ಉದಯರಶ್ಮಿ ದಿನಪತ್ರಿಕೆ
ಆಲಮಟ್ಟಿ: ಭಾರತ ದೇಶದ ೮೦ನೇ ಸ್ವಾತಂತ್ರ್ಯೋತ್ಸವವನ್ನು ಸಮೀಪದ ಅರಳದಿನ್ನಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಪ್ರಾರಂಭದಲ್ಲಿ ಧರ್ಮದ ಮಠದ ಧರ್ಮಾಧಿಕಾರಿಗಳಾದ ಶ್ರೀ ಚಂದ್ರಶೇಖರ್ ಧರ್ಮರ ಅವರು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ನಂತರ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಬಸವರಾಜ್ ಹೆರಕಲ್ ಅವರು ರಾಷ್ಟ್ರಧ್ವಜವನ್ನು ಹಾರಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ದೇಶಭಕ್ತಿ ಕಾರ್ಯಕ್ರಮಗಳು
ಧ್ವಜಾರೋಹಣದ ನಂತರ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು, ಭಾಷಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಿಕ್ಷಕರು ಸ್ವಾತಂತ್ರ್ಯ ಹೋರಾಟದ ಮಹತ್ವ ಮತ್ತು ದೇಶಭಕ್ತಿಯ ಕುರಿತು ಮಕ್ಕಳಿಗೆ ತಿಳುವಳಿಕೆ ನೀಡಿದರು.
ಗಣ್ಯರ ಉಪಸ್ಥಿತಿ
ಈ ಕಾರ್ಯಕ್ರಮದಲ್ಲಿ ಗ್ರಾಮದ ಗಣ್ಯರಾದ ರಾಯನಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಶಾಂತಪ್ಪ ಹೆರಕಲ್, ಬೊಮ್ಮಯ್ಯ ಹಿರೇಮಠ, ಕರಿಯಪ್ಪ ಭಾವಿಕಟ್ಟಿ, ಮಲ್ಲನಗೌಡ ಬಿರಾದಾರ, ಸುಬಾಸ ಚೋಪಡೆ, ಹಣಮಂತ ಕೊಳ್ಳಾರ, ಯಲಗೂರದಪ್ಪ ಟುಬಾಕಿ, ಹಣಮಂತ ಮಾದರ ಸೇರಿದಂತೆ ಗ್ರಾಮದ ಗುರು-ಹಿರಿಯರು ಉಪಸ್ಥಿತರಿದ್ದರು.
ಶಾಲೆಯ ಮುಖ್ಯ ಶಿಕ್ಷಕರಾದ ಎನ್ ಆಯ್ ಶೇಖ್, ನಿಡಗುಂದಿ ತಾಲೂಕಿನ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಲೀಮ ದಡೇದ, ಶಿಕ್ಷಕರಾದ ಸುರೇಶ ವಾಲಿಕಾರ, ಸಲೀಮ ಮುಲ್ಲಾ, ಎಸ್ ಕೆ ಗೊಳಸಂಗಿ, ಎಚ್ ಆಯ್ ಮಾಲಧಾರ, ಅಡುಗೆ ಸಹಾಯಕರು ಮತ್ತು ಮುದ್ದು ಮಕ್ಕಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಂಭ್ರಮಕ್ಕೆ ಮೆರುಗು ನೀಡಿದರು.

