Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಿರಿಯ ಪತ್ರಕರ್ತರ ಕೊಡುಗೆ ಅನನ್ಯ :ಎಂ.ಎಲ್.ಜಮಾದಾರ

ಸಂಶೋಧನೆಯೇ ಸತ್ಯದ ಅನ್ವೇಷಣೆ :ಡಾ.ಮಹೇಶ ಚಿಂತಾಮಣಿ

ನಿರಾಣಿ ಇಂಜಿನಿಯರಿಂಗ್ ಸಿಬ್ಬಂದಿಗೆ ರೈತರಿಂದ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಶೋಧನೆಯೇ ಸತ್ಯದ ಅನ್ವೇಷಣೆ :ಡಾ.ಮಹೇಶ ಚಿಂತಾಮಣಿ
(ರಾಜ್ಯ ) ಜಿಲ್ಲೆ

ಸಂಶೋಧನೆಯೇ ಸತ್ಯದ ಅನ್ವೇಷಣೆ :ಡಾ.ಮಹೇಶ ಚಿಂತಾಮಣಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಾಗಲಕೋಟೆˌ (ಜಮಖಂಡಿ): “ಸಂಶೋಧನೆ ಎಂದರೆ ಕೇವಲ ಪದವಿ ಪಡೆಯುವ ಸಾಧನವಲ್ಲ; ಅದು ಸತ್ಯದ ಅನ್ವೇಷಣೆಯ ಮೂಲಕ ಸಮಾಜಕ್ಕೆ ಹೊಸ ಜ್ಞಾನವನ್ನು ನೀಡುವ ಸೃಜನಾತ್ಮಕ ಪ್ರಕ್ರಿಯೆ” ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾಲಯ, ವಿಜಯಪುರದ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ. ಮಹೇಶ ಚಿಂತಾಮಣಿ ಅಭಿಪ್ರಾಯಪಟ್ಟರು.
ಜಮಖಂಡಿಯ ಸರಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕೇಂದ್ರದ ಕನ್ನಡ ವಿಭಾಗ ಆಯೋಜಿಸಿದ್ದ “ಕನ್ನಡ ಸಂಶೋಧನೆಯ ವಿಧಿ-ವಿಧಾನಗಳು” ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
“ಸಂಶೋಧನೆ ಮಾನವನ ಸಹಜ ಪ್ರವೃತ್ತಿ. ಸತ್ಯದ ಅನ್ವೇಷಣೆಯೇ ಸಂಶೋಧನೆಯ ಮೂಲ ಆಶಯ. ಸಂಶೋಧನೆಯ ಶಕ್ತಿಯಿಂದಲೇ ಇಂದು ಮನುಷ್ಯ ಮಂಗಳ ಗ್ರಹದ ಅಂಗಳದವರೆಗೂ ತನ್ನ ಹೆಜ್ಜೆ ಇಟ್ಟಿದ್ದಾನೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಸಂಶೋಧನೆಯಿಂದ ಅನೇಕ ಅಪರೂಪದ ಕೃತಿಗಳು ಬೆಳಕಿಗೆ ಬಂದಿವೆ. ವಿದ್ಯಾರ್ಥಿಗಳು ಆಸಕ್ತಿ, ಅವಧಾನ, ಪರಿಶ್ರಮ ಮತ್ತು ತ್ಯಾಗದ ಮನೋಭಾವದಿಂದ ಸಂಶೋಧನಾ ಕ್ಷೇತ್ರಕ್ಕೆ ಕಾಲಿಟ್ಟಾಗ ಮಾತ್ರ ಹೊಸ ಸಾಧ್ಯತೆಗಳು ಅನಾವರಣಗೊಳ್ಳುತ್ತವೆ” ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸುನಂದಾ ಎಸ್. ಶಿರೂರ ಮಾತನಾಡಿ, “ರಾಷ್ಟ್ರೀಯ ಶಿಕ್ಷಣ ನೀತಿಯು ಸಂಶೋಧನೆಗೆ ವಿಶೇಷ ಆದ್ಯತೆ ನೀಡುತ್ತಿದೆ. ಉನ್ನತ ಶಿಕ್ಷಣದಲ್ಲಿ ಸಂಶೋಧನೆ ಕೈಗೊಳ್ಳುವವರಿಗೆ ಸಾಕಷ್ಟು ಅವಕಾಶಗಳಿದ್ದರೂ ವಿದ್ಯಾರ್ಥಿಗಳು ಗುಣಮಟ್ಟದ ಸಂಶೋಧನೆಯತ್ತ ಹೆಚ್ಚು ಗಮನ ಹರಿಸಬೇಕಿದೆ. ಓದಿನ ವ್ಯಾಪ್ತಿ ಹೆಚ್ಚಿದಾಗ, ವಿಮರ್ಶಾತ್ಮಕ ಹಾಗೂ ಚಿಕಿತ್ಸಕ ಚಿಂತನೆ ಬೆಳೆದಾಗ ಮಾತ್ರ ಸಮಾಜಮುಖಿ ಮತ್ತು ಮೌಲಿಕ ಸಂಶೋಧನಾ ಕೃತಿಗಳು ರೂಪುಗೊಳ್ಳುತ್ತವೆ” ಎಂದು ತಿಳಿಸಿದರು.
ಕನ್ನಡ ವಿಭಾಗದ ಸಂಯೋಜಕರಾದ ಡಾ. ವಾಯ್. ವಾಯ್. ಕೊಕ್ಕನವರ ಸ್ವಾಗತಿಸಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕು. ಲಕ್ಷ್ಮೀ ಖವಾಸಿ ಹಾಗೂ ಸಂಗಡಿಗರು ಪ್ರಾರ್ಥನೆ ನೆರವೇರಿಸಿದರು. ಭಾಗ್ಯಶ್ರೀ ಮುಗಳಖೋಡ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಸುಮ. ವೈ.ಎನ್. ವಂದಿಸಿದರು.
ಕಾರ್ಯಕ್ರಮದಲ್ಲಿ ಸಿಬ್ಬಂದಿ ಕಾರ್ಯದರ್ಶಿಗಳಾದ ಡಾ. ಬಂದೇನಮಾಜ್ ಕೊರಬು, ಶ್ರೀಮತಿ ಪುಷ್ಪಾ ಹುಣಸ್ಯಾಳ, ಶ್ರೀಮತಿ ಶಿವಲೀಲಾ, ಡಾ. ಎಸ್.ಎಸ್. ಸಿದ್ದಾಪೂರ, ಡಾ. ಭಜರಂಗಿ ಜಾಧವ, ಶ್ರೀಮತಿ ಸವಿತಾ ಪಾಟೀಲ ಸೇರಿದಂತೆ ಬೋಧಕ ವೃಂದ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.


