Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

5E ಮಾದರಿ ಪಾಠ ಯೋಜನೆ ಕಾರ್ಯಗಾರಕ್ಕೆ ಚಾಲನೆ

ಗೋವುಗಳ ಸಾಗಾಟಕ್ಕೆ ತಡೆ: ವಾಹನ ವಶಕ್ಕೆ ಪಡೆದ ಪೊಲೀಸರು

ರಾಜೀನಾಮೆ ಹಿಂಪಡೆದ ಶಾಸಕ ಯಶವಂತರಾಯಗೌಡ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅರ್ಹ ಮತದಾರರು ಹೊರಗುಳಿಯದಂತೆ ಮತಪಟ್ಟಿ ಸಿದ್ಧಪಡಿಸಿ
(ರಾಜ್ಯ ) ಜಿಲ್ಲೆ

ಅರ್ಹ ಮತದಾರರು ಹೊರಗುಳಿಯದಂತೆ ಮತಪಟ್ಟಿ ಸಿದ್ಧಪಡಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿವಿಧ ಇಲಾಖಾಧಿಕಾರಿಗಳ ವಿಡಿಯೋ ಸಂವಾದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ಉದಯರಶ್ಮಿ ದಿನಪತ್ರಿಕೆ

​ವಿಜಯಪುರ: ಜಿಲ್ಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಜೂನ್ ೩೦ರಿಂದ ಅತ್ಯಂತ ಭರದಿಂದ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಅತ್ಯಂತ ಪಾರದರ್ಶಕವಾಗಿ ಕೈಗೊಂಡು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರು ಸೇರ್ಪಡೆಯಾಗದಂತೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕೇಸ್ವಾನ ಸಭಾಂಗಣದಲ್ಲಿ ಬುಧವಾರ ನಡೆದ ವಿವಿಧ ಇಲಾಖಾಧಿಕಾರಿಗಳ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ​ಆಗಸ್ಟ್ ೪ರವರೆಗೆ ಜಿಲ್ಲೆಯಲ್ಲಿ ಒಟ್ಟು ೧೬,೭೯,೪೯೫ ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದ್ದು, ಆನ್‌ಲೈನ್ ಮೂಲಕ ೪,೦೬೯ ಮತದಾರರು ನಮೂನೆ ಸಲ್ಲಿಸಿದ್ದಾರೆ. ಈ ಪ್ರಕ್ರಿಯೆಯಲ್ಲಿ ೧,೫೨,೮೫೯ ಶಾಶ್ವತವಾಗಿ ಸ್ಥಳಾಂತರಗೊಂಡವರನ್ನು, ೫೪,೫೪೯ ಮೃತಪಟ್ಟವರನ್ನು ಹಾಗೂ ೬೩,೬೦೨ ಗೈರುಹಾಜರಾದ ಅಥವಾ ಸಂಗ್ರಹಿಸಲಾಗದ ಮತದಾರರನ್ನು ಗುರುತಿಸಲಾಗಿದ್ದು, ೨೯,೬೨೩ ಹೊಸ ಮತದಾರರು ನೋಂದಾಯಿಸಿಕೊಂಡಿದ್ದಾರೆ. ಮುದ್ದೇಬಿಹಾಳ, ದೇವರ ಹಿಪ್ಪರಗಿ, ಬಸವನ ಬಾಗೇವಾಡಿ, ಬಬಲೇಶ್ವರ, ವಿಜಯಪುರ ನಗರ, ನಾಗಠಾಣ, ಇಂಡಿ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಿಎಲ್‌ಒಗಳಿಂದ ಪ್ರಕ್ರಿಯೆಯನ್ನು ಚುರುಕುಗೊಳಿಸಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅವರು ಸೂಚನೆ ನೀಡಿದರು.
​ಗೈರುಹಾಜರ, ವಲಸೆ, ಮರಣ, ಡುಪ್ಲಿಕೇಟ್ ಮತ್ತು ಇತರೆ (ಂSಆಆಔ) ಮತದಾರರ ಮಾಹಿತಿಯನ್ನು ಪ್ರತಿದಿನ ಜಿಲ್ಲೆಯ ಅಧಿಕೃತ ವೆಬ್‌ಸೈಟ್ hಣಣಠಿs://viರಿಚಿಥಿಚಿಠಿuಡಿಚಿ.ಟಿiಛಿ.iಟಿ ಹಾಗೂ ಪತ್ರಿಕಾ ಪ್ರಕಟಣೆಯ ಗೂಗಲ್ ಲಿಂಕ್‌ಗಳ ಮೂಲಕ ಪ್ರಚುರಪಡಿಸಲಾಗುತ್ತಿದೆ. ಈಗಾಗಲೇ ಗುರುತಿಸಲಾದ ಎಸ್‌ಡಿಡಿಒ ಪಟ್ಟಿಯನ್ನು ಒಂಬತ್ತು ಸೆಟ್‌ಗಳಲ್ಲಿ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಗೆ, ಮತಗಟ್ಟೆ ಅಧಿಕಾರಿಗಳಿಗೆ, ಗ್ರಾಮ ಪಂಚಾಯತಿ, ತಹಶೀಲ್ದಾರ್ ಹಾಗೂ ತಾಲೂಕು ಕಚೇರಿಗಳ ಪ್ರಕಟಣಾ ಫಲಕಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗುವುದು. ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳು ಈ ಪಟ್ಟಿಯನ್ನು ಪರಿಶೀಲಿಸಿ, ಯಾವುದೇ ಅನುಮಾನಗಳಿದ್ದರೆ ಸಂಬಂಧಿಸಿದ ಮತದಾರರ ನೋಂದಣಾಧಿಕಾರಿಗಳಿಗೆ ಮಾಹಿತಿ ನೀಡಬಹುದಾಗಿದ್ದು, ಅಧಿಕಾರಿಗಳು ಮರು ಪರಿಶೀಲನೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಿದ್ದಾರೆ.
​ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆಗೆ (ಅಟಚಿims ಚಿಟಿಜ ಔbರಿeಛಿಣioಟಿs) ಆಗಸ್ಟ್ ೧೭ ರಿಂದ ಸೆಪ್ಟೆಂಬರ್ ೧೬, ೨೦೨೬ರವರೆಗೆ ಕಾಲಾವಕಾಶ ನೀಡಲಾಗಿದೆ. ಅರ್ಹ ಮತದಾರರು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ನಮೂನೆ-೬ ಭರ್ತಿ ಮಾಡಿ ಅಂತಿಮ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸಿಕೊಳ್ಳಬಹುದು. ಅಲ್ಲದೆ, ಮುಂಬರುವ ಅಕ್ಟೋಬರ್ ೧, ೨೦೨೬ಕ್ಕೆ ೧೮ ವರ್ಷ ತುಂಬುವ ಯುವ ಮತದಾರರು ಸಹ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅವಕಾಶವಿದೆ.
ನೀಡಲಾಗಿರುವ ಚುನಾವಣಾ ನೋಟೀಸ್ ಒಂದು ತಿಳುವಳಿಕೆ ಪತ್ರವಾಗಿದ್ದು, ಮತದಾರರು ಗಣತಿ ನಮೂನೆಯ ಹಿಂಬದಿಯಲ್ಲಿ ಸೂಚಿಸಲಾದ ಯಾವುದಾದರೂ ಒಂದು ಅಗತ್ಯ ದಾಖಲೆಯನ್ನು ನೀಡಿ ತಮ್ಮ ಹೆಸರನ್ನು ಅಂತಿಮ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
​ಈ ಸಭೆಯಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಯೋಜನಾ ನಿರ್ದೇಶಕ ಬದ್ರುದ್ದಿನ ಸೌದಾಗರ್, ತಹಶೀಲ್ದಾರ್ ಪ್ರಶಾಂತ ಚನಗೊಂಡ, ಚುನಾವಣಾ ತಹಶೀಲ್ದಾರ್ ಪವಾರ, ಸಚ್ಚಿದಾನಂದ ತೇರದಾಳ ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

