Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್ಐಆರ್ ಪೂರ್ಣ: ಸೆ.23ರೊಳಗೆ ಆಕ್ಷೇಪಣೆ ಸಲ್ಲಿಸಿ :ಭೋಸಗಿ

ಮಕ್ಕಳಿಗೆ ಸಂಸ್ಕಾರ ನೀಡುವ ಬಾಲಭಾರತಿ ಶಾಲೆ ಕಾರ್ಯ ಶ್ಲಾಘನೀಯ

ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್ಐಆರ್: ಅರ್ಹ ಮತದಾರರ ಹಕ್ಕು ರಕ್ಷಣೆಗೆ ಮತ ಕಾವಲು ಸಮಿತಿ ಆಗ್ರಹ
(ರಾಜ್ಯ ) ಜಿಲ್ಲೆ

ಎಸ್ಐಆರ್: ಅರ್ಹ ಮತದಾರರ ಹಕ್ಕು ರಕ್ಷಣೆಗೆ ಮತ ಕಾವಲು ಸಮಿತಿ ಆಗ್ರಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲೆಯಲ್ಲಿ ಎಸ್ಐಆರ್ ಹೆಸರಿನಲ್ಲಿ 2.97 ಲಕ್ಷ ಮತದಾರರು ಪಟ್ಟಿಯಿಂದ ಹೊರಗೆ | ಮತ ಕಾವಲು ಸಮಿತಿ ಆಕ್ಷೇಪ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಸಂಭವಿಸಿರುವ ಭಾರೀ ಬದಲಾವಣೆಗಳ ಕುರಿತು ಜಿಲ್ಲೆಯ SIR ಹೋರಾಟ ಸಮಿತಿ ಹಾಗೂ ಮತ ಕಾವಲು ಸಮಿತಿ ತೀವ್ರ ಆತಂಕ ಮತ್ತು ಆಕ್ಷೇಪ ವ್ಯಕ್ತಪಡಿಸಿದೆ.
ಈ ಕುರಿತು ನಗರದಲ್ಲಿ ಜಂಟಿ ಸುದ್ದಿಗೋಷ್ಟಿ ನಡೆಸಿದ ಮುಖಂಡರಾದ ಭೋಗೇಶ ಸೊಲಾಪೂರ, ಮೊಹಮ್ಮದ್ ಖದೀರ್, ಲಕ್ಷ್ಮಣ್ ಹಂದ್ರಾಳ, ಡಾ. ಗುರಿಕರ ಅವರು ಮಾತನಾಡಿ, ಮತದಾರರ ಪಟ್ಟಿಯನ್ನು ಶುದ್ಧೀಕರಿಸುವುದು ಅಗತ್ಯವಾದರೂ, ಆ ಪ್ರಕ್ರಿಯೆಯಲ್ಲಿ ಒಬ್ಬನೇ ಒಬ್ಬ ಅರ್ಹ ಮತದಾರನ ಮತದಾನದ ಹಕ್ಕು ಕಳೆದುಹೋಗಬಾರದು ಎಂಬುದು ಮತ ಕಾವಲು ಸಮಿತಿಯ ಸ್ಪಷ್ಟ ನಿಲುವಾಗಿದೆ. ವಿಜಯಪುರ ಜಿಲ್ಲೆಯಲ್ಲಿ SIR ಪ್ರಕ್ರಿಯೆಯ ಮೊದಲ ಹಂತದಲ್ಲಿ ಒಟ್ಟು 19,82,114 ಮತದಾರರಿಗೆ ಎನ್ಯೂಮರೇಷನ್ ಫಾರಂಗಳನ್ನು ವಿತರಿಸಲಾಗಿತ್ತು. ಈ ಪೈಕಿ 16,84,968 ಫಾರಂಗಳು ಡಿಜಿಟಲೀಕರಣಗೊಂಡಿದ್ದು, ಒಟ್ಟು 2,97,147 ಮತದಾರರು ವಿವಿಧ ಕಾರಣಗಳಿಂದ ಕರಡು ಪಟ್ಟಿಯಿಂದ ಹೊರಗುಳಿದಿದ್ದಾರೆ. ಇವರಲ್ಲಿ 1,52,169 ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡವರು, 59,093 ಗೈರು ಮತ್ತು 30,692 ಮತದಾರರು ಡುಪ್ಲಿಕೇಟ್ ಎಂದು ಗುರುತಿಸಲಾಗಿದೆ. ಇದು ಕೇವಲ ಅಂಕಿಅಂಶವಲ್ಲ. ಇದರ ಹಿಂದೆ ವಿಜಯಪುರ ಜಿಲ್ಲೆಯ ಸಾವಿರಾರು ಕುಟುಂಬಗಳ ಮತದಾನದ ಹಕ್ಕು ಅಡಗಿದೆ. ವಿಜಯಪುರ ನಗರ ಕ್ಷೇತ್ರದಲ್ಲಿ 79,737 ಮತದಾರರು ಪಟ್ಟಿಯಿಂದ ಹೊರಗುಳಿದಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಈ ಬಗ್ಗೆ ಸಂಪೂರ್ಣ ಪಾರದರ್ಶಕತೆ ಮತ್ತು ಸ್ಪಷ್ಟತೆ ನೀಡಬೇಕು. ಅರ್ಹ ಮತದಾರರ ಹೆಸರುಗಳನ್ನು ವೈಯಕ್ತಿಕ ಪರಿಶೀಲನೆ ಹಾಗೂ ಸಮರ್ಪಕ ಅವಕಾಶವಿಲ್ಲದೆ ಕೈಬಿಡಬಾರದು. ಒಬ್ಬನೇ ಒಬ್ಬ ಅರ್ಹ ಮತದಾರನ ಮತದಾನದ ಹಕ್ಕು ಕಳೆದುಹೋಗದಂತೆ ಮತ ಕಾವಲು ಸಮಿತಿ ವತಿಯಿಂದ ಕಾನೂನುಬದ್ಧ ಮತ್ತು ಪ್ರಜಾಸತ್ತಾತ್ಮಕ ಹೋರಾಟವನ್ನು ಮುಂದುವರಿಸಲಾಗುವುದು” ಎಂದು ಹೇಳಿದರು.
ಅರ್ಹ ಮತದಾರರ ಹಕ್ಕುಗಳನ್ನು ರಕ್ಷಿಸುವವರೆಗೆ ಮತ ಕಾವಲು ಸಮಿತಿ ತನ್ನ ಪ್ರಜಾಸತ್ತಾತ್ಮಕ ಮತ್ತು ಕಾನೂನುಬದ್ಧ ಹೋರಾಟವನ್ನು ಮುಂದುವರಿಸಲಿದೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಮತ ಕಾವಲು ಸಮಿತಿಯ ಸದಸ್ಯರಾದ ಅಕ್ರಮ ಮಾಶಾಲ್ಕರ್, ಫಯಾಜ್ ಕಲಾದಗಿ, ನೀಲಂಬಿಕಾ ಬಿರಾದಾರ್, ಶ್ರೀನಾಥ್ ಪೂಜಾರಿ ಉಪಸ್ಥಿತರಿದ್ದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್ಐಆರ್ ಪೂರ್ಣ: ಸೆ.23ರೊಳಗೆ ಆಕ್ಷೇಪಣೆ ಸಲ್ಲಿಸಿ :ಭೋಸಗಿ

