Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೆಲವು ಶ್ರೀಮಂತರ ಶೋಕಿ, ಮೌಡ್ಯ, ದುರಹಂಕಾರ
(ರಾಜ್ಯ ) ಜಿಲ್ಲೆ

ಕೆಲವು ಶ್ರೀಮಂತರ ಶೋಕಿ, ಮೌಡ್ಯ, ದುರಹಂಕಾರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ

  • ವಿವೇಕಾನಂದ ಎಚ್ ಕೆ, ಬೆಂಗಳೂರು

ಹುಲಿ ಉಗುರು, ಆನೆ ದಂತ, ನವಿಲು ಗರಿ, ಜಿಂಕೆ – ಹುಲಿಯ ಚರ್ಮ, ಮೀನಿನ ವಾಸ್ತು, ಹಾವಿನ ವಿಷ, ಸಾರಂಗದ ಕೊಂಬು, ಆನೆ – ಕರಡಿಯ ಕೂದಲು ಹೀಗೆ ಕೆಲವು ಸಂರಕ್ಷಿತ ಪ್ರಾಣಿಗಳ ವಸ್ತುಗಳನ್ನು ಉಪಯೋಗಿಸುವ ಖಯಾಲಿ..
ಪ್ರಕೃತಿಯ ಮಡಿಲಿನ ರಾಷ್ಟ್ರಕವಿ ಕುವೆಂಪು ಒಂದು ಕಡೆ ಹೇಳುತ್ತಾರೆ ” ಹೂವು ಬಳ್ಳಿಗೆ ಅಲಂಕಾರವೇ ಹೊರತು ವಿಗ್ರಹಕ್ಕಲ್ಲ”. ಹಾಗೆಯೇ ವಚನಕಾರ ಅಂಬಿಗರ ಚೌಡಯ್ಯ ಒಂದು ವಚನದಲ್ಲಿ ಹೇಳುವ ಸಾರಾಂಶ ಹೀಗಿದೆ..
“ಆರೈಕೆಗೆ ಬಿತ್ತಿದ ಗಿಡದ ಹೂವನ್ನು ಕೊಯ್ದು, ಊರಿನವರು ಬಾಯಾರಿಕೆಗಾಗಿ ಕಟ್ಟಿಸಿದ ಕೆರೆಯ ನೀರನ್ನು ತಂದು, ನಾಡಿನ ಜನರೆಲ್ಲ ನೋಡಲಿ ಎಂದು ಆಡಂಬರಕ್ಕಾಗಿ, ಬಹಿರಂಗವಾಗಿ ಪೂಜೆ ಮಾಡುವುದು ತಪ್ಪು. ಹಾಗೆ ಪೂಜೆ ಮಾಡುವುದರಿಂದ ಅದರ ಪುಣ್ಯ ಹೂವಿಗೋ, ನೀರಿಗೋ ಅಥವಾ ಪೂಜಿಸಿದ ಮನುಷ್ಯನಿಗೋ ನನಗಂತೂ ಗೊತ್ತಿಲ್ಲ. ನಿನಗಾದರೂ ಗೊತ್ತಿದ್ದರೆ ಹೇಳು ಎಂದು ಅಂಬಿಗರ ಚೌಡಯ್ಯ ತನ್ನ ಇಷ್ಟ ದೈವವನ್ನು ಕೇಳುತ್ತಾರೆ “
ಆದರೆ ಈ ಮೂರ್ಖ – ಅಮಾನವೀಯ ಕೆಲವು ಜ್ಯೋತಿಷ್ಯ ಶಾಸ್ತ್ರಕಾರರು ಮೇಲೆ ಹೇಳಿದ ಪ್ರಾಣಿಗಳ ಅಂಗಾಂಗಗಳು ಧರಿಸಿದರೆ ಮನುಷ್ಯರಿಗೆ ಲಾಭವಾಗುತ್ತದೆ ಎಂದು ಬಹಿರಂಗವಾಗಿ ಹೇಳುತ್ತಾರೆ. ತಪ್ಪು ಕಲ್ಪನೆಯ ಪರಮಾವಧಿ. ಮಾಧ್ಯಮಗಳಿಗೆ ಅವರೇ ಮಹತ್ವದ ವ್ಯಕ್ತಿಗಳು..
ಮನುಷ್ಯನ ಆಸೆಗಳಿಗೆ ಮಿತಿಯೇ ಇಲ್ಲ. ಸಣ್ಣ ಮಟ್ಟದ ನಟರುಗಳು ದೊಡ್ಡ ಸ್ಟಾರ್ ಗಳಾಗುವುದು, ಸಾಮಾನ್ಯ ವ್ಯಕ್ತಿಗಳು ಜನಪ್ರಿಯ ಸ್ವಾಮೀಜಿಗಳಾಗಿ ಖ್ಯಾತಿ ಪಡೆಯುವುದು, ಬಡ ಕಾರ್ಮಿಕ ಶ್ರೀಮಂತ ಉದ್ಯಮಿಯಾಗುವುದು, ಒಬ್ಬ ಪಕ್ಷದ ಕಾರ್ಯಕರ್ತ ಮಂತ್ರಿಯಂತ ಉನ್ನತ ಹುದ್ದೆಗೇರುವುದು ಈ ಸಮಾಜದಲ್ಲಿ ಸಹಜವಾಗಿ ನಡೆಯುತ್ತದೆ..
ಇದಕ್ಕಾಗಿ ಅವರ ಶ್ರಮ, ಪ್ರತಿಭೆ, ಪರಿಸ್ಥಿತಿ ಎಲ್ಲವೂ ಕಾರಣವಾಗಿರುತ್ತದೆ. ಆದರೆ ಅದನ್ನು ಸರಿಯಾಗಿ ಅರ್ಥಮಾಡಿಕೊಳ್ಳದೆ, ಯಶಸ್ಸಿನ ನಂತರ ಅಷ್ಟಕ್ಕೇ ತೃಪ್ತಿಯಾಗಿ ಆ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡುತ್ತಾ, ಯಶಸ್ಸು ನೀಡಿದ ಸಮಾಜಕ್ಕೆ ನಿಷ್ಕಲ್ಮಶವಾಗಿ ಒಂದಷ್ಟು ಸಹಾಯ ಮಾಡುವುದನ್ನು ಮರೆತು ಮತ್ತಷ್ಟು ಸುಖ ಸಂತೋಷ ಹಣ ಅಧಿಕಾರದ ವ್ಯಾಮೋಹಕ್ಕೆ ಬಲಿಯಾಗಿ ಈ ರೀತಿಯ ಮೂಢನಂಬಿಕೆಗಳಿಂದ ಕಾನೂನು ಬಾಹಿರ, ಧರ್ಮ ಬಾಹಿರ ಕೆಲಸಗಳಲ್ಲಿ ತೊಡಗುವ ಇವರ ವರ್ತನೆಗೆ ಏನು ಹೇಳುವುದು..
ಇಷ್ಟು ದಿನ ಈ ಬಗ್ಗೆ ಸರಿಯಾಗಿ ಸಾರ್ವಜನಿಕರಿಗೆ ಮಾಹಿತಿ ನೀಡಿ ಜಾಗೃತ ಗೊಳಿಸದ ಅರಣ್ಯ ಇಲಾಖೆಯವರ ಬೇಜವಾಬ್ದಾರಿ ಸಹ ಇಲ್ಲಿ ಎದ್ದು ಕಾಣುತ್ತದೆ..
ಮನುಷ್ಯನು ಸಹ ಒಂದು ಪ್ರಾಣಿ. ಆತನ ಯಾವ ಅಂಗಗಳೂ ಶ್ರೇಷ್ಠವೂ ಅಲ್ಲ ಕನಿಷ್ಠವೂ ಅಲ್ಲ. ಅದೊಂದು ಸಹಜ ಸೃಷ್ಟಿಯ ಕೊಡುಗೆ. ಅಷ್ಟು ಮಾತ್ರದ ಸಾಮಾನ್ಯ ಜ್ಞಾನವೂ ಇಲ್ಲದಾಯಿತೇ ಅಥವಾ ತನ್ನ ಅಂತಸ್ತಿನ ಪ್ರದರ್ಶನದ ದುರಹಂಕಾರವೇ..
ಈ‌ ಸಂದರ್ಭದಲ್ಲಿ ಈ ಸಮಾಜದಲ್ಲಿ ಪ್ರತಿನಿತ್ಯ ಅನರ್ಹ ಅಪಾಯಕಾರಿ ಶಾಸ್ತ್ರ ಹೇಳುವವರಿಂದ ಮೌಡ್ಯ ಬಿತ್ತಿ ಈ ರೀತಿಯ ಘಟನೆಗಳಿಗೆ ಪ್ರಚೋದನೆ ನೀಡುತ್ತಿರುವ ಮಾಧ್ಯಮಗಳ ಮೇಲೆ ಸಹ ಕ್ರಮ ಕೈಗೊಳ್ಳಬೇಕು. ಆಗ ಇದನ್ನು ಬುಡ ಸಮೇತ ಕಿತ್ತು ಹಾಕಬಹುದು.
ನೆನಪಿಡಿ, ಈ‌ ಸೃಷ್ಟಿಯಲ್ಲಿ ಎಲ್ಲರೂ ಸಹಜ ಆರೋಗ್ಯವಾಗಿ ಜೀವಿಸಬೇಕೆಂದರೆ ಪ್ರಕೃತಿಯ ಸಸ್ಯಗಳು, ಜೀವರಾಶಿಗಳು, ಬೆಟ್ಟ, ಗುಡ್ಡ, ಕಾಡು, ನದಿ, ಸಮುದ್ರ, ಸರೋವರ, ಹಿಮ ಪರ್ವತಗಳು, ಮರುಭೂಮಿಗಳು ಎಲ್ಲವೂ ತನ್ನ ಮೂಲ ಸ್ವರೂಪದಲ್ಲಿ ಅಸ್ತಿತ್ವದಲ್ಲಿ ಇರಬೇಕು. ಇಲ್ಲದಿದ್ದರೆ ಪ್ರಕೃತಿ ತನ್ನ ನಿಯಂತ್ರಣ ಮೀರುತ್ತದೆ. ಆಗ ಪ್ರಾಕೃತಿಕ ವಿಕೋಪಗಳು ಹೆಚ್ಚಾಗಿ ಎಲ್ಲಕ್ಕೂ ತೊಂದರೆಯಾಗುತ್ತದೆ. ಈಗ ಆಗುತ್ತಿರುವುದು ಸಹ ಅದೇ. ಇದನ್ನು ತಡೆಗಟ್ಟುವಲ್ಲಿ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ ಇದೆ. ದಯವಿಟ್ಟು ಸ್ವಲ್ಪ ಎಚ್ಚರಿಕೆ ವಹಿಸಿ‌‌..

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.