“ಸಂಶೋಧನೆ ಎಂದರೆ ಉತ್ತರಗಳನ್ನು ಹುಡುಕುವುದು ಮಾತ್ರವಲ್ಲ; ಸಮಾಜದ ಭವಿಷ್ಯಕ್ಕೆ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕುವ ಜ್ಞಾನಯಾತ್ರೆಯೇ ನಿಜವಾದ ಸಂಶೋಧನೆ.”

– ಡಾ.ಮಹೇಶ ಚಿಂತಾಮಣಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಿರಿಯ ಪತ್ರಕರ್ತರ ಕೊಡುಗೆ ಅನನ್ಯ :ಎಂ.ಎಲ್.ಜಮಾದಾರ

ನಿರಾಣಿ ಇಂಜಿನಿಯರಿಂಗ್ ಸಿಬ್ಬಂದಿಗೆ ರೈತರಿಂದ ಸನ್ಮಾನ

ಬಸ್ಸಲ್ಲಿ ಸಿಕ್ಕ ಚಿನ್ನ ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್

ಒಬ್ಬ ವ್ಯಕ್ತಿ ನಶೆಯಿಂದ ಮುಕ್ತನಾದರೆ ಒಂದು ಕುಟುಂಬ ಉಳಿಯುತ್ತದೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಿರಿಯ ಪತ್ರಕರ್ತರ ಕೊಡುಗೆ ಅನನ್ಯ :ಎಂ.ಎಲ್.ಜಮಾದಾರ
    In (ರಾಜ್ಯ ) ಜಿಲ್ಲೆ
  • ಸಂಶೋಧನೆಯೇ ಸತ್ಯದ ಅನ್ವೇಷಣೆ :ಡಾ.ಮಹೇಶ ಚಿಂತಾಮಣಿ
    In (ರಾಜ್ಯ ) ಜಿಲ್ಲೆ
  • ನಿರಾಣಿ ಇಂಜಿನಿಯರಿಂಗ್ ಸಿಬ್ಬಂದಿಗೆ ರೈತರಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಬಸ್ಸಲ್ಲಿ ಸಿಕ್ಕ ಚಿನ್ನ ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್
    In (ರಾಜ್ಯ ) ಜಿಲ್ಲೆ
  • ಒಬ್ಬ ವ್ಯಕ್ತಿ ನಶೆಯಿಂದ ಮುಕ್ತನಾದರೆ ಒಂದು ಕುಟುಂಬ ಉಳಿಯುತ್ತದೆ
    In (ರಾಜ್ಯ ) ಜಿಲ್ಲೆ
  • ಎಪಿಎಂಸಿ ಹೈಟೆಕ್ ಶೌಚಾಲಯ ನಿರ್ಮಾಣ ಸ್ಥಳಕ್ಕೆ ತೀವ್ರ ವಿರೋಧ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸೂಚನೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಹಂಗಾಮಿಗೆ ಕಾಲುವೆ ಜಾಲಕ್ಕೆ ನೀರು
    In (ರಾಜ್ಯ ) ಜಿಲ್ಲೆ
  • ವಿಬಿ-ಜಿ ರಾಮ್-ಜಿ ಯೋಜನೆಯಡಿ ಕಾರ್ಮಿಕರಿಗೆ ನಿರಂತರಉದ್ಯೋಗ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿ ಪತ್ರಿಕೋದ್ಯಮ ವಿಭಾಗದ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.