ಸ್ವಾತಂತ್ರ್ಯ ದಿನಾಚರಣೆ ಕೊಡುಗೆ: ಆಗಸ್ಟ್ ಪೂರ್ತಿ ಕೊಡುಗೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಗಸ್ಟ್ ತಿಂಗಳು ಪೂರ್ತಿ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಕಡಾ ೫೦ ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ.
ಸಾರ್ವಜನಿಕರು ಹಾಗೂ ಸಾಹಿತ್ಯಾಸಕ್ತರು ಈ ಸುವರ್ಣಾವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕಾಗಿ ಪ್ರಾಧಿಕಾರವು ಕೋರಿದೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ, ಜಿಲ್ಲಾ ಮಟ್ಟದಲ್ಲಿ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗಳು, ಕನ್ನಡ ಪುಸ್ತಕ ಪ್ರಾಧಿಕಾರದಿಂದ ಕಾರ್ಯಾಚರಿಸುತ್ತಿರುವ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳು.
ಪ್ರಾಧಿಕಾರದ ಅಧಿಕೃತ ವೆಬ್ಸೈಟ್ hಣಣಠಿs://ಞಠಿಠಿ.ಞಚಿಡಿಟಿಚಿಣಚಿಞಚಿ.gov.iಟಿಮೂಲಕವೂ ಶೇ.೫೦ ರಿಯಾಯಿತಿಯಲ್ಲಿ ಪುಸ್ತಕಗಳನ್ನು ಪಡೆಯಬಹುದು. ಕನ್ನಡ ಪುಸ್ತಕ ಪ್ರಾಧಿಕಾರವು ಇದುವರೆಗೆ ವೈವಿಧ್ಯಮಯ ಸಾಹಿತ್ಯ ಪ್ರಕಾರಗಳಲ್ಲಿ ಸುಮಾರು ೭೬೯ ಶೀರ್ಷಿಕೆಗಳನ್ನು ಪ್ರಕಟಿಸಿದೆ. ವ್ಯಕ್ತಿಚಿತ್ರಗಳು ಹಾಗೂ ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ ಮತ್ತು ಕೃಷಿ ವಿಷಯಗಳು ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ ಹಾಗೂ ಪರಿಸರ ಸಂಬಂಧಿ ಮೌಲ್ಯಯುತ ಕೃತಿಗಳು ಸೇರಿವೆ.
ಅತ್ಯಂತ ಪ್ರಜ್ಞಾವಂತ ಲೇಖಕರಿಂದ ರಚಿತವಾದ ಈ ಮೌಲಿಕ ಗ್ರಂಥಗಳನ್ನು ತೀರಾ ಕಡಿಮೆ ಬೆಲೆಯಲ್ಲಿ ಜನಸಾಮಾನ್ಯರಿಗೆ ತಲುಪಿಸುವುದೇ ಪ್ರಾಧಿಕಾರದ ಮುಖ್ಯ ಉದ್ದೇಶವಾಗಿದೆ. ಪುಸ್ತಕ ಪ್ರೇಮಿಗಳು ಈ ತಿಂಗಳು ಪೂರ್ತಿ ಲಭ್ಯವಿರುವ ಈ ಅವಕಾಶದ ಲಾಭ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