5E ಮಾದರಿ ಪಾಠ ಯೋಜನೆ ಕಾರ್ಯಗಾರಕ್ಕೆ ಚಾಲನೆ

ಗೋವುಗಳ ಸಾಗಾಟಕ್ಕೆ ತಡೆ: ವಾಹನ ವಶಕ್ಕೆ ಪಡೆದ ಪೊಲೀಸರು

ರಾಜೀನಾಮೆ ಹಿಂಪಡೆದ ಶಾಸಕ ಯಶವಂತರಾಯಗೌಡ

ದಲಿತರ ಮೇಲಿನ ದೌರ್ಜನ್ಯ ತಡೆಯಲು ಅಪ್ಪುರಾಜ್ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • 5E ಮಾದರಿ ಪಾಠ ಯೋಜನೆ ಕಾರ್ಯಗಾರಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಗೋವುಗಳ ಸಾಗಾಟಕ್ಕೆ ತಡೆ: ವಾಹನ ವಶಕ್ಕೆ ಪಡೆದ ಪೊಲೀಸರು
    In (ರಾಜ್ಯ ) ಜಿಲ್ಲೆ
  • ರಾಜೀನಾಮೆ ಹಿಂಪಡೆದ ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ದಲಿತರ ಮೇಲಿನ ದೌರ್ಜನ್ಯ ತಡೆಯಲು ಅಪ್ಪುರಾಜ್ ಆಗ್ರಹ
    In (ರಾಜ್ಯ ) ಜಿಲ್ಲೆ
  • ಆ.೮ ರಂದು ವಿಜಯಪುರದಲ್ಲಿ ಕ್ರಿಯೋಸ್ಫಿಯರ್ ಶೃಂಗಸಭೆ
    In (ರಾಜ್ಯ ) ಜಿಲ್ಲೆ
  • ನಿಡಗುಂದಿ ತಾಲ್ಲೂಕಿನ ಶಾಲೆಗಳಿಗೆ ೧೫,೦೦೦ ನೋಟ್‌ಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿಗಳಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆ
    In (ರಾಜ್ಯ ) ಜಿಲ್ಲೆ
  • ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಪಡಿತರ ಆಹಾರ ಧಾನ್ಯ ನ್ಯಾಯಬೆಲೆ ಅಂಗಡಿಗಳಿಗೆ ಹಂಚಿಕೆ
    In (ರಾಜ್ಯ ) ಜಿಲ್ಲೆ
  • ಅರ್ಹ ಮತದಾರರು ಹೊರಗುಳಿಯದಂತೆ ಮತಪಟ್ಟಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.