ಉದಯರಶ್ಮಿ ದಿನಪತ್ರಿಕೆ
ಅಥಣಿ: ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ದೇಶಭಕ್ತಿ, ರಾಷ್ಟ್ರಾಭಿಮಾನ ಹಾಗೂ ಸಂಭ್ರಮದ ವಾತಾವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಕಾಲೇಜಿನ ಆವರಣದಲ್ಲಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಿಲಾಸ್ ಕಾಂಬಳೆ ಮಾತನಾಡಿ, ಸ್ವಾತಂತ್ರ್ಯವು ಕೇವಲ ಆಚರಣೆಗೆ ಸೀಮಿತವಾಗದೆ, ಅದರ ಹಿಂದಿರುವ ಹೋರಾಟದ ಮೌಲ್ಯಗಳನ್ನು ಅರಿತುಕೊಳ್ಳಬೇಕು. ಯುವಜನರು ದೇಶದ ಭವಿಷ್ಯವಾಗಿದ್ದು, ಶಿಕ್ಷಣದ ಜೊತೆಗೆ ಶಿಸ್ತು, ಪ್ರಾಮಾಣಿಕತೆ, ಸಾಮಾಜಿಕ ಜವಾಬ್ದಾರಿ ಹಾಗೂ ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಹಿರಿಯ ಉಪನ್ಯಾಸಕರಾದ ಶಾಂತಿನಾಥ ಬನೋಜ್ ಮಾತನಾಡಿ, ಭಾರತವು ವಿವಿಧ ಭಾಷೆ, ಧರ್ಮ, ಸಂಸ್ಕೃತಿ ಹಾಗೂ ಪರಂಪರೆಗಳನ್ನು ಹೊಂದಿರುವ ವೈವಿಧ್ಯಮಯ ರಾಷ್ಟ್ರವಾಗಿದೆ. ಈ ವೈವಿಧ್ಯತೆಯಲ್ಲಿಯೇ ಏಕತೆಯನ್ನು ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಸಂತೋಷ್ ಉಂಡಾಡಿ ಸುರೇಶ, ಕುಮಾರ ತಕತರಾವ ರಾಜು ಭಜಂತ್ರಿ ಹರೀಶ ನಾಗರತ್ನ ರೇಣುಕೇಗೌಡರ ಶಿಲ್ಪಾ ರಾಮನ್ನಗೊಳ ಸುರೇಖಾ ದೇವರಡ್ಡಿ ಬಿ ಆರ್ ಮುಗ್ಗನ್ನವರ ರಾಘವೇಂದ್ರ ಗೌರಿ ಬೆಳಮಗಿ ಶೇಖರ್ ಕಾಂಬಳೆ ಶಿವಾನಂದ ಮಟ್ಟಪ್ಪನವರ ನಾಗಪ್ಪ ಕೋಟಿ ನಚಿಕೇತ ನೂಲಿ ಸಿದ್ದು ಕುಡ್ಡಣ್ಣವರ ಸಂಜೀವ ಕಾಂಬಳೆ ಪರಶುರಾಮ ಪೂಜಾರಿ ರಾಜೇಂದ್ರ ಗೊಂಧಳೆ ಬಸವರಾಜ್ ಪಾಟೀಲ್ ಶ್ರೀಶೈಲ ದೇವರಡ್ಡಿ ಸಮಸ್ತ ಸಿಬ್ಬಂದಿ ವರ್ಗದವರು ಹಾಗೂ ಅಪಾರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾದರು.
ಆರ್ ಎಸ್ ದೊಡ್ಡನಿಂಗಪ್ಪಗೋಳ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

