Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಿರಿಯ ಪತ್ರಕರ್ತರ ಕೊಡುಗೆ ಅನನ್ಯ :ಎಂ.ಎಲ್.ಜಮಾದಾರ

ಸಂಶೋಧನೆಯೇ ಸತ್ಯದ ಅನ್ವೇಷಣೆ :ಡಾ.ಮಹೇಶ ಚಿಂತಾಮಣಿ

ನಿರಾಣಿ ಇಂಜಿನಿಯರಿಂಗ್ ಸಿಬ್ಬಂದಿಗೆ ರೈತರಿಂದ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುಂಗಾರು ಹಂಗಾಮಿಗೆ ಕಾಲುವೆ ಜಾಲಕ್ಕೆ ನೀರು
(ರಾಜ್ಯ ) ಜಿಲ್ಲೆ

ಮುಂಗಾರು ಹಂಗಾಮಿಗೆ ಕಾಲುವೆ ಜಾಲಕ್ಕೆ ನೀರು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೧೪ ದಿನ ಚಾಲೂ, ೧೦ ದಿನ ಬಂದ್ | ಕೆಬಿಜೆಎನ್ನೆಲ್ ಅಧೀಕ್ಷಕ ಅಭಿಯಂತರ ಶಿವಶಂಕರ ದೇವಾಪುರ ಮಾಹಿತಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೬-೨೭ನೇ ಸಾಲಿನ ಮುಂಗಾರು ಹಂಗಾಮಿಗಾಗಿ ರಾಮಪುರ (ಪ.ಆ) ವೃತ್ತದ ವ್ಯಾಪ್ತಿಯ ಕಾಲುವೆ ಹಾಗೂ ಗುತ್ತಿ ಬಸವಣ್ಣ ಕಾಲುವೆಗಳಿಗೆ ೧೪ ದಿನ ಚಾಲೂ ಹಾಗೂ ೧೦ ದಿನ ಬಂದ್ ನಂತೆ ವಾರಬಂದಿ ಪದ್ಧತಿಯನುಸಾರ ೧೧೬ ದಿನಗಳವರೆಗೆ ಜು. ೨೮ರಿಂದ ನೀರು ಹರಿಸಲಾಗುತ್ತಿದೆ ಎಂದು ಕೃಷ್ಣಾ ಭಾಗ್ಯ ಜಲನಿಗಮದ ಅಧೀಕ್ಷಕ ಅಭಿಯಂತರರಾದ ಶಿವಶಂಕರ ದೇವಾಪುರ ತಿಳಿಸಿದ್ದಾರೆ.
ಮುಂಗಾರು ಹಂಗಾಮಿಗಾಗಿ ನೀರು ಪೋಲಾಗದಂತೆ, ಆಲಮಟ್ಟಿ ಮತ್ತು ನಾರಾಯಣಪೂರ ಜಲಾಶಯದಡಿ ಬರುವ ಕಾಲುವೆಗಳಿಗೆ ನೀರು ಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಲಸಂಪನ್ಮೂಲ ಸಚಿವರು ಸೂಚಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಎರಡು ಜಲಾಶಯಗಳಲ್ಲಿ ನೀರಾವರಿಗಾಗಿ ಕಾಯ್ದಿರಿಸಿರುವ ನೀರಿನ ಪ್ರಮಾಣದಲ್ಲಿ ಮುಂಗಾರು ಹಂಗಾಮಿಗಾಗಿ ನೀರು ಹರಿಸುವ ಅವಧಿಯನ್ನು, ಆಲಮಟ್ಟಿ ಜಲಾಶಯದಲ್ಲಿ ಒಳಹರಿವು ಹೊರಹರಿವು ಪ್ರಮಾಣಕ್ಕೆ ಸಮನಾಗಿರುವವರೆಗೆ ಸತತವಾಗಿ ಕಾಲುವೆ ಜಾಲಕ್ಕೆ ನೀರು ಹರಿಸಲು ಹಾಗೂ ಒಂದು ವೇಳೆ ಆಲಮಟ್ಟಿಗೆ ಒಳಹರಿವು ಕಡಿಮೆಯಾದ ಪಕ್ಷದಲ್ಲಿ ಜಲಾಶಯಗಳಲ್ಲಿನ ಸಂಗ್ರಹ ಆಧರಿಸಿ, ಈ ಹಿಂದೆ ಅನುಸರಿಸಿದ ೧೪ ದಿನ ಚಾಲೂ ಹಾಗೂ ೧೦ ದಿನ ಬಂದ್ ನಂತೆ ವಾರಬಂದಿ ಪದ್ಧತಿಯನ್ನು ಅನುಸರಿಸಿ ೧೧೬ ದಿನಗಳವರೆಗೆ ಕಾಲುವೆ ಜಾಲಗಳಿಗೆ ನೀರು ಹರಿಸಲಾಗುವುದು ಎಂದವರು ತಿಳಿಸಿದ್ದಾರೆ.
ಕಾಲುವೆ ಚಾಲೂ ದಿನಾಂಕಗಳು: ಜು. ೨೮ ರಿಂದ ಆ. ೧೦ರವರೆಗೆ, ಆ. ೨೧ಸ ರಿಂದ ಸೆ. ೩ರವರೆಗೆ, ಸೆ. ೧೪ ರಿಂದ ಸೆ. ೨೭ರವರೆಗೆ, ಅ. ೮ ರಿಂದ ಅ. ೨೧ರವರೆಗೆ ತಲಾ ೧೪ ದಿನಗಳಂತೆ, ನ. ೧ ರಿಂದ ನ. ೧೦ರವರೆಗೆ ೧೦ ದಿನಗಳಂತೆ ಒಟ್ಟು ೬೬ ದಿನಗಳ ಕಾಲ ಕಾಲುವೆಗಳಿಗೆ ನೀರು ಚಾಲೂ ಇರುವ ದಿನಗಳನ್ನು ನಿಗದಿಪಡಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಕಾಲುವೆ ಬಂದ್ ದಿನಾಂಕಗಳು: ಆ.೧೧ ರಿಂದ ಆ. ೨೦ರವರೆಗೆ, ಸೆ. ೪ ರಿಂದ ಸೆ. ೧೩ರವರೆಗೆ, ಸೆ. ೨೮ ರಿಂದ ಅ. ೭ರವರೆಗೆ , ಅ. ೨೨ ರಿಂದ ಅ. ೩೧ರವರೆಗೆ ಹಾಗೂ ನ. ೧೧ ರಿಂದ ನ. ೨೦ರವರೆಗೆ ತಲಾ ೧೦ ದಿನಗಳಂತೆ ಒಟ್ಟು ೫೦ ದಿನಗಳ ಕಾಲ ಕಾಲುವೆ ಬಂದ್ ಇಡಲಾಗುವುದು ಎಂದವರು ತಿಳಿಸಿದ್ದಾರೆ.
ರೈತರು ನೀರನ್ನು ಮಿತವಾಗಿ ಬಳಸಿ, ಕೃಷ್ಣಾ ಭಾಗ್ಯ ಜಲ ನಿಗಮದ (ಕೆಬಿಜೆಎನ್‌ಎಲ್) ಅಧಿಕಾರಿಗಳೊಂದಿಗೆ ಸಹಕರಿಸಿ ಯಶಸ್ವಿ ನೀರು ನಿರ್ವಹಣೆಗೆ ಕೈಜೋಡಿಸಬೇಕಾಗಿ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಿರಿಯ ಪತ್ರಕರ್ತರ ಕೊಡುಗೆ ಅನನ್ಯ :ಎಂ.ಎಲ್.ಜಮಾದಾರ

ಸಂಶೋಧನೆಯೇ ಸತ್ಯದ ಅನ್ವೇಷಣೆ :ಡಾ.ಮಹೇಶ ಚಿಂತಾಮಣಿ

ನಿರಾಣಿ ಇಂಜಿನಿಯರಿಂಗ್ ಸಿಬ್ಬಂದಿಗೆ ರೈತರಿಂದ ಸನ್ಮಾನ

ಬಸ್ಸಲ್ಲಿ ಸಿಕ್ಕ ಚಿನ್ನ ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಿರಿಯ ಪತ್ರಕರ್ತರ ಕೊಡುಗೆ ಅನನ್ಯ :ಎಂ.ಎಲ್.ಜಮಾದಾರ
    In (ರಾಜ್ಯ ) ಜಿಲ್ಲೆ
  • ಸಂಶೋಧನೆಯೇ ಸತ್ಯದ ಅನ್ವೇಷಣೆ :ಡಾ.ಮಹೇಶ ಚಿಂತಾಮಣಿ
    In (ರಾಜ್ಯ ) ಜಿಲ್ಲೆ
  • ನಿರಾಣಿ ಇಂಜಿನಿಯರಿಂಗ್ ಸಿಬ್ಬಂದಿಗೆ ರೈತರಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಬಸ್ಸಲ್ಲಿ ಸಿಕ್ಕ ಚಿನ್ನ ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್
    In (ರಾಜ್ಯ ) ಜಿಲ್ಲೆ
  • ಒಬ್ಬ ವ್ಯಕ್ತಿ ನಶೆಯಿಂದ ಮುಕ್ತನಾದರೆ ಒಂದು ಕುಟುಂಬ ಉಳಿಯುತ್ತದೆ
    In (ರಾಜ್ಯ ) ಜಿಲ್ಲೆ
  • ಎಪಿಎಂಸಿ ಹೈಟೆಕ್ ಶೌಚಾಲಯ ನಿರ್ಮಾಣ ಸ್ಥಳಕ್ಕೆ ತೀವ್ರ ವಿರೋಧ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸೂಚನೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಹಂಗಾಮಿಗೆ ಕಾಲುವೆ ಜಾಲಕ್ಕೆ ನೀರು
    In (ರಾಜ್ಯ ) ಜಿಲ್ಲೆ
  • ವಿಬಿ-ಜಿ ರಾಮ್-ಜಿ ಯೋಜನೆಯಡಿ ಕಾರ್ಮಿಕರಿಗೆ ನಿರಂತರಉದ್ಯೋಗ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿ ಪತ್ರಿಕೋದ್ಯಮ ವಿಭಾಗದ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.