Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ

ಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ :ಪರಶುರಾಮ

ಮುದ್ದೇಬಿಹಾಳ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಹಿರಿಯ ಜೀವಿಗಳ ತಿರಸ್ಕಾರ ಭಾವ ಸಲ್ಲದು
ವಿಶೇಷ ಲೇಖನ

ಹಿರಿಯ ಜೀವಿಗಳ ತಿರಸ್ಕಾರ ಭಾವ ಸಲ್ಲದು

By No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂದು (ಅಗಷ್ಟ ೨೧, ಶುಕ್ರವಾರ) “ಹಿರಿಯ ನಾಗರೀಕರ ದಿನ” ದ ಪ್ರಯುಕ್ತ ಈ ವಿಶೇಷ ಲೇಖನ

ಲೇಖನ
– ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)
ಉಪನ್ಯಾಸಕರು
ವಿಜಯಪುರ

ಉದಯರಶ್ಮಿ ದಿನಪತ್ರಿಕೆ

“ಏನೆಲ್ಲ ಮರೆತರು ತಮ್ಮ, ಹಡೆದವರ ನೀ ಮರಿಬ್ಯಾಡ. ಉಪಕಾರ ತೀರಿಸಬೇಕು ಈ ಮಾತು ತಿಳಿದು ನೋಡು” ಎಂಬ ಭಜನಾ ಪದದ ಹಿಂದಿನ ಸಾರ-ಸಂದೇಶವನ್ನು ಅರಿತು ನಾವೆಲ್ಲರೂ ಹಿರಿಯ ಜೀವಿಗಳನ್ನು ಮಕ್ಕಳಂತೆ ನೋಡಬೇಕು.
ಆದರೆ ಇಂದಿನ ಆಧುನಿಕತೆ, ಕುಟುಂಬ ವಿಘಟನೆ ಮತ್ತು ಪಾಶ್ಚಾತ್ಯ ಜೀವನ ಶೈಲಿಗಳಿಂದಾಗಿ ನಮ್ಮ ಮನ, ಮನೆ, ಕುಟುಂಬ ಮತ್ತು ಸಮಾಜದಲ್ಲಿ ಬದುಕುವ ರೀತಿ-ನೀತಿ ಮತ್ತು ಜೀವನ ಕ್ರಮ ಬದಲಾಗುತ್ತಿದೆ. ಇಂದು ‘ನಾವಿಬ್ಬರು ನಮಗಿಬ್ಬರು’ (ಗಂಡ-ಹೆಂಡತಿ ಮತ್ತು ಮಕ್ಕಳು) ಎಂಬ ಸಂಕುಚಿತ ಭಾವ ಬರುತ್ತಿದೆ. ಆದರೆ ತಮ್ಮ ಬಹುಪಾಲು ಜೀವನವನ್ನು ಕೇವಲ ಮಕ್ಕಳ ಪಾಲನೆ-ಪೋಷಣೆ, ಕುಟುಂಬ ನಿರ್ವಹಣೆ ಮತ್ತು ಇತರರ ಶ್ರೇಯಸ್ಸಿಗಾಗಿಯೇ ಹಗಲಿರುಳು ದುಡಿದು ಇಂದು ವಯೋವೃದ್ಧರಾಗಿರುವ ಕುಟುಂಬದ ಹಿರಿಯ ಜೀವಿಗಳನ್ನು ಪ್ರೀತಿಸುವ, ಗೌರವಿಸುವ ಮತ್ತು ಉಪಚರಿಸುವ ಪರಿಯು ಕಳವಳಕಾರಿ ಸಂಗತಿ.
ಹಿರಿಯ ಜೀವಿಗಳು ಸಂಸ್ಕೃತಿ-ಸಂಸ್ಕಾರದ ಪ್ರತಿಬಿಂಬ


