ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಭೆ
ವಿಜಯಪುರ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತಾ ದಿನಾಂಕ : ೦೧-೦೧-೨೦೨೪ಕ್ಕೆ ಸಂಬಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತೆಗೆದುಹಾಕುವುದು, ತಿದ್ದುಪಡಿ ಸೇರಿದಂತೆ ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆಗೆ ದಿ.೨೭-೧೦-೨೦೨೩ ರಿಂದ ೦೯-೧೨-೨೦೨೩ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದರು.
ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿನಾಂಕ : ೨೫-೦೯-೨೦೨೩ರನ್ವಯ ಮತದಾರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತಾ ದಿನಾಂಕ : ೦೧-೦೧-೨೦೨೪ಕ್ಕೆ ಸಂಬಧಿಸಿದಂತೆ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕುರಿತು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ದಿನಾಂಕ : ೨೭-೧೦-೨೦೨೩ ರಿಂದ ೦೯-೧೨-೨೦೨೩ರವರೆಗೆ ಹಕ್ಕು ಮತ್ತು ಆಕ್ಷೇಪಣೆಗೆ ಅವಕಾಶ, ನಂತರ ವಿಶೇಷ ಕ್ಯಾಂಪೇನ್ಗಳ ಮೂಲಕ ಮತದಾರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತಿದೆ. ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು ಅನುಕೂಲವಾಗುವಂತಗೆ ಮತದಾರ ಪರಿಷ್ಕರಣೆಗೆ ವಿವಿಧ ರಾಜಕೀಯ ಪಕ್ಷಗಳು ಸಹಕರಿಸುವಂತೆ ಅವರು ಮನವಿ ಮಾಡಿಕೊಂಡರು.
ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ವೋಟರ್ ಹೆಲ್ಪಲೈನ್ ಮೊಬೈಲ್ ಆಪ್ ಅಥವಾ ಓಗಿSP ಪೋರ್ಟಲ್ ಅಥವಾ www.karnataka.gov.in ಮೂಲಕ ಪರಿಶೀಲಿಸಿ ಖಚಿತಪಡಿಸಿಕೊಳ್ಳಬಹುದಾಗಿದೆ. ಹಾಗೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಜನವರಿ-೦೧, ಏಪ್ರಿಲ್-೦೧, ಜುಲೈ-೦೧ ಹಾಗೂ ಅಕ್ಟೋಬರ್-೦೧ ಸೇರಿದಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ೦೪ ಅರ್ಹತಾ ದಿನಾಂಕಗಳ ಅವಕಾಶ ಕಲ್ಪಿಸಲಾಗಿದೆ. ಮತದಾರ ಪಟ್ಟಿಗೆ ಸಂಬಂಧಿಸಿದಂತೆ ಆನ್ಲೈನ್ ಫ್ಲಾಟ್ಫಾರ್ಮಗಳಾದ ವಿಎಚ್ಎ, ಎನ್ವಿಎಸ್ಪಿ ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಸಂಪರ್ಕಿಸಿ ಗಡುಡ್ ಆಪ್ ಮೂಲಕವೂ ಕೂಡಾ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೇರಿದಂತೆ ರಾಜಕೀಯ ಪಕ್ಷದ ಪ್ರತಿನಿಧಿಗಳಾದ ನಿತೇಶ ತೊರವಿ, ಭೋಗೇಶ ಸೋಲಾಪುರ, ಎಚ್.ಎಸ್.ದಳವಾಯಿ, ರಾಜು ಹಿಪ್ಪರಗಿ ಇತರರು ಉಪಸ್ಥಿತರಿದ್ದರು.

