೪ ಪಾಳೆಗಳಲ್ಲಿ ೫೧೫ ಕೃಷಿ ಪಂಪಸೆಟ್ ಫೀಡರಗಳಿಗೆ ತ್ರಿಫೇಸ್ ವಿದ್ಯುತ್ ಪೂರೈಕೆ
ವಿಜಯಪುರ: ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ರೈತರ ಕೃಷಿ ಪಂಪಸೆಟ್ಗಳಿಗೆ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು, ಜಿಲ್ಲೆಯ ಒಟ್ಟು ೫೧೫ ಕೃಷಿ ಪಂಸೆಟ್ ಪೀಡರ್ಗಳಿಗೆ ೪ ಪಾಳೆಗಳಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ನಾಲ್ಕು ೨೨೦ ಕೆವ್ಹಿ ಸ್ವೀಕರಣಾ ಕೇಂದ್ರಗಳು, ೧೧೦ಕೆವ್ಹಿ ೪೪ ಕೇಂದ್ರಗಳು ಹಾಗೂ ೩೩ಕೆವ್ಹಿ ೩೧ ವಿತರಣಾ ಕೇಂದ್ರಗಳಿದ್ದು, ಈ ಕೇಂದ್ರಗಳಿಂದ ೪ ಪಾಳೆಗಳಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ೨೫ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸತತವಾಗಿ ೬ ಗಂಟೆ ೩ ಫೇಸ್ ವಿದ್ಯುತ್, ೨೧ ವಿತರಣಾ ಕೇಂದ್ರಗಳಿಂದ ಹಗಲು ೪ ಗಂಟೆ ಮತ್ತು ರಾತ್ರಿ ೨ ಗಂಟೆ ೩ ಫೇಸ್ ವಿದ್ಯುತ್, ೧೬ ವಿದ್ಯುತ್ ವಿತರಣಾ ಕೇಂದ್ರಗಳಿಂದ ಹಗಲು ೩ ಗಂಟೆ ಮತ್ತು ರಾತ್ರಿ ೩ ಗಂಟೆ ೩ ಫೇಸ್ ವಿದ್ಯುತ್, ೩ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸತತವಾಗಿ ೫ ಗಂಟೆ ೩ಫೇಸ್ ವಿದ್ಯುತ್ ಹಾಗೂ ೩೩ಕೆವ್ಹಿಯ ೨ ವಿದ್ಯುತ್ ವಿತರಣಾ ಕೇಂದ್ರಗಳಿಂದ ಹಲಗು ೩ ಗಂಟೆ ಮತ್ತು ರಾತ್ರಿ ೨ ಗಂಟೆ ತ್ರಿಫೇಸ್ ವಿದ್ಯುತ್ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲ ೫೧೫ ಕೃಷಿ ಪಂಪಸೆಟ್ ಫೀಡರ್ಗಳಿಗೆ ಸಂಜೆ ೬ ರಿಂದ ರಾತ್ರಿ ೧೦ ಗಂಟೆವರೆಗೆ ತೋಟದ ಮನೆ, ಗೃಹ ಬಳಕೆಗೆ ಪೂರೈಸಲಾಗುತ್ತಿದೆ. ಈ ವೇಳೆಯಲ್ಲಿ ೩೯೬ ಫೀಡರ್ಗಳಿಗೆ ಯಾವುದೇ ಅಡಚಣೆಯಿಲ್ಲದೇ ವಿದ್ಯುತ್ ಪೂರೈಕೆಯಾಗುತ್ತಿದೆ.
ಸರ್ಕಾರದ ಆದೇಶದಂತೆ ರೈತರು ೬ ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಪೂರೈಸಲಾಗುತ್ತಿದೆ. ಕಬ್ಬು ನುರಿಸುವ ಹಂಗಾಮು ಆರಂಭದಿಂದ ಹೆಚ್ಚುವರಿಯಾಗಿ ವಿದ್ಯುತ್ ದೊರಕಲಿದ್ದು, ಸಮಸ್ಯೆ ಬಗೆಹರಿಯಲಿದೆ. ಆದ ಕಾರಣ ರೈತರು ಶಾಂತತೆಯನ್ನು ಕಾಪಾಡಿಕೊಳ್ಳುವ ಮೂಲಕ ಸಹಕರಿಸುವಂತೆ ಅವರು ಮನವಿ ಮಾಡಿಕೊಂಡರು.