ಸಂಸ್ಕೃತಿ-ಸಂಸ್ಕಾರದ ಪ್ರತೀಕ, ಸಂಪ್ರದಾಯ, ಆಚರಣೆ ಮತ್ತು ಪದ್ಧತಿಗಳ ಅನುಸರಣೆಯ ಪ್ರತಿಬಿಂಬ ಮತ್ತು ಅಮೂಲ್ಯವಾದ ಜೀವನಾನುಭವದ ರಸಪಾಕವನ್ನು ಹೊಂದಿರುವ ಹಿರಿಯ ಜೀವಿಗಳ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದು ನಮ್ಮ ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು. ಮುಂದಿನ ಪೀಳಿಗೆಗೆ ಮನೆಯ ಪದ್ಧತಿ, ಆಚರಣೆ ಮತ್ತು ಸಾಮಾಜಿಕ-ಧಾರ್ಮಿಕ ವಿಧಿ ವಿಧಾನಗಳನ್ನು ಪರಿಚಯಿಸಲು ಹಾಗೂ ಉಳಿಸಿ-ಬೆಳೆಸಲು ನಮ್ಮ ಹಿರಿಯರು ನಮಗೆ ಬೇಕು. ಆದ್ದರಿಂದ ನಮಗೆ ಜನ್ಮ ನೀಡಿ, ತಪ್ಪು ಮಾಡಿದಾಗ ತಿದ್ದಿ-ತೀಡಿ, ಶಿಕ್ಷಣ ನೀಡಿ, ಉದ್ಯೋಗ ದೊರಕಲು ಸದಾಶಯ ಮಾಡಿದ ಹಾಗೂ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ರೂಪಿಸಿದ ಅವರನ್ನು ಗೌರವ-ಪೂಜ್ಯನೀಯ ಭಾವನೆಯಿಂದ ಕಾಣುವಂತಹ ಮಾನವೀಯತೆ ಗುಣವನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕು.
ವೃದ್ಧಾಪ್ಯದಲ್ಲಿ ಹಿರಿಯ ಜೀವಿಗಳನ್ನು ಮನೆಯಿಂದ ಹೊರದೂಡಬೇಡಿ
ಮಕ್ಕಳಿಗಾಗಿ ಆಸ್ತಿಯನ್ನು ಮಾಡುವ ಬದಲು ಮಕ್ಕಳಿಗೆ ಒಳ್ಳೆಯ ಶಿಕ್ಷಣ, ಉದ್ಯೋಗ ಮತ್ತು ಗ್ರಹಸ್ಥರನ್ನಾಗಿ ಮಾಡಿ ಸದಾ ಮಕ್ಕಳ ಅಭಿವೃದ್ಧಿಯನ್ನೇ ಬಯಸುವ ತಂದೆ-ತಾಯಿಯರನ್ನು ನೋಡಿಕೊಳ್ಳುವ ರೀತಿ-ನೀತಿ, ನೀಡುವ ಗೌರವ, ಆರೋಗ್ಯ ರಕ್ಷಣೆ ಇಲ್ಲದಂತಾಗಿ ಬಹಳ ಕ್ರೌರ್ಯದಿಂದ ಕಾಣುವದು ಮತ್ತು ಚಿತ್ರಹಿಂಸೆ ನೀಡಿ ಮನೆ ಹೊರಗೆ ಹಾಕುವ ದೃಶ್ಯಗಳನ್ನು ಕಂಡರೆ ಮನ ಕಲುಕುವಂತಾಗುತ್ತದೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಪ್ರತಿ ೧೦ ಹಿರಿಯ ಜೀವಿಗಳಲ್ಲಿ ಸುಮಾರು ೬ ಕ್ಕಿಂತಲೂ ಹೆಚ್ಚು ಜನ ವಯೋವೃದ್ಧ ತಂದೆ-ತಾಯಿಯರನ್ನು ಮನೆಯಿಂದ ಬಲವಂತವಾಗಿ ಹೊರ ಹಾಕುತ್ತಿರುವ ಘಟನೆಗಳು ನಡೆಯುತ್ತಿರುವ ತೀರ ಕಳವಳಕಾರಿ ಸಂಗತಿ. ಹೊತ್ತು-ಹೆತ್ತು ಮತ್ತು ಬದುಕಿಗೊಂದು ಆಶ್ರಯ ನೀಡಿದ ತಂದೆ-ತಾಯಿಯರನ್ನು ಹೊರೆಯಾಗಿ ನೋಡಲಾರಂಭಿಸಿದ್ದಾರೆ. ಇಂದು ವಯೋವೃದ್ಧ ಹಿರಿಯ ಜೀವಿಗಳು ಕುಟುಂಬದಲ್ಲಿ ನೀಡುವ ಹಿಂಸೆ, ಅಗೌರವ ಮತ್ತು ನೀಡುವ ಕಷ್ಟಗಳಿಂದ ನೊಂದು-ಬೆಂದು, ಮನನೊಂದು ಕೊನೆಗೆ ವೃದ್ಧಾಶ್ರಮಗಳನ್ನು ಸೇರುವ ಪರಿಸ್ಥಿತಿಯು ನಮ್ಮ ಸಂಸ್ಕೃತಿಗೆ ಒಂದು ಕಪ್ಪುಚಿಕ್ಕೆ ಬಿದ್ದಂತಾಗಿದೆ. ಮೇ ೨೦೨೬ ರಲ್ಲಿ ವಿದೇಶದಲ್ಲಿದ್ದ ಮಕ್ಕಳು ವಿಡಿಯೋ ಕಾನ್ಪರೆನ್ಸ್ ಮೂಲಕವೇ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದು ಕಂಡುಬಂದಿರುವುದು ಕಳವಳಕಾರಿ ಸಂಗತಿ. ಮನಕಲುಕುವಂತಹ ದೃಶ್ಯ ನೋಡಿದರೆ ಮಕ್ಕಳು ಎಷ್ಟೇ ಶಿಕ್ಷಣ ಪಡೆದರೂ, ಯಾವುದೇ ಉದ್ಯೋಗ ಮಾಡಿದರೂ ಏನಂತೆ ಅವರಲ್ಲಿ ಸಂಸ್ಕಾರವಿಲ್ಲದಿದ್ದರೆ. ಈ ಅಮಾನವೀಯತೆಯ ಘಟನೆ ಕೇಳಿದ ಯಾರ ಕಣ್ಣಂಚಿನಲ್ಲಿ ದುಃಖದ ಭಾವ ಮೂಡದೇ ಇರದು.
ಹಿರಿಯ ಜೀವಿಗಳನ್ನು ಮಕ್ಕಳಂತೆ ಕಾಣಿ


