ವಿಜಯಪುರ: ಸ್ಥಳೀಯವಾಗಿ ಲಭ್ಯವಿರುವ ಕೃಷಿ ಮತ್ತು ಇತರೆ ಜೈವಿಕ ಸಂಪನ್ಮೂಲಗಳನ್ನು ಕಚ್ಚಾ ವಸ್ತುವಾಗಿ ಬಳಸಿ ಸಂಸ್ಕರಣೆ, ಮೌಲ್ಯವರ್ಧನೆ, ಪ್ಯಾಕಿಂಗ್ ಹಾಗೂ ಸೂಕ್ತ ಬ್ರ್ಯಾಂಡ್ ಮೂಲಕ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ ರೈತರ ಆದಾಯ ದ್ವೀಗುಣಗೊಳಿಸುವ ಮುಖ್ಯ ಹೊಂದಿರುವ ಪ್ರಸಕ್ತ ೨೦೨೩-೨೪ನೇ ಸಾಲಿನ ಸೆಕೆಂಡರಿ ಕೃಷಿ ಕಾರ್ಯಕ್ರಮದಡಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಕಾರ್ಯಕ್ರಮದಡಿ ವೈಯಕ್ತಿಕ ರೈತ ಫಲಾನುಭವಿಗಳು, ರೈತ ಉತ್ಪಾದಕ ಸಂಸ್ಥೆಗಳು-ಸ್ವಸಹಾಯ, ಗುಂಪು-ಸಹಕಾರಿ, ಸಂಘ-ಸೊಸೈಟಿಗಳು ಸೆಕೆಂಡರಿ ಕೃಷಿಗೆ ಸಂಬಂಧಪಟ್ಟ ಚಟುವಟಿಕೆಗಳನ್ನು ಶೇ.೫೦ರ ಸಹಾಯಧನದಲ್ಲಿ ಅನುಷ್ಠಾನಗೊಳಿಸಬಹುದಾಗಿದೆ. ಸದರಿ ಚಟುವಟಿಕೆಗಳ ಬಗ್ಗೆ ಆಸಕ್ತ ಫಲಾನುಭವಿಗಳು ತಾಲೂಕಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಿ ನಿಗದಿತ ಅರ್ಜಿ ಪಡೆದು ದಿನಾಂಕ : ೧೦-೧೧-೨೦೨೩ರವರೆಗೆ ಸಲ್ಲಿಸಬಹುದಾಗಿದೆ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಸೆಕೆಂಡರಿ ಕೃಷಿ ಕಾರ್ಯಕ್ರಮದಡಿ ಮಾರುಕಟ್ಟೆ ವ್ಯವಸ್ಥೆ :ಅರ್ಜಿ ಆಹ್ವಾನ
Related Posts
Add A Comment