ಕಾಲುವೆ ಜಾಲಗಳಿಗೆ ನೀರು ಹರಿಸುವಿಕೆ ಸಹಕರಿಸಲು ಮನವಿ: ಜಿಲ್ಲೆಯಲ್ಲಿ ಬರುವ ಬಳೂತಿ, ಹಣಮಾಪುರ ಮಸೂತಿ ಜಾಕವೆಲ್ಗಳ ಮೂಲಕ ವಿಜಯಪುರ ಮುಖ್ಯ ಕಾಲುವೆಗೆ ಹಾಗೂ ಆಲಮಟ್ಟಿ ಎಡದಂಡೆ ಕಾಲುವೆ, ಚಿಮ್ಮಲಗಿ ಪಶ್ಚಿಮ ಕಾಲುವೆಯ ಅಚ್ಚುಕಟ್ಟು ಪ್ರದೇಶದ ಅಧಿಸೂಚಿತ ಕ್ಷೇತ್ರಕ್ಕೆ ಮತ್ತು ಚಿಮ್ಮಲಗಿ ಪೂರ್ವ ಮುಖ್ಯ ಕಾಲುವೆ ಹಾಗೂ ಇದರಡಿಯಲ್ಲಿ ಬರುವ ನಾಗಠಾಣ ಹಾಗೂ ಕೋರವಾರ ಶಾಖಾ ಕಾಲುವೆ ಅಡಿಯಲ್ಲಿನ ಸಣ್ಣ ನೀರಾವರಿ ಮತ್ತು ಜಿಲ್ಲಾ ಪಂಚಾಯತ್ ಕೆರೆಗಳಿಗೆ ಕಾಲುವೆ ಜಾಲಗಳ ಮೂಲಕ ನೀರು ಹರಿಸಲಾಗುತ್ತಿದು, ಈ ಸಂದರ್ಭದಲ್ಲಿ ಕಾಲುವೆಗಳಿಂದ ಅಕ್ರಮ ಪಂಪಸೆಟ್ ಮೂಲಕ ನೀರು ಪಡೆಯುವುದಾಗಲೀ ಕೆರೆ ಹಾಗೂ ಕಾಲುವೆಗಳಿಗೆ ಯಾವುದೇ ರೀತಿಯ ಹಾನಿ ಮಾಡುವುದಾಗಲಿ ಮಾಡದೆ ರೈತರು ಸಹಕರಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಷ ಸೋನಾನವರ ಅವರು ಮನವಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಕೆಪಿಟಿಸಿಎಲ್ ಅಧೀಕ್ಷಕ ಅಭಿಯಂತರ ಜಿ.ಕೆ.ಗೊಟ್ಯಾಳ, ಕೆಬಿಜೆಎನ್ಎಲ್ ಅಧೀಕ್ಷಕ ಅಭಿಯಂತರ ಗೋವಿಂದರಾಜು ಉಪಸ್ಥಿತರಿದ್ದರು.
ಕಾಲುವೆ ಜಾಲಗಳಿಗೆ ನೀರು ೧೪೪ರನ್ವಯ ನಿಷೇಧ: ಜಿಲ್ಲೆಯಲ್ಲಿ ಬರುವ ಕಾಲುವೆ ಜಾಲಗಳಾದ ಆಲಮಟ್ಟಿ ಎಡದಂಡೆ ಕಾಲುವೆ, ಚಿಮ್ಮಲಗಿ ಪಶ್ಚಿಮ ಕಾಲುವೆಯ ಅಚ್ಚುಕಟ್ಟು ಪ್ರದೇಶದ ಅಧಿಸೂಚಿತ ಕ್ಷೇತ್ರಕ್ಕೆ ಮತ್ತು ಚಿಮ್ಮಲಗಿ ಪೂರ್ವ ಮುಖ್ಯ ಕಾಲುವೆ ಹಾಗೂ ಇದರಡಿಯಲ್ಲಿ ಬರುವ ನಾಗಠಾಣ ಹಾಗೂ ಕೋರವಾರ ಶಾಖಾ ಕಾಲುವೆ ಅಡಿಯಲ್ಲಿನ ಸಣ್ಣ ನೀರಾವರಿ ಮತ್ತು ಜಿಲ್ಲಾ ಪಂಚಾಯತ್ ಕೆರೆಗಳಿಗೆ ಕಾಲುವೆ ಜಾಲಗಳ ಕೊನೆಯ ಭಾಗದವರೆಗೆ ನೀರನ್ನು ಪೂರೈಸಲಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುವೆಗಳ ಎಡ-ಬಲ ೧೦೦ ಅಡಿ ವ್ಯಾಪ್ತಿಯಲ್ಲಿ ದಿನಾಂಕ : ೨೬-೧೦-೨೦೨೩ ರಿಂದ ೦೪-೧೨-೨೦೨೩ ರವರೆಗೆ ಕಲಂ ೧೪೪ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಕಾಲುವೆ ಜಾಲಗಳಿಗೆ ನೀರು ಹರಿಸುವ ಸಂದರ್ಭದಲ್ಲಿ ದಡದ ೧೦೦ ಅಡಿ ಸುತ್ತಮುತ್ತಲಿನ ಪ್ರದೇಶದಲ್ಲಿ

