ಇಂಡಿಯಲ್ಲಿ ವಿವಿಧ ಸಂಘಟನೆಗಳ ಒಕ್ಕೂಟಗಳ ನೇತೃತ್ವದಲ್ಲಿ ಸರ್ಕಾರಕ್ಕೆ ಮನವಿ
ಉದಯರಶ್ಮಿ ದಿನಪತ್ರಿಕೆ
ಇಂಡಿ: ಹಿರಿಯ ಪತ್ರಕರ್ತ ಪರಶುರಾಮ ಶಿವಶರಣ ಅವರ ಮನೆಗೆ ನುಗ್ಗಿ ದುಷ್ಕರ್ಮಿಗಳು ಕುಂಟುಂಬಸ್ಥರಿಗೆ ಧಮ್ಕಿ ಹಾಕಿದ ಪ್ರಕರಣವನ್ನು ಖಂಡಿಸಿ, ವಿವಿಧ ಸಂಘಟನೆಗಳ ಒಕ್ಕೂಟಗಳ ನೇತೃತ್ವದಲ್ಲಿ ಶನಿವಾರ ಕಂದಾಯ ಉಪ ವಿಭಾಗಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರವೇ ತಾಲೂಕಾಧ್ಯಕ್ಷ ಬಾಳು ಮುಳಜಿ, ಜೆಡಿಎಸ್ ಮುಖಂಡ ಡಾ.ರಮೇಶ್ ರಾಠೋಡ, ಬಿಜೆಪಿ ಮುಖಂಡ ಅದೃಶ್ಯಪ್ಪ ವಾಲಿ, ರೈತ ಸಂಘದ ಜಿಲ್ಲಾಧ್ಯಕ್ಷ ಎಸ್. ಬಿ. ಕೆಂಬೋಗಿ, ಪತ್ರಕರ್ತ ಶರಣು ಕಾಂಬಳೆ ಮಾತನಾಡಿ, ಸತ್ಯವನ್ನು ಸಮಾಜಕ್ಕೆ ತಿಳಿಸುವ ಪತ್ರಕರ್ತರ ಧ್ವನಿ ಅಡಗಿಸುವ ಪ್ರಯತ್ನ ನಡೆಯುತ್ತಿದೆ. ಇಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಅನ್ನ ಭಾಗ್ಯ ಅಕ್ಕಿ ಕಳ್ಳಸಾಗಣೆ ದಂಧೆಯ ಹಿಂದೆ ದೊಡ್ಡ ಜಾಲವೇ ಇರುವ ಶಂಕೆಯಿದೆ. ಈ ಪ್ರಕರಣದ ಸಮಗ್ರ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಮುಕ್ತ ಮತ್ತು ನಿರ್ಭೀತ ಪತ್ರಿಕೋದ್ಯಮಕ್ಕೆ ಧಕ್ಕೆ ತರುವ ಶಕ್ತಿಗಳನ್ನು ಒಟ್ಟಾಗಿ ಎದುರಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಪ್ರಕಾಶ ಬಿರಾದಾರ, ಸಿದ್ದು ಡಂಗಾ, ಶಿವಾನಂದ ಕಲ್ಲೊಳ್ಳಿ, ಸಂಜೀವ ದಶವಂತ, ಲಕ್ಷ್ಮಣ ಲಾಳಸಂಗಿ, ಅಂಬುರಾಯ ಕವಟಗಿ, ರೇವಣ್ಣ ಹತ್ತಳ್ಳಿ, ದುಂಡು ಬಿರಾದಾರ, ಬಿ.ಡಿ. ಇನಾಮದಾರ, ವಿಲಾಸ ಉಮರ್ಜಿ, ಮಲ್ಲು ಗುಡ್ಲ, ಮಹೇಶ ಹೂಗಾರ, ವಿಠೋಬಾ ಗುಡ್ಲ, ಶಾಂತಯ್ಯ ಮಠ, ಮಲ್ಲು ಬಿರಾದಾರ,
ಪತ್ರಕರ್ತರಾದ ಉಮೇಶ ಬಳಬಟ್ಟಿ, ಯಲಗೊಂಡ ಬೇವನೂರ, ಖಾಜು ಸಿಂಗೆಗೋಳ, ಶಂಕರ ಜಮಾದಾರ, ನಿಂಗನಗೌಡ ಬಿರಾದಾರ, ಸಚಿನ ಇಂಡಿ, ಆನಂದ ಗಣಾಚಾರಿ, ಮಲ್ಲಿಕಾರ್ಜುನ ಹಾವಿನಾಳಮಠ, ತುಕಾರಾಮ ಪವಾರ, ಅರವಿಂದ ಕಾಂಬಳೆ, ಆನಂದ ಅಗರಖೇಡ, ಫಯಾಜ ಬಾಗವಾನ, ಸಿದ್ದು ಹತ್ತಳ್ಳಿ, ಅಲ್ಲಾಭಕ್ಷ ಗೋರೆ, ಲಾಲಸಿಂಗ ರಾಠೋಡ ಸೇರಿದಂತೆ ಇನ್ನಿತರರು ಇದ್ದರು.