ನಮ್ಮ ಮಕ್ಕಳಂತೆ ಕಾಣುವ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮತ್ತು ಪ್ರೀತಿ-ವಾತ್ಸಲ್ಯ, ತಾಯಿ ಹೃದಯದಿಂದ ಉಪಚರಿಸುವಂತೆ ಮತ್ತು ಗೌರವಯುತವಾಗಿ ಕಾಣುವಂತಹ ವಾತಾವರಣ ಪ್ರತಿ ಮನೆ, ಕುಟುಂಬ ಮತ್ತು ಕುಟುಂಬದ ಸದಸ್ಯರಲ್ಲಿ ಅರಿವು ಮೂಡಬೇಕು. ಮಕ್ಕಳೇ ತನ್ನೆಲ್ಲಾ ಸರ್ವಸ್ವವೆಂದು ತಿಳಿದು ಇಡೀ ಬದುಕನ್ನೇ ಅವರಿಗಾಗಿಯೇ ಸಮರ್ಪಿಸಿದ ಅಪ್ಪ-ಅಮ್ಮ, ಅಜ್ಜ-ಅಜ್ಜಿ ಮತ್ತು ಪೋಷಕರನ್ನು ಜೀವನದ ಸಂಧ್ಯಾಕಾಲದಲ್ಲಿ ನೋಡಿಕೊಳ್ಳುವವರು ಯಾರು? ಎಂಬ ಪ್ರಶ್ನೆಗೆ ಉತ್ತರಗಳೇ ಸಿಗುತ್ತಿಲ್ಲ. ತಂದೆ-ತಾಯಿ ಗಳಿಸಿಟ್ಟ ಹಣ, ನಗ-ನಾಣ್ಯ, ಆಸ್ತಿ-ಪಾಸ್ತಿ ಮತ್ತು ಇತರ ಎಲ್ಲ ವಸ್ತುಗಳು ಮಕ್ಕಳಿಗೆ ಬೇಕು. ಆದರೆ ಚಿಕ್ಕಂದಿನಲ್ಲಿ ತಂದೆ-ತಾಯಿಯೇ ನೈಜ ದೇವರು ಎಂದು ಗೌರವಿಸುವ ನಮ್ಮಲ್ಲಿ ಹಿರಿಯ ಜೀವಿಗಳನ್ನು ತಿರಸ್ಕಾರ ಭಾವ ಬರಬಾರದು.
೨೦೨೬ ನೇಯ ವರ್ಷದ ಘೋಷವಾಕ್ಯ
“ದೀರ್ಘವಧಿಯ ಆಯಸ್ಸು; ದೀರ್ಘ ಜೀವನಕ್ಕಾಗಿ ವ್ಯವಸ್ಥೆಗಳ ಮರುಚಿಂತನೆ” ಈ ಘೋಷವಾಕ್ಯದೊಂದಿಗೆ ಆಚರಿಸಲ್ಪಡುವ ಈ ವರ್ಷದ ಹಿರಿಯ ನಾಗರೀಕರ ದಿನವು ನಮ್ಮ ಸಮಾಜವು ಹಿರಿಯರ ಅನುಭವ ಮತ್ತು ಬುದ್ಧಿವಂತಿಕೆಯನ್ನು ಮೆಚ್ಚುವುದು. ಹಿರಿಯ ಜೀವಿಗಳ ಅರೋಗ್ಯಪೂರ್ಣ ಮತ್ತು ಸುರಕ್ಷತ ಜೀವನಕ್ಕೆ ಹೆಚ್ಚಿನ ಮಹತ್ವ ನೀಡುವುದು. ಅದರಲ್ಲೂ ವಿಶೇಷವಾಗಿ ಉತ್ತಮ ಆರೋಗ್ಯ ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸುವುದು ಈ ದಿನದ ಆಚರಣೆಯ ಪ್ರಮುಖ ಧ್ಯೇಯವಾಗಿದೆ.
