ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದದಿಂದ ಸಿಎಂ ಗೆ ಮನವಿ
ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ವಿಜಯಪುರ ಜಿಲ್ಲೆಯನ್ನು 371ಜೆ ಮೀಸಲಾತಿ ಅಡಿ ಸೇರಿಸಲು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದದಿಂದ ತಹಶೀಲ್ದಾರ ಅವರ ಮೂಲಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಕಲ್ಲಯ್ಯ ಸಾಲಿಮಠ ಅವರು ಮಾತನಾಡಿ, ಅಖಂಡ ಹೈದ್ರಾಬಾದ್ ಪ್ರಾಂತದ ಭಾಗವಾಗಿದ್ದ ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಕೈಬಿಟ್ಟದ್ದಕ್ಕೆ ಜಿಲ್ಲೆಯ ಜನರಿಗೆ ಅನ್ಯಾಯವಾಗಿದೆ .ಕೂಡಲೇ ಜಿಲ್ಲೆಯ ಶಾಸಕರು ಸಚಿವರು, ಸಂಸದರು, ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ 371(ಜೆ ) ಮೀಸಲಾತಿಗೆ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಬೇಕೆಂದು ಆಗ್ರಹಿಸಿದರು.
ಜಿಲ್ಲೆಯ ಸಾರಿಗೆ ವ್ಯವಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಡಿ ಇದೆ,ನ್ಯಾಯಾಂಗ ವ್ಯವಸ್ಥೆ ಕೂಡಾ ಕಲ್ಬುರ್ಗಿ ಉಚ್ಛ ನ್ಯಾಯಾಲಯದಡಿ, ಪುರಾತತ್ವ ಪ್ರಾಚ್ಯವಸ್ತು ಸಂಗ್ರಹಾಲಯ, ನೀರಾವರಿ ಕೃಷ್ಣಾ ಕಾಡಾ ಸೇರಿ ಹಲವು ಇಲಾಖೆಗಳು ಕಲಬುರಗಿ ವಿಭಾಗದಲ್ಲಿವೆ ಒಂದೇ ಇತಿಹಾಸ, ಸಂಸ್ಕೃತಿ, ಆಡಳಿತ ಹಿನ್ನೆಲೆ ಹೊಂದಿದೆ ಜೊತೆಗೆ ನಂಜುಂಡಪ್ಪ ವರದಿಯಲ್ಲಿ ಅತ್ಯಂತ ಹಿಂದುಳಿದ ಜಿಲ್ಲೆ ಎಂದು ದಾಖಲಾದ ವಿಜಯಪುರ ಜಿಲ್ಲೆಯನ್ನು ಕೂಡಲೇ 371 ಜೆ ಅಡಿ ಸೇರಿಸಿ ಜಿಲ್ಲೆಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.
ಮುಖಂಡ ಶಿವಪ್ಪ ಶಿರಹಟ್ಟಿ ಮಾತನಾಡಿ, ಕೂಡಲೇ ಜಿಲ್ಲೆಯ ಸಚಿವರು ಶಾಸಕರು ಹೋರಾಟದ ನೇತೃತ್ವದ ತೆಗೆದುಕೊಂಡು ವಿಜಯಪುರ ಜಿಲ್ಲೆಗೆ 371 (ಜೆ) ಮೀಸಲಾತಿ ಒದಗಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗಣಿ ಮುಲ್ಲಾ, ಯಾಕೂಬ್ ಮಕಾನದಾರ, ಶಂಕರ ಪೂಜಾರಿ, ಸಂತೋಷ ತೇಲಿ, ಶಬ್ಬೀರ್ ಬಾಬಾನಗರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