ಮಕ್ಕಳಿಗೆ ಸಂಸ್ಕಾರ ನೀಡುವ ಬಾಲಭಾರತಿ ಶಾಲೆ ಕಾರ್ಯ ಶ್ಲಾಘನೀಯ

ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!

ಮೂರು ತಾಲೂಕುಗಳಿಗೆ ಮಾತ್ರ ಬರ ಘೋಷಣೆಗೆ ಆಕ್ರೋಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್ಐಆರ್ ಪೂರ್ಣ: ಸೆ.23ರೊಳಗೆ ಆಕ್ಷೇಪಣೆ ಸಲ್ಲಿಸಿ :ಭೋಸಗಿ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರ ನೀಡುವ ಬಾಲಭಾರತಿ ಶಾಲೆ ಕಾರ್ಯ ಶ್ಲಾಘನೀಯ
    In (ರಾಜ್ಯ ) ಜಿಲ್ಲೆ
  • ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!
    In (ರಾಜ್ಯ ) ಜಿಲ್ಲೆ
  • ಮೂರು ತಾಲೂಕುಗಳಿಗೆ ಮಾತ್ರ ಬರ ಘೋಷಣೆಗೆ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅರ್ಹ ಮತದಾರರ ಹಕ್ಕು ರಕ್ಷಣೆಗೆ ಮತ ಕಾವಲು ಸಮಿತಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ನುಲಿಯ ಚಂದಯ್ಯ ಜಯಂತಿ ಅರ್ಥಪೂರ್ಣ ಆಚರಣೆ
    In (ರಾಜ್ಯ ) ಜಿಲ್ಲೆ
  • ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಸೆ.೧೫ ವರೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಕರ್ತವ್ಯದ ಜೊತೆ ಬಾಂಧವ್ಯಕ್ಕೂ ಬೆಲೆ; ಸಿಬ್ಬಂದಿಗೆ ರಾಖಿ ಕಟ್ಟಿದ ಅಧಿಕಾರಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ರಾವುತರಾಯನ ಅಲಂಕಾರ ಕಾರ್ಯ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.