ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸದ್ಭಾವನಾ ದಿನಾಚರಣೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ದೇಶದ ಅಭಿವೃದ್ಧಿಗೆ ರಾಷ್ಟ್ರೀಯ ಏಕತೆ ಮತ್ತು ಕೋಮು ಸಾಮರಸ್ಯ ಅತ್ಯಗತ್ಯ ಎಂದು ಪ್ರಾಚಾರ್ಯ ಡಾ.ಅನೀಲ ಭಿ.ನಾಯಕ ಹೇಳಿದರು
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಎನ್ ಎಸ್ ಎಸ್ ಘಟಕ ೧ & ೨ ರ ಸಹಯೋಗದಲ್ಲಿ ಆ.೨೦ ರಂದು ಹಮ್ಮಿಕೊಳ್ಳಲಾಗಿದ್ದ ಸದ್ಭಾವನಾ ದಿನಾಚರಣೆಯಲ್ಲಿ ಮಾತನಾಡಿದರು. ಸದ್ಭಾವನಾ ದಿನದಂದು ವೈವಿಧ್ಯಮಯ ನಂಬಿಕೆಗಳ ಭಾರತೀಯರಲ್ಲಿ ರಾಷ್ಟ್ರೀಯ ಏಕತೆ, ಶಾಂತಿ, ಸಹಾನುಭೂತಿ ಮತ್ತು ಕೋಮು ಸೌಹಾರ್ದತೆಯ ಪ್ರತೀಕವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಡಾ. ತರನ್ನಮ್ ಜಬೀನ್ ಖಾನ್ ಅವರು ಸದ್ಭಾವನಾ ದಿನಾಚರಣೆಯ ಮಹತ್ವ ಮತ್ತು ಪ್ರಸ್ತುತತೆಯ ಕುರಿತು ಮಾತನಾಡಿದರು.
ಈ ವೇಳೆಯಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳಲು, ವೈವಿಧ್ಯತೆಯನ್ನು ಗೌರವಿಸಲು ಮತ್ತು ಭಾರತದ ಏಕತೆ ಮತ್ತು ಸಮಗ್ರತೆಯನ್ನು ಬಲಪಡಿಸಲು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಐಕ್ಯೂಎಸಿ ಸಂಯೋಜಕ ಡಾ. ಪಿ.ಎಸ್.ಪಾಟೀಲ್, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಡಾ.ಮಿಲನ್ ರಾಠೋಡ, ಸಮಾಜಶಾಸ್ತ್ರದ ವಿಭಾಗದ ಮುಖ್ಯಸ್ಥ ಅಕ್ಷಯ್ ಜನಾಯ್ ಸೇರಿದಂತೆ ಮಹಾವಿದ್ಯಾಲಯದ ಬೋಧಕರು,ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

