ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಹಯೋಗದೊಡನೆ ಸ್ವಾತಂತ್ರೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸೋಣ ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಜರುಗಿದ ಸ್ವಾತಂತ್ರೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವಾತಂತ್ರೋತ್ಸವದ ಸಂಭ್ರಮದ ಆಚರಣೆಗೆ ಎಲ್ಲ ಇಲಾಖೆ, ಸಂಘ ಸಂಸ್ಥೆಗಳ ಸಹಕಾರ ಅಗತ್ಯ ಆದ್ದರಿಂದ ಸರ್ಕಾರದ ನಿರ್ದೇಶನ ಜೊತೆಗೆ ನಿಮ್ಮ ಸಲಹೆಗಳನ್ನು ಅನುಸರಿಸಿ ಆಚರಣೆ ಮಾಡೋಣ ಎಂದರು.
ಸಭೆಯಲ್ಲಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ, ರೈತಸಂಘದ ಸಿದ್ಧನಗೌಡ ಪಾಟೀಲ, ಅಜೀಜ್ ಯಲಗಾರ, ರೆಹಮಾನ್ ಕಣಕಾಲ್, ಕಾಶೀನಾಥ ತಳಕೇರಿ ಮಾತನಾಡಿದರು.
ಸಭೆಯಲ್ಲಿ ವಿವಿಧ ಕ್ಷೇತ್ರದ ಸಾಧಕರ ಸನ್ಮಾನ, ಶಾಲಾ ಮಕ್ಕಳಿಗೆ ಉಪಹಾರದ ವ್ಯವಸ್ಥೆ, ಕಾರ್ಯಕ್ರಮ ಪೂರ್ಣ ಶಾಸಕರ ಉಪಸ್ಥಿತಿ, ಸರ್ಕಾರದ ನಡಾವಳಿ ಅನುಸಾರ ವೇದಿಕೆಯಲ್ಲಿ ಗಣ್ಯರ ಹಾಜರಾತಿ ಕುರಿತು ಚರ್ಚೆಗಳಾದವು.
ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಸಿಂದಗಿ ಬಿಇಓ ಟಿಎಸ್. ಆಲಗೂರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಪ್ರೋಜ್ ಅಹ್ಮದ್ ಪಟೇಲ, ಅಕ್ಷರದಾಸೋಹ ಸಹಾಯಕ ನಿರ್ದೇಶಕ ಎ.ಎಸ್.ಡೋಣೂರ, ಉಪತಹಶೀಲ್ದಾರ ಸುರೇಶ ಮ್ಯಾಗೇರಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಬಿ.ಗಡಗಿ, ಡಾ.ರಾಮು ರಾಠೋಡ, ವಿಜಯಲಕ್ಷ್ಮಿ ನವಲಿ, ಚನ್ನಬಸು ಹೊಸಮನಿ, ಸಂಗಪ್ಪ ತಡವಲ್, ಎಸ್.ಎನ್.ಬಸವರೆಡ್ಡಿ, ಸಂಪತ್ ಜಮಾದಾರ, ಗುರುನಾಥ ಮುರುಡಿ, ಹಸನ್ ನದಾಫ್, ಮಲ್ಕು ಬಜಂತ್ರಿ ಹಾಗೂ ವಿವಿಧ ಸಂಘಟನೆ, ಇಲಾಖೆಗಳ ಸಿಬ್ಬಂದಿ ಇದ್ದರು.

