಯ ಪೂಜಾರ, ಆನಂದ ಬಿಷ್ಟಗೊಂಡ, ಸೇರಿದಂತೆ 100ಕ್ಕೂ ಹೆಚ್ಚು ರೈತರು ಹಾಗೂ ಮಹಿಳೆಯರು ಪಾಲ್ಗೊಂಡಿದ್ದಾರೆ. ನೆರೆ ರಾಜ್ಯ ಮಹಾರಾಷ್ಟ್ರದ ಸಾತಾರ ಜಿಲ್ಲೆಯ ಮಹಾಬಳೇಶ್ವರದಲ್ಲಿರುವ ಪಂಚಗಂಗಾ ಕ್ಷೇತ್ರವು ಕೃಷ್ಣಾ ಸೇರಿದಂತೆ ಐದು ನದಿಗಳ ಉಗಮಸ್ಥಳವಾಗಿ ಪ್ರಸಿದ್ಧಿ ಪಡೆದಿದೆ. ಇದೇ ಪವಿತ್ರ ಕ್ಷೇತ್ರದಲ್ಲಿ ಬುಧವಾರ ವಿಶೇಷ ಪೂಜೆ, ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ನೆರವೇರಲಿದ್ದು, ಉತ್ತರ ಕರ್ನಾಟಕದ ಸಮೃದ್ಧಿ, ಉತ್ತಮ ಮಳೆ ಹಾಗೂ ರೈತರ ಸುಭಿಕ್ಷಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಗುತ್ತದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ

ಜ್ಞಾನದ ಕರ್ತೃ ಗುರು

ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ

ಅಂಧಕಾರ ಅಳಿಸಿ ಸುಜ್ಞಾನದೆಡೆಗೆ ಕೊಂಡೊಯ್ಯುವವ ಗುರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು
    In (ರಾಜ್ಯ ) ಜಿಲ್ಲೆ
  • ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ
    In ವಿಶೇಷ ಲೇಖನ
  • ಜ್ಞಾನದ ಕರ್ತೃ ಗುರು
    In (ರಾಜ್ಯ ) ಜಿಲ್ಲೆ
  • ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ
    In (ರಾಜ್ಯ ) ಜಿಲ್ಲೆ
  • ಅಂಧಕಾರ ಅಳಿಸಿ ಸುಜ್ಞಾನದೆಡೆಗೆ ಕೊಂಡೊಯ್ಯುವವ ಗುರು
    In ವಿಶೇಷ ಲೇಖನ
  • ವಿಬಿ-ಜಿ ರಾಮ್ ಜಿ: ಕೂಲಿಕಾರರಿಗೆ ಉದ್ಯೋಗ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಕನ್ನೊಳಿ-ಕೊಕಟನೂರದಲ್ಲಿ ಡಿಜಿಟೈಸೇಶನ್ ಕಾರ್ಯ ಶೇ.೧೦೦ ಪೂರ್ಣ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.