Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್ಐಆರ್ ಪೂರ್ಣ: ಸೆ.23ರೊಳಗೆ ಆಕ್ಷೇಪಣೆ ಸಲ್ಲಿಸಿ :ಭೋಸಗಿ

ಮಕ್ಕಳಿಗೆ ಸಂಸ್ಕಾರ ನೀಡುವ ಬಾಲಭಾರತಿ ಶಾಲೆ ಕಾರ್ಯ ಶ್ಲಾಘನೀಯ

ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್ಐಆರ್ ಪೂರ್ಣ: ಸೆ.23ರೊಳಗೆ ಆಕ್ಷೇಪಣೆ ಸಲ್ಲಿಸಿ :ಭೋಸಗಿ
(ರಾಜ್ಯ ) ಜಿಲ್ಲೆ

ಎಸ್ಐಆರ್ ಪೂರ್ಣ: ಸೆ.23ರೊಳಗೆ ಆಕ್ಷೇಪಣೆ ಸಲ್ಲಿಸಿ :ಭೋಸಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ಒಟ್ಟು 2,43,842 ಎನ್ಯೂಮರೇಷನ್‌ ಫಾರ್ಮ್‌ಗಳನ್ನು ವಿತರಿಸಲಾಗಿದ್ದು, ಶೇ.100ರಷ್ಟು ಫಾರ್ಮ್‌ ವಿತರಣೆ ಹಾಗೂ ಸಂಗ್ರಹಣೆ ಕಾರ್ಯ ಪೂರ್ಣಗೊಂಡಿದೆ. ಈ ಪೈಕಿ 2,23,002 ಫಾರ್ಮ್‌ಗಳನ್ನು (91.45%) ಡಿಜಿಟಲೀಕರಣಗೊಳಿಸಲಾಗಿದೆ ಎಂದು ಅಥಣಿ ತಾಲೂಕು ದಂಡಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಸಿದರಾಯ ಭೋಸಗಿ ತಿಳಿಸಿದ್ದಾರೆ.
ಅವರು ಪಟ್ಟಣದ ತಾಲೂಕಾ ಆಡಳಿತ ಸೌದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ಒಟ್ಟು 2,31,096 ಮತದಾರರು ಇದ್ದು, ಜೂನ್ 30ರಿಂದ ಆಗಸ್ಟ್ 17ರವರೆಗೆ ಎನ್ಯೂಮರೇಷನ್‌ ಫಾರ್ಮ್‌ ವಿತರಣೆ ಮತ್ತು ಸಂಗ್ರಹಣೆ ಕಾರ್ಯ ನಡೆಯಿತು. ಡಿಜಿಟಲೀಕರಣಗೊಂಡ ಮಾಹಿತಿಯ ಪರಿಶೀಲನೆಯಲ್ಲಿ 20,840 ಪ್ರಕರಣಗಳು ASDD ಪಟ್ಟಿಯಲ್ಲಿ ದಾಖಲಾಗಿವೆ.
ಇದೇ ವೇಳೆ, ಪರಿಶೀಲನಾ ಪ್ರಕ್ರಿಯೆಯಲ್ಲಿ 1,232 ಗೈರು ಮತದಾರರು, 10,668 ಶಾಶ್ವತವಾಗಿ ವಲಸೆ ಹೋದ ಮತದಾರರು, 5,561 ಮೃತ ಮತದಾರರು ಹಾಗೂ 3,376 ಪುನರಾವರ್ತಿತ ಮತದಾರರು ಎಂದು ಗುರುತಿಸಲಾಗಿದೆ. ಇತರ ಕಾರಣಗಳಿಗೆ ಸಂಬಂಧಿಸಿದಂತೆ 3 ಪ್ರಕರಣಗಳು ದಾಖಲಾಗಿವೆ.
ಮತದಾರರ ಮಾಹಿತಿಯ ಪರಿಶೀಲನೆಯಲ್ಲಿ 2,501 ಲಾಜಿಕಲ್ ಎರರ್ಸ್‌ ಹಾಗೂ 1,419 ನೋ-ಲಿಂಕೇಜ್‌ ಪ್ರಕರಣಗಳು ಸೇರಿದಂತೆ ಒಟ್ಟು 3,920 ಪ್ರಕರಣಗಳು ಪತ್ತೆಯಾಗಿದ್ದು, ಇವುಗಳ ಕುರಿತು ಅಗತ್ಯ ಪರಿಶೀಲನೆ ಹಾಗೂ ತಿದ್ದುಪಡಿ ಕ್ರಮ ಕೈಗೊಳ್ಳಲಾಗುತ್ತಿದೆ.
ಮತದಾರರ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ 23ರವರೆಗೆ ಅವಕಾಶ ಕಲ್ಪಿಸಲಾಗಿದೆ. ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಸಲ್ಲಿಕೆಯಾಗುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ಅಕ್ಟೋಬರ್ 22ರವರೆಗೆ ಪರಿಶೀಲಿಸಿ ವಿಲೇವಾರಿ ಮಾಡಲಾಗುವುದು ಎಂದು ಸಿದರಾಯ ಭೋಸಗಿ ತಿಳಿಸಿದ್ದಾರೆ.
ಇದಲ್ಲದೆ, ಅಥಣಿ ವಿಧಾನಸಭಾ ಮತಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಗ್ರಾಮ ಪಂಚಾಯಿತಿ, ಗ್ರಾಮ ಚಾವಡಿ ಹಾಗೂ ಸಂಬಂಧಿಸಿದ ಮತಗಟ್ಟೆಗಳಲ್ಲಿ ಸಾರ್ವಜನಿಕರ ಪರಿಶೀಲನೆಗಾಗಿ ಪ್ರಕಟಿಸಲಾಗಿದೆ. ಮತದಾರರು ಕರಡು ಪಟ್ಟಿಯಲ್ಲಿ ತಮ್ಮ ಹೆಸರು ಹಾಗೂ ವಿವರಗಳನ್ನು ಪರಿಶೀಲಿಸಿಕೊಳ್ಳಬೇಕು. ಒಂದು ವೇಳೆ ಅರ್ಹ ವ್ಯಕ್ತಿಯ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಬಿಟ್ಟುಹೋಗಿದ್ದರೆ, ಸಂಬಂಧಿಸಿದ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ನಮೂನೆ–6ರಲ್ಲಿ ಅರ್ಜಿ ಸಲ್ಲಿಸುವ ಮೂಲಕ ಹೆಸರನ್ನು ಮರು ಸೇರ್ಪಡೆ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಿಗೆ ಸಂಸ್ಕಾರ ನೀಡುವ ಬಾಲಭಾರತಿ ಶಾಲೆ ಕಾರ್ಯ ಶ್ಲಾಘನೀಯ

ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!

ಮೂರು ತಾಲೂಕುಗಳಿಗೆ ಮಾತ್ರ ಬರ ಘೋಷಣೆಗೆ ಆಕ್ರೋಶ

ಎಸ್ಐಆರ್: ಅರ್ಹ ಮತದಾರರ ಹಕ್ಕು ರಕ್ಷಣೆಗೆ ಮತ ಕಾವಲು ಸಮಿತಿ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್ಐಆರ್ ಪೂರ್ಣ: ಸೆ.23ರೊಳಗೆ ಆಕ್ಷೇಪಣೆ ಸಲ್ಲಿಸಿ :ಭೋಸಗಿ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರ ನೀಡುವ ಬಾಲಭಾರತಿ ಶಾಲೆ ಕಾರ್ಯ ಶ್ಲಾಘನೀಯ
    In (ರಾಜ್ಯ ) ಜಿಲ್ಲೆ
  • ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!
    In (ರಾಜ್ಯ ) ಜಿಲ್ಲೆ
  • ಮೂರು ತಾಲೂಕುಗಳಿಗೆ ಮಾತ್ರ ಬರ ಘೋಷಣೆಗೆ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅರ್ಹ ಮತದಾರರ ಹಕ್ಕು ರಕ್ಷಣೆಗೆ ಮತ ಕಾವಲು ಸಮಿತಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ನುಲಿಯ ಚಂದಯ್ಯ ಜಯಂತಿ ಅರ್ಥಪೂರ್ಣ ಆಚರಣೆ
    In (ರಾಜ್ಯ ) ಜಿಲ್ಲೆ
  • ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಸೆ.೧೫ ವರೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಕರ್ತವ್ಯದ ಜೊತೆ ಬಾಂಧವ್ಯಕ್ಕೂ ಬೆಲೆ; ಸಿಬ್ಬಂದಿಗೆ ರಾಖಿ ಕಟ್ಟಿದ ಅಧಿಕಾರಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ರಾವುತರಾಯನ ಅಲಂಕಾರ ಕಾರ್ಯ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.