Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ

ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು

ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉತ್ತಮ ವ್ಯಕ್ತಿತ್ವ, ಮಾನವೀಯತೆ, ಶಿಸ್ತು ಶಿಕ್ಷಣದ ಮುಖ್ಯ ಉದ್ದೇಶ
(ರಾಜ್ಯ ) ಜಿಲ್ಲೆ

ಉತ್ತಮ ವ್ಯಕ್ತಿತ್ವ, ಮಾನವೀಯತೆ, ಶಿಸ್ತು ಶಿಕ್ಷಣದ ಮುಖ್ಯ ಉದ್ದೇಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಶಿಲಾಧರ ಎನ್. ಜಾಧವ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಶಿಕ್ಷಣವೆಂದರೆ ಕೇವಲ ಅಂಕಗಳನ್ನು ಗಳಿಸುವುದಲ್ಲ. ಉತ್ತಮ ವ್ಯಕ್ತಿತ್ವ, ಮಾನವೀಯತೆ, ಶಿಸ್ತು ಹಾಗೂ ಸಮಾಜದ ಬಗ್ಗೆ ಕಾಳಜಿ ಬೆಳೆಸಿಕೊಳ್ಳುವುದೂ ಶಿಕ್ಷಣದ ಮುಖ್ಯ ಉದ್ದೇಶವಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಶಿಲಾಧರ ಎನ್. ಜಾಧವ ಹೇಳಿದರು.
ಸಿಂದಗಿ ನಗರದ ಆರ್.ಡಿ. ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಪಠ್ಯಪೂರಕ ಚಟುವಟಿಕೆಗಳು, ರೋವರ್ ಮತ್ತು ರೇಂಜರ್, ಭಾರತ ಸೇವಾದಳ ಹಾಗೂ ಎನ್.ಎಸ್.ಎಸ್. ಘಟಕಗಳ ಉದ್ಘಾಟನೆ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಮಹಾವಿದ್ಯಾಲಯವು ಪ್ರತಿವರ್ಷ ಉತ್ತಮ ಫಲಿತಾಂಶ ನೀಡುತ್ತಿದ್ದು, ಶಿಸ್ತು, ಸಂಸ್ಕಾರ ಮತ್ತು ಗುಣಮಟ್ಟದ ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿದೆ. ಇಲ್ಲಿನ ವಿದ್ಯಾರ್ಥಿಗಳು ರಾಜ್ಯ ಹಾಗೂ ದೇಶದ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಹೇಳಿದರು.
ಈ ವೇಳೆ ವಿಜಯಪುರದ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಹಾಗೂ ನರರೋಗ ತಜ್ಞ ಡಾ.ವಿರುಪಾಕ್ಷಪ್ಪ ಬಿರಾದಾರ ಮಾತನಾಡಿದರು.
ಇದೇ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದಲ್ಲಿ ಸಾರಂಗಮಠದ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಸಮ್ಮುಖ ವಹಿಸಿದ್ದರು. ಮಹಾವಿದ್ಯಾಲಯದ ಪ್ರಾಚಾರ್ಯ ಬಿ.ಎಂ.ಸಿಂಗನಳ್ಳಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಪಿ.ವಿ.ಮಹಲಿನಮಠ, ಎಸ್.ಎಸ್.ಜಾಧವ, ಡಾ.ಶರಣಬಸವ ಜೋಗೂರ, ಬಿ.ಬಿ. ಜಮಾದಾರ, ಶಿವಶರಣ ಬೂದಿಹಾಳ, ಡಾ.ವಿ.ಪಿ. ನಂದಿಕೋಲ, ಎನ್.ಬಿ. ಪೂಜಾರಿ, ವಿ.ಕೆ.ಹಿರೇಮಠ, ಎಂ.ಐ. ಮುಜಾವರ, ಸಂಗಮೇಶ ಮಾರ್ಸನಳ್ಳಿ, ಶಿವರಾಜ ಕುಂದಗೋಳ, ಪ್ರಸನ್ನ ಜೋಗೂರ ಸೇರಿದಂತೆ ಭೋದಕ ಭೋದಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು. ಚರ್ಚಾಕೂಟ ವಿಭಾಗದ ಕಾರ್ಯಾಧ್ಯಕ್ಷ ಜೆ.ಎಂ.ಗಾಣಗೇರ ಸ್ವಾಗತಿಸಿ ಪರಿಚಯಿಸಿದರು. ರಾಹುಲ ನಾರಾಯಣಕರ, ಸ್ನೇಹಾ ಪಾಟೀಲ ಹಾಗೂ ನಿಖಿತಾ ಹಿರೇಮಠ ನಿರೂಪಿಸಿದರು. ನಾಜ್ಮಾ ಮೇಲಿನಮನಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ

ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು

ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನಕ್ಕೆ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಆ.೧ರಂದು ವ್ಯಸನ ಮುಕ್ತ ದಿನಾಚರಣೆಗೆ ಸಕಲ ಸಿದ್ದತೆ :ಡಾ.ಔದ್ರಾಮ
    In (ರಾಜ್ಯ ) ಜಿಲ್ಲೆ
  • ನಾಗರಿಕತೆ ವಿಕಾಸದ ಇತಿಹಾಸ ತಿಳಿಸುವ ನಂದಿ‌ಮೂರ್ತಿಗಳು
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಪಾಟೀಲ ನೇತೃತ್ವದಲ್ಲಿ ದ್ರಾಕ್ಷಿ ಬೆಳೆಗಾರರ ಸಭೆ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ಹರಿದ ೬೫ ಸಾವಿರ ಕ್ಯೂಸೆಕ್ ನೀರು :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.