ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಪಟ್ಟಣದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಎರಡನೆಯ ಅವಧಿಗೆ ಅಧ್ಯಕ್ಷರಾಗಿ ಸಂತೋಷ ದೇಸಾಯಿ ಉಪಾಧ್ಯಕ್ಷರಾಗಿ ಪ್ರಭಾವತಿ ಮಲ್ಲಿಕಾರ್ಜುನಮಠ(ಮಠಪತಿ) ಅವಿರೋಧವಾಗಿ ಆಯ್ಕೆಯಾದರು.
ಪಟ್ಟಣದ ವಿ.ಪ್ರಾ.ಗ್ರಾ.ಕೃ.ಸ. ಸಂಘದ ಕಾರ್ಯಾಲಯದಲ್ಲಿ ಶುಕ್ರವಾರ ಜರುಗಿದ ಸಭೆಯಲ್ಲಿ ಆಡಳಿತ ಮಂಡಳಿಯ ಒಟ್ಟು ೧೨ ಜನ ಸದಸ್ಯರಿದ್ದು, ಸರಳವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭಗೊAಡಿತು. ಮೊದಲ ೨೦ ತಿಂಗಳ ಅವಧಿಗೆ ಅಧ್ಯಕ್ಷರಾಗಿದ್ದ ಶಾಂತಪ್ಪ ಬಿರಾದಾರ ಹಾಗೂ ಉಪಾಧ್ಯಕ್ಷರಾಗಿದ್ದ ಬುರಾನಸಾಬ್ ಮಸಳಿ ರಾಜೀನಾಮೆ ಸಲ್ಲಿಸಿದರು. ನಂತರ ಸರ್ವಾನುಮತದಿಂದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಜರುಗಿತು. ನಂತರ ಆಡಳಿತ ಮಂಡಳಿ ಸದಸ್ಯರಿಂದ ಸನ್ಮಾನ ಜರುಗಿತು.
ಸಭೆಯಲ್ಲಿ ರಿಯಾಜ್ ಯಲಗಾರ, ಕಾಸುಗೌಡ ಬಿರಾದಾರ, ಕಾಸು ಜಮಾದಾರ, ಶಂಕರಗೌಡ ಪಾಟೀಲ ನೇತೃತ್ವ ವಹಿಸಿದ್ದರು. ಆಡಳಿತ ಮಂಡಳಿಯ ಸದಸ್ಯರಾದ ಹಣಮಂತ್ರಾಯ ಜೋಗೂರ, ಬಸವರಾಜ ತಾಳಿಕೋಟಿ, ಶಾಂತಪ್ಪ ಬಿರಾದಾರ, ಮೋದಿನಸಾಬ್ ಯಲಗಾರ, ರಾಜೇಂದ್ರ ಭಾವಿಮನಿ. ಶೃತಿ ಕೋಟಿನ್, ಸೋಮು ಜಾಧವ, ನೀಲಮ್ಮ ಜಂಬಗಿ ಮುಖ್ಯ ಕಾರ್ಯನಿರ್ವಾಹಕ ಶರಣಗೌಡ ಅಂಗಡಿ ಬಸವರಾಜ ದೇವಣಗಾಂವ, ಸಿದ್ದು ಮಲ್ಲಿಕಾರ್ಜುನಮಠ, ಸುಭಾಸ ಜಾಧವ ಹಾಗೂ ಸಿಬ್ಬಂದಿ ಇದ್ದರು.

