ಮನಗೂಳಿಯಲ್ಲಿ ಯುವನಿಧಿ ಅರಿವು ಕಾರ್ಯಕ್ರಮ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿದ್ಯಾರ್ಥಿಗಳಿಗೆ ಸರ್ಕಾರವು ಅನುಷ್ಟಾನಗೊಳಿಸುವ ಪಂಚಾ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತರ ಬಸವನಬಾಗೇವಾಡಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ ವಂದಾಲ ಹೇಳಿದರು.
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಮನಗೂಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಜುಲೈ.೩೧ರ ಶುಕ್ರವಾರ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆ ಅರಿವು ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಯುವನಿಧಿ ಯೋಜನೆ’ ಈಗಾಗಲೇ ಸರ್ಕಾರವು ಅನುಷ್ಠಾನಗೊಳಿಸಿದ್ದು. ಈ ಯೋಜನೆಯ ಲಾಭವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ ಎಂದರು.
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗ ಅಧಿಕಾರಿ ಮಹೇಶ. ಜೆ. ಮಾಳವಾಡೇಕರ ಮಾತನಾಡಿ, ಯುವನಿಧಿ ಯೋಜನೆಯ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಬಸವನಬಾಗೇವಾಡಿ ತಾಲೂಕಿನ ಪಂಚಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮಹಿಬೂಬ ನಾಲ್ನೋಡಿ ಮಾತನಾಡಿ, ಯುವನಿಧಿ ಯೋಜನೆಯಡಿ ಪದವೀಧರರಿಗೆ ೩೦೦೦ ಮತ್ತು ಡಿಪ್ಲೋಮಾದಾರರಿಗೆ ೧೫೦೦ ಸರಕಾರ ನಿರುದ್ಯೋಗ ಭತ್ಯೆಯನ್ನು ೨ ವರ್ಷಗಳವರೆಗೆ ನೀಡುತ್ತಿದೆ. ಬಸವನಬಾಗೇವಾಡಿ ತಾಲೂಕಿನ ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿ ಈ ಯೋಜನೆಯ ಲಾಭವನ್ನು ಪಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಎಪಿ.ಎಂ.ಸಿ. ಮಾಜಿ ಅಧ್ಯಕ್ಷರಾದ ವಿಶ್ವನಾಥಗೌಡ ಪಾಟೀಲ್,ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರಾದ ಜಾಹೀದಾ ಮಕಾನದಾರ
ಉಪನ್ಯಾಸಕಿ ನಂದಿನಿ ಸಿ.ಎಸ್. ಉಪನ್ಯಾಸಕ ಈರಯ್ಯಾ ಮಠಪತಿ
ಬಸವನಬಾಗೇವಾಡಿ ತಾಲೂಕಿನ ಪಂಚಗ್ಯಾರಂಟಿ ಸದಸ್ಯರಾದ ಮಾಹಾಂತೇಶ ತಳೆವಾಡ, ಕವಿತಾ ಮಣೂರಮಠ, ಹಾಜಿಸಾಬ ಕೌಲಗಿ ಸೇರಿದಂತೆ ಕಾಲೇಜಿನ ಆಡಳಿತ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

