ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಜಯಪುರ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಸಂಘದ ಜಿಲ್ಲಾ ಘಟಕದ ಗೌರವ ಸಲಹೆಗಾರರಾಗಿ ಬಸಯ್ಯ ಹಿರೇಮಠ, ಗೌರವಾಧ್ಯಕ್ಷರಾಗಿ ಎಂ.ಎಸ್. ಭೂಸಗೊಂಡ, ಕಾರ್ಯಾಧ್ಯಕ್ಷರಾಗಿ ಆರ್.ಎಂ. ರಜಪೂತ, ಅಧ್ಯಕ್ಷರಾಗಿ ಜಗದೀಶ ಬೋಳಸೂರ, ಉಪಾಧ್ಯಕ್ಷರಾಗಿ ರಾಯಪ್ಪ ಇವಣಗಿ ಹಾಗೂ ಮಹಿಳಾ ಉಪಾಧ್ಯಕ್ಷರಾಗಿ ಶ್ರೀಮತಿ ಎಸ್.ಎಂ. ಬಾಟಿ ಅವರನ್ನು ನೇಮಕ ಮಾಡಲಾಗಿದೆ.
ಕೋಶಾಧ್ಯಕ್ಷರಾಗಿ ಎನ್.ಆರ್. ಪಾಟೀಲ, ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ಉಗಾರ, ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಶೈಲಶ್ರ್ರಿ ಯಡ್ರಾಮಿ, ಸಂಘಟನಾ ಕಾರ್ಯದರ್ಶಿಯಾಗಿ ಝಡ್.ಆಯ್ ಇಂಡಿಕರ್, ಮಹಿಳಾ ಸಹಕಾರ್ಯದರ್ಶಿಯಾಗಿ ಶ್ರೀಮತಿ ಅಂಬಿಕಾ ಗೋಗಿ ಹಾಗೂ ಸಹಕಾರ್ಯದರ್ಶಿಯಾಗಿ ವಿ.ಎಲ್. ಆಗಸರ್ ಅವರನ್ನು ನೇಮಕ ಮಾಡಲಾಗಿದೆ.
ನೂತನ ಪದಾಧಿಕಾರಿಗಳು ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದು, ಶಿಕ್ಷಕರ ಹಕ್ಕು ಹಿತಾಸಕ್ತಿಗಳ ರಕ್ಷಣೆಗೆ ಶ್ರಮಿಸುವುದು ಹಾಗೂ ಸಂಘದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವದು. ಸಂಘದ ಚಟುವಟಿಕೆಗಳಲ್ಲಿ ಎಲ್ಲ ಪದಾಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಂಡು ಸಂಘದ ಉದ್ದೇಶಗಳನ್ನು ಯಶಸ್ವಿಗೊಳಿಸುವಂತೆ ಸಂಘದ ರಾಜ್ಯ ಘಟಕ ಮನವಿ ಮಾಡಿದೆ.
