ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ನಶಾ ಮುಕ್ತ ಯುವ ಸಂಕಲ್ಪಕ್ಕೆ ಚಾಲನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ವಿಕ್ಷಿತ್ ಭಾರತ್ ಸಂಕಲ್ಪ ಅಭಿಯಾನದಡಿಯಲ್ಲಿ ಕಾಲೇಜಿನಲ್ಲಿ ಆ.೧೪ ರಂದು ಎನ್ ಎಸ್ ಎಸ್ ಘಟಕ-I ಮತ್ತು ಘಟಕ-II ಸಹಯೋಗದಲ್ಲಿ ‘ನಶಾ ಮುಕ್ತ ಯುವ’ ಸಂಕಲ್ಪ ಪ್ರತಿಜ್ಞೆ ವಿಧಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಆರೋಗ್ಯಕ್ಕೆ ಉಂಟಾಗುವ ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು.
ಆರೋಗ್ಯಕರ ಮತ್ತು ಜವಾಬ್ದಾರಿಯುತ ಜೀವನಶೈಲಿಯನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಮತ್ತು ಮಾದಕ ದ್ರವ್ಯ ಮುಕ್ತ ಸಮಾಜವನ್ನು ನಿರ್ಮಿಸಲು ಪ್ರತಿಯೊಬ್ಬರೂ ಕೊಡುಗೆ ನೀಡುವಂತೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಮಿಲನ್ ರಾಠೋಡ್, ಡಾ. ತರನ್ನುಮ್ ಜಬೀನ್ ಖಾನ್ ಮಹಾವಿದ್ಯಾಲಯದ ಇನ್ನಿತರ ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

