ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ೨೦೨೬-೨೭ನೇ ಸಾಲಿಗೆ ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯ ಮೂಲಕ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ನೇರವಾಗಿ ಸಾಲ- ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೊಟೇಲ್ ಉದ್ಯಮ (ಕ್ಯಾಟರಿಂಗ್). ಅಂಗಡಿ, ಟೈಲರಿಂಗ್, ಟ್ಯಾಕ್ಸಿ ಹಾಗೂ ಹಸು ಸಾಕಾಣಿಕೆಯಂತಹ ಸ್ವಯಂ ಉದ್ಯೋಗ ಕೈಗೊಳ್ಳಲು ಕನಿಷ್ಠ ೧ ಲಕ್ಷ ರೂ. ಹಾಗೂ ಗರಿಷ್ಠ ೨ ಲಕ್ಷ ರೂ. ಲಕ್ಷ ಆರ್ಥಿಕ ನೆರವು ನೀಡಲಾಗುವುದು.
ಆನ್ ಲೈನ್ ಮುಖಾಂತರ ಞsbಜb.ಞಚಿಡಿಟಿಚಿಣಚಿಞಚಿ.gov.iಟಿ, ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಆಗಸ್ಟ್ ೩೧ ಕೊನೆಯ ದಿನಾಂಕ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : ೮೭೬೨೨ ೪೯೨೩೦ ಸಂಪರ್ಕಿಸಬಹುದು. ಸ್ಥಳೀಯ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಔದ್ರಾಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಪತ್ರ ಬಿಡುಗಡೆ: ಇದೇ ವೇಳೆ ವ್ಯಾಪಕ ಪ್ರಚಾರಕ್ಕಾಗಿ ಕರಪತ್ರಗಳನ್ನು ಪ್ರೊಬೇಷನರಿ ಐಎಎಸ್ ಅಧಿಕಾರಿ ಅಭಿಷೇಕ ಸಾಹೇರಾ, ಎಡಿಸಿ ಡಾ. ಔದ್ರಾಮ, ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸತೀಶ ಕಾಪಸಿ, ಮಹಾಂತೇಶ ಎಸ್. ಬಾಗೇವಾಡಿ, ಲತಿಫಾ ಎ. ನಗರಕರ, ಆನಂದ ಜೋಶಿ, ಉಲ್ಲಾಸ ಪಾಟೀಲ, ರಾಜೇಂದ್ರ ಜೋಶಿ, ಎಚ್. ಬಿ. ಕುಲಕರ್ಣಿ, ಸುಧೀಂದ್ರ ಕುಲಕರ್ಣಿ, ಎಸ್. ಎಮ್. ದೇಸಾಯಿ ಉಪಸ್ಥಿತರಿದ್ದರು.