ಕೊನೆಯ ನುಡಿ
ಹಿರಿಯರ ಅನುಭವದ ಮಾತಿನಂತೆ, “ಹೆತ್ತವರ ಮನಸ್ಸನ್ನು ನೋಯಿಸಿದ ಗೆದ್ದವರು ಇತಿಹಾಸದಲ್ಲೇ ಇಲ್ಲ. ತಾಯಿಯನ್ನು ಪೂಜಿಸಿ ಸೋತವರು ಚರಿತ್ರೆಯಲ್ಲೇ ಇಲ್ಲ” ಎಂದು ಹೇಳಿರುವುದು ನೂರಕ್ಕೆ ನೂರರಷ್ಟು ಸತ್ಯವಾದ ಮಾತು. ಅಜ್ಜ-ಅಜ್ಜಿ, ತಂದೆ-ತಾಯಿ, ಕುಟುಂಬದ ಹಿರಿಯರು ನಮಗೆ ಆಲದ ಮರವಿದ್ದಂತೆ. ನಮ್ಮ ವಂಶದ ಕುಡಿಗಳಾದ ಮಕ್ಕಳಿಗೆ ಪ್ರೀತಿ-ಮಮತೆ, ವಾತ್ಸಲ್ಯ, ಸಂಸ್ಕೃತಿ-ಸಂಸ್ಕಾರ, ಜೀವನ-ಮೌಲ್ಯಗಳ ಆಸ್ತಿಯಿದ್ದಂತೆ. ಅದ್ದರಿಂದ ಕುಟುಂಬ ವ್ಯವಸ್ಥೆ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಭಾವನಾತ್ಮಕತೆಗೆ ಹೆಸರುವಾಸಿಯಾದ ನಮ್ಮ ದೇಶದಲ್ಲಿ ಹಿರಿಯ ಜೀವಿಗಳನ್ನು ಮನೆಯಿಂದ ದೂರ ತಳ್ಳಿ ಅವರು ವೃದ್ಧಾಶ್ರಮ ಸೇರುವಂತಹ ದುಸ್ಥಿತಿ ಬರದಂತೆ ನೋಡಿಕೊಳ್ಳಬೇಕು. ದೇವರು ಬೇರೆಲ್ಲೂ ಇಲ್ಲ, ಅವರು ನಮ್ಮ ಹಿರಿಯ ಜೀವಿಗಳ ರೂಪದಲ್ಲೇ ಇರುತ್ತಾನೆ ಎಂಬುದನ್ನು ಅರಿತು ವಯೋ ಸಹಜವಾಗಿ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕವಾಗಿ ಕುಂದುಹೋಗುತ್ತಿರುವ ಆ ಹಿರಿಯ ಜೀವಿಗಳನ್ನು ಸಂತೋಷದಿಂದ ಇನ್ನಷ್ಟು ಕಾಲ ಮಕ್ಕಳು-ಮೊಮ್ಮಕ್ಕಳು ಮತ್ತು ಕುಟುಂಬದ ಇತರ ಸದಸ್ಯರಾಗಿ ನೂರು ಕಾಲ ಬಾಳಿ-ಬದುಕುವಂತಾಗಬೇಕು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ

ಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ :ಪರಶುರಾಮ

ಮುದ್ದೇಬಿಹಾಳ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ

ಆ.೨೩ ರಂದು ವರುಣನ ಕೃಪೆಗಾಗಿ ೨೪ ಗಂಟೆಗಳ ಶಿವ ಸಪ್ತಾಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ :ಪರಶುರಾಮ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಆ.೨೩ ರಂದು ವರುಣನ ಕೃಪೆಗಾಗಿ ೨೪ ಗಂಟೆಗಳ ಶಿವ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಇಂದಿನಿಂದ ರುದ್ರಮುನಿ ಶ್ರೀ ಶಿವಯೋಗ ಮೌನ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ಕೆಲಸಕ್ಕಾಗಿ ಜಾಬ್ ಕಾರ್ಡು ಪಡೆಯೋದು ನಿಮ್ಮ ಹಕ್ಕು
    In (ರಾಜ್ಯ ) ಜಿಲ್ಲೆ
  • ಪ್ರತಿ ವಾರ್ಡ್ನಲ್ಲಿ ಭಾರತ ಜೋಡೋ ಯುವ ಸಂಘ ರಚನೆಗೆ ಅರ್ಜಿ
    In (ರಾಜ್ಯ ) ಜಿಲ್ಲೆ
  • ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಸಲ್ಲಿಸಲು ಮನವಿ
    In (ರಾಜ್ಯ ) ಜಿಲ್ಲೆ
  • ಸ್ಥಗಿತಗೊಂಡ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಸಲ್ಲಿಸಲು ಮನವಿ
    In (ರಾಜ್ಯ ) ಜಿಲ್ಲೆ
  • ಯುವಶಕ್ತಿಯನ್ನು ಒಗ್ಗೂಡಿಸಿ ಸೌಹಾರ್ದ ಕರ್ನಾಟಕ ನಿರ್ಮಾಣಕ್ಕೆ ಮಹತ್ವದ ಹೆಜ್ಜೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.