ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ೨೦೨೬-೨೭ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ನಿಗಮದ ವತಿಯಿಂದ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ ಹಾಗೂ ಫಾಸ್ಟ್ಫುಡ್ ಟ್ರಕ್, ಟ್ರೇಲರ್, ಮೊಬೈಲ್ ಅಡುಗೆಮನೆ- ಆಹಾರ ಮಳಿಗೆ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಅರ್ಜಿದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರಾಗಿದ್ದು, ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರು ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬ್ಯಾಂಕ್ ಖಾತೆ ಪುಸ್ತಕ ಸೇರಿದಂತೆ ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಆನ್ಲೈನ್ನಲ್ಲಿ ಸಲ್ಲಿಸಿದ ಅರ್ಜಿಯ ಮುದ್ರಿತ ಪ್ರತಿಯನ್ನು ಜಿಲ್ಲಾ ಕಚೇರಿಗೆ ಸಲ್ಲಿಸುವ ಅಗತ್ಯವಿಲ್ಲ. ಆಸಕ್ತರು ನಿಗಮದ ಅಧಿಕೃತ ವೆಬ್ಸೈಟ್ hಣಣಠಿs://ಞಛಿಛಿಜಛಿಟoಟಿಟiಟಿe.ಏಚಿಡಿಟಿಚಿಣಚಿಞಚಿ.gov.iಟಿ/Poಡಿಣಚಿಟ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೩೦ ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಕೆ ಹಾಗೂ ಯೋಜನೆಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ,ಮೌಲಾನಾ ಆಜಾದ್ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ೦೮೩೫೨-೨೭೮೩೪೪ ದೂರವಾಣಿ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
