ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಇದರ ಕೊಲ್ಹಾರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಕೆ.ಎಸ್. ಬಾಲಗೊಂಡ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸಂಗಮೇಶ ಜಂಗಮಶೆಟ್ಟಿ ಅವರನ್ನು ಆಯ್ಕೆ ಮಾಡಿ ಆದೇಶಿಸಲಾಗಿದೆ.
ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷರು ಹಾಗೂ ವಿಜಯಪುರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸುರೇಶ ಶೆಡಶ್ಯಾಳ ಅವರು ನೂತನ ಪದಾಧಿಕಾರಿಗಳ ನೇಮಕಾತಿ ಆದೇಶ ನೀಡಿದರು.
ಕೊಲ್ಹಾರ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ಕೆ.ಎಸ್. ಬಾಲಗೊಂಡ ಅವರನ್ನು ತಾಲ್ಲೂಕು ಅಧ್ಯಕ್ಷರಾಗಿ ಹಾಗೂ ರೋಣಿಹಾಳದ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿರುವ ಸಂಗಮೇಶ ಜಂಗಮಶೆಟ್ಟಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಸುರೇಶ ಶೆಡಶ್ಯಾಳ, ಬಿ.ಟಿ. ಗೌಡರ, ಶಿವಾನಂದ ಮಂಗನ್ನವರ, ಕರ್ನಾಟಕ ರಾಜ್ಯ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷೆ ಸುಮತಿ ಜಿ., ರಾಜ್ಯ ಉಪಾಧ್ಯಕ್ಷ ನಾಗನಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಂತೋಷ ಸಲಗರ, ಅತಿಥಿಗಳಾದ ನೀಲಾ ಇಂಗಳೇ, ಜಯಶ್ರೀ ಬೆಣ್ಣಿ, ಕಲಬುರಗಿ ಜಿಲ್ಲಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ವಿಜಯಪುರ ಜಿಲ್ಲಾ ಅಧ್ಯಕ್ಷ ಜಗದೀಶ ಬೋಳಸೂರ, ರವೀಂದ್ರ ಉಗಾರ ಸೇರಿದಂತೆ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಹಂತದ ಪದಾಧಿಕಾರಿಗಳು ಮತ್ತು ಜಿಲ್ಲೆಯ ಸರ್ಕಾರಿ ನೌಕರರು ಉಪಸ್ಥಿತರಿದ್ದರು.
ನೂತನ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆಗೆ ಸರ್ಕಾರಿ ನೌಕರರು ಅಭಿನಂದನೆ ಸಲ್ಲಿಸಿ, ಸಂಘದ ಬಲವರ್ಧನೆ ಹಾಗೂ ನೌಕರರ ಹಿತಾಸಕ್ತಿಗಾಗಿ ಉತ್ತಮವಾಗಿ ಕಾರ್ಯನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಪೋಟೊ:

