ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕನ್ನಡ ಮತ್ತು ಸಂಸ್ಕರತಿ ಇಲಾಖೆಯಿಂದ ನಡೆಯುವ ಕಾರ್ಯಕ್ರಮಗಳಲ್ಲಿ ಅನೇಕ ಕಲಾ ತಂಡಗಳಿಗೆ ಅವಕಾಶ ನೀಡಲಾಗುತ್ತಿದೆ. ಜಿಲ್ಲೆಯಲ್ಲಿರುವ ಕಲಾವಿದರ ಹಾಗೂ ಕಲಾ ತಂಡಗಳ ಸಮಗ್ರ ಪಟ್ಟಿಯನ್ನು ಸಿದ್ಧಪಡಿಸಿ ಅವರಿಗೆ ಸೂಕ್ತ ಕಾರ್ಯಕ್ರಮಗಳಲ್ಲಿ ಅವಕಾಶ ಕಲ್ಪಿಸಲು ಹಾಗೂ ಕಲಾವಿದರ ಪಟ್ಟಿ ಸಿದ್ಧಪಡಿಸಿ ಅವರಿಗೆ ಗುರುತಿನ ಚೀಟಿ ನೀಡುವ ಉದ್ದೇಶದಿಂದ ವಿವರಗಳನ್ನು ಆಹ್ವಾನಿಸಿದೆ.
ಕಲಾವಿದರು ಸೆ.೧ ರಿಂದ ಸೆ.೩೦ರೊಳಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಿಗದಿಪಡಿಸಿದ ನಮೂನೆ ಪಡೆದುಕೊಂಡು ಆಧಾರ ಕಾರ್ಡ್, ಚುನಾವಣಾ ಗುರತಿನ ಚೀಟಿ, ಪಡಿತರ ಚೀಟಿ, ಸಂಘ ಸಂಸ್ಥೆಗಳಿಂದ ಪಡೆದ ಪ್ರಶಸ್ತಿ-ಪುರಸ್ಕಾರ ವಿವರ, ಪ್ರಮುಖ ಪ್ರದರ್ಶನ ಮತ್ತು ಕಲಾ ಚಟುವಟಿಕೆಗಳ ವಿವರಗಳೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ,ಸ್ಟೇಶನ್ ರಸ್ತೆ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೩೫೨೫೧೨೬೧ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